AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ದೊಡ್ಡ ಗಣಪನ ದೇಗುಲ ಗೋಪುರದಲ್ಲಿ ಬಿರುಕು: ಪತ್ರ ಬರೆದ್ರೂ ಕ್ರಮಕೈಗೊಳ್ಳದ ಪುರಾತತ್ವ ಇಲಾಖೆ?

basavanagudi dodda ganesha temple: ಬೆಂಗಳೂರಿನ ಐತಿಹಾಸಿಕ ಬಸವನಗುಡಿ ದೊಡ್ಡ ಗಣಪನ ದೇಗುಲದ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸರಿಯಾದ ನಿರ್ವಹಣೆಯಿಲ್ಲದೇ ವಿಮಾನಗೋಪುರದಲ್ಲಿ ಬಿರುಕು ಬಿಟ್ಟಿದೆ. ಗೋಪುರದ ಸ್ಥಿತಿ ಬಗ್ಗೆ 3 ತಿಂಗಳ ಹಿಂದೆಯೇ ದೇಗುಲದ ಆಡಳಿತ ಮಂಡಳಿ ಪುರಾತತ್ವ ಇಲಾಖೆಗೆ ಪತ್ರ ಬರೆದಿದೆ. ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಡಳಿತ ಮಂಡಳಿ ಆರೋಪಿಸಿದೆ.

ಬಸವನಗುಡಿ ದೊಡ್ಡ ಗಣಪನ ದೇಗುಲ ಗೋಪುರದಲ್ಲಿ ಬಿರುಕು: ಪತ್ರ ಬರೆದ್ರೂ ಕ್ರಮಕೈಗೊಳ್ಳದ ಪುರಾತತ್ವ ಇಲಾಖೆ?
ದೊಡ್ಡ ಗಣಪನ ದೇಗುಲದ ಗೋಪುರದಲ್ಲಿ ಬಿರುಕು
Poornima Agali Nagaraj
| Edited By: |

Updated on:Dec 04, 2023 | 3:08 PM

Share

ಬೆಂಗಳೂರು, ಡಿಸೆಂಬರ್​​ 04: ಸೂಕ್ತ ನಿರ್ವಹಣೆ ಮಾಡದ ಹಿನ್ನೆಲೆ ಬೆಂಗಳೂರಿನ ಐತಿಹಾಸಿಕ ದೇಗುಲ ಬಸವನಗುಡಿಯಲ್ಲಿರುವ ದೊಡ್ಡ ಗಣೇಶ ದೇವಸ್ಥಾನದ (dodda ganesha temple) ವಿಮಾನಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಕುರಿತಾಗಿ ಪತ್ರ ಬರೆದರೂ ಪುರಾತತ್ವ ಇಲಾಖೆ ಇನ್ನೂ ಕ್ರಮಕೈಗೊಂಡಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ‌ ಆರೋಪಿಸಿದೆ. ಅಲ್ಲದೇ ಮಳೆ ಏನಾದರೂ ಬಂದರೆ ಬಿಟ್ಟಿರುವ ಬಿರುಕು ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ.‌ ಹೀಗಾಗಿ ಆದಷ್ಟು ಬೇಗ ಗೋಪುರ ಸರಿಪಡಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ‌ ಮನವಿ ಮಾಡಿದೆ.

ಕಳೆದ 8 ವರ್ಷಗಳಿಂದ ದೇವಸ್ಥಾನಕ್ಕೆ ಸುಣ್ಣ, ಬಣ್ಣವೇ ಆಗಿಲ್ಲ ಎಂದು ದೇವಸ್ಥಾನದ ಅಧಿಕಾರಿಗಳು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಕಡಲೆಕಾಯಿ ಪರಿಷೆ ವೇಳೆ ಲಕ್ಷಾಂತರ ಜನರು ಆಗಮಿಸುತ್ತಾರೆ.

ಇದನ್ನೂ ಓದಿ: ಇಂದಿನಿಂದ ಮಲ್ಲೇಶ್ವರದಲ್ಲಿ ಕಡಲೆಕಾಯಿ ಪರಿಷೆ ಶುರು; ಕೈ ಬೀಸಿ ಕರೆಯುತ್ತಿದ್ದಾನೆ 800 ಕೆಜಿ‌ಯ ಕಡಲೆಕಾಯಿ ಬಸವ

ವಿಶಾಲ ಪ್ರದೇಶದಲ್ಲಿ ದೊಡ್ಡ ಗಣೇಶನ ಸುಂದರ ದೇವಾಲಯವಿದೆ. ಗರ್ಭಗುಡಿಯಲ್ಲಿ ಏಕಶಿಲೆಯಲ್ಲಿ ಕಡೆದ 8 ಅಡಿ ಎತ್ತರ ಹಾಗೂ 12 ಅಡಿ ಅಗಲ ಇರುವ ಸುಂದರವಾದ ಗಣೇಶನ ವಿಗ್ರಹವಿದೆ. ಈ ಗಣಪ ಸ್ವಯಂಭು, ಉದ್ಭವ ಗಣಪ ಎಂತಲೂ ಹೇಳುತ್ತಾರೆ.

ಪತ್ರದಲ್ಲಿ ಏನಿದೆ?

ದೊಡ್ಡಬಸವಣ್ಣ ದೇವಾಲಯವು ಪುರಾತತ್ವ ಇಲಾಖಾ ವ್ಯಾಪ್ತಿಗೆ ಒಳಪಟ್ಟಿದ್ದು, ದೇವಾಲಯದ ಆಡಳಿತವನ್ನು ಧಾರ್ಮಿಕ ದತ್ತಿ ಇಲಾಖಾ ವತಿಯಿಂದ ಕೈಗೊಳ್ಳಲಾಗುತ್ತಿದೆ. ದೇವಾಲಯದ ವಿಮಾನ ಗೋಪುರ ದಕ್ಷಿಣ ದಿಕ್ಕಿನ ಕೆಲವು ಭಾಗದಲ್ಲಿ ಬಿರುಕು ಬಿಟ್ಟು ದುರಸ್ಥಿಯಾಗಿರುವ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಗೆ ಬಿರುಕು ಬಿಟ್ಟಿರುವುದಾಗಿ ಪತ್ರದ ಮೂಲಕ ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಬಸವನಗುಡಿ ಮತ್ತು ಗರುಡಾ ಮಾಲ್​​ನಲ್ಲಿ ಈ ಬಾರಿ ವಿಶಿಷ್ಟವಾಗಿ ಗೊಂಬೆಗಳ ಪ್ರದರ್ಶನ

ಗೋಪುರದಲ್ಲಿರುವ ಸಣ್ಣ-ಪುಟ್ಟ ರಿಪೇರಿಗಳನ್ನು ಪುರಾತತ್ವ ಇಲಾಖೆಯವರ ವತಿಯಿಂದ ನಡೆಸಲು ಸೂಚಿಸಲಾಗಿದೆ. ಪಂಡಿತರ ಅಭಿಪ್ರಾಯದಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸದರಿ ದೇವಾಲಯದ ಸಣ್ಣ-ಪುಟ್ಟ ರಿಪೇರಿ ಕಾಮಗಾರಿಯನ್ನು ತಮ್ಮ ಇಲಾಖೆಯ ವತಿಯಿಂದಲೇ ಕೈಗೊಳ್ಳುವಂತೆ 2 ಆಗಸ್ಟ್​ 2022ರ ಪತ್ರದಲ್ಲಿ ಕೋರಲಾಗಿತ್ತು.

ಈ ದೇವಾಲಯದ ಗರ್ಭಗುಡಿ ಮತ್ತು ರಾಜಗೋಪುರ ಮೇಲ್ಬಾಗದಲ್ಲಿ ಅರಳಿ ಗಿಡಗಳು ಬೆಳೆದಿದ್ದು, ಇವುಗಳನ್ನು ತೆಗೆಯಲು ಪ್ರಯತ್ನಿಸಿದ್ದಲ್ಲಿ ಗೋಪುರಗಳಿಗೂ ಸಹ ಹಾನಿಯಾಗುವ ಸಂಭವವಿದೆ. ಹಾಗಾಗಿ ದೇವಾಲಯದ ಗರ್ಭಗುಡಿ ಮತ್ತು ರಾಜಗೋಪುರದ ಮೇಲ್ಬಾಗದಲ್ಲಿ ಬೆಳೆದಿರುವ ಅರಳಿ ಗಿಡಗಳನ್ನು ತೆಗೆಯುವ ಹಾಗೂ ಗೋಪುರದ ದುರಸ್ಥಿ ಕಾಮಗಾರಿಯನ್ನು ತಮ್ಮ ಇಲಾಖೆ ವತಿಯಿಂದ ಅತ್ಯಂತ ಜರೂರಾಗಿ ಕೈಗೊಳ್ಳಲು ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:07 pm, Mon, 4 December 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ