AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೊರಾತ್ರಿ ಕ್ವಾರಿಯಲ್ಲಿ ಕಸ ಸುರಿದು ಬೆಂಕಿ ಹಚ್ಚಿ ಅವಾಂತರ: ಬಿಬಿಎಂಪಿ ಎಡವಟ್ಟಿಗೆ ಜನರು ಹೈರಾಣು

ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನ ಬೆಂಗಳೂರು ಹೊರವಲಯದ ಸಿಕ್ಕ ಸಿಕ್ಕ ಕಡೆಗಳಲ್ಲಿ ಡಂಪ್ ಮಾಡಲು ಮುಂದಾಗಿದ್ದಾರೆ. ಆದರೆ ವೈಜ್ಞಾನಿಕವಾಗಿ ಕಸ ಡಂಪ್ ಮಾಡುವಂತೆ ಕ್ರಮ ಕೈಗೊಳ್ಳಬೇಕಾದ ಬಿಬಿಎಂಪಿ ಅಧಿಕಾರಿಗಳ ಎಡವಟ್ಟಿನಿಂದಾಗಿ ಹುಲ್ಲಹಳ್ಳಿ ಗ್ರಾಮದ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಕಸವನ್ನ ರಾತ್ರೋರಾತ್ರಿ ತಂದು ಸುರಿಯಲಾಗುತ್ತಿದೆ.

ರಾತ್ರೊರಾತ್ರಿ ಕ್ವಾರಿಯಲ್ಲಿ ಕಸ ಸುರಿದು ಬೆಂಕಿ ಹಚ್ಚಿ ಅವಾಂತರ: ಬಿಬಿಎಂಪಿ ಎಡವಟ್ಟಿಗೆ ಜನರು ಹೈರಾಣು
ಕಸ ಡಂಪಿಂಗ್
ರಾಮು, ಆನೇಕಲ್​
| Edited By: |

Updated on:Jan 25, 2024 | 7:46 PM

Share

ಆನೇಕಲ್, ಜನವರಿ 25: ಕಸ ವಿಲೇವಾರಿ ಹೆಸರಿನಲ್ಲಿ ಬಿಬಿಎಂಪಿ (BBMP) ಮಾಡುತ್ತಿರುವ ಯಡವಟ್ಟುಗಳು ಒಂದೊಂದಲ್ಲ. ಜನವಸತಿ ಪ್ರದೇಶದ ಕ್ವಾರಿಗೆ ರಾತ್ರೋರಾತ್ರಿ ಕಸವನ್ನ ಅವೈಜ್ಞಾನಿಕವಾಗಿ ಸುರಿದು ಹೋಗುತ್ತಿರುವುದರಿಂದ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಅಲ್ಲಿನ ಜನರಿಗೆ ಹಾಗೂ ಶಾಲಾ ಮಕ್ಕಳು ನಿತ್ಯ ಹೈರಾಣಾಗುವಂತೆ ಮಾಡಿದೆ. ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲ್ಲಹಳ್ಳಿ ಬಳಿ ಸರ್ವೆ ನಂ 44ರ ಸರ್ಕಾರಿ ಗೋಮಾಳದ ಜಾಗವಾಗಿದ್ದು, ಕಳೆದ ಕೆಲ‌ ವರ್ಷಗಳ ಹಿಂದೆ ಬಿಬಿಎಂಪಿಗೆ ನೀಡಲಾಗಿದೆ. ಈ ಕ್ವಾರಿಗೆ ಚಿಕ್ಕನಾಗಮಂಗಲ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸ ಸಂಸ್ಕರಿಸಿ ಉಳಿದ ವೇಸ್ಟ್ ಕಸವನ್ನು ಬಿಬಿಎಂಪಿ ಲಾರಿಗಳ ಮೂಲಕ ರಾತ್ರೋರಾತ್ರಿ ತಂದು ಸುರಿದು ಹೋಗಲಾಗುತ್ತಿದೆ.

ಇಷ್ಟು ದಿನಗಳ ಕಾಲ ಅಲ್ಲಿನ ಸುತ್ತಮುತ್ತಲಿನ ಗ್ರಾಮದ ಜನರು ಕಸದ ದುರ್ನಾತದಿಂದಾಗಿ ಸಮಸ್ಯೆ ಎದುರಿಸುತ್ತಿದ್ದರು. ಆದರೆ ಇದೀಗ ಕಸದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಬೆಂಕಿಯ ಜೊತೆ ದಟ್ಟ ಹೊಗೆಯಿಂದಾಗಿ ಜನರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಇದನ್ನೂ ಓದಿ: ಇನ್ನು ಯಂತ್ರಗಳ ಮೂಲಕ ಕಸ ಗುಡಿಸಲಿದ್ದಾರೆ ಪೌರ ಕಾರ್ಮಿಕರು! ಮೆಕ್ಯಾನಿಕಲ್ ಸ್ವೀಪರ್‌ಗಳ ಖರೀದಿಗೆ ಮುಂದಾದ ಬಿಬಿಎಂಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನ ಬೆಂಗಳೂರು ಹೊರವಲಯದ ಸಿಕ್ಕ ಸಿಕ್ಕ ಕಡೆಗಳಲ್ಲಿ ಡಂಪ್ ಮಾಡಲು ಮುಂದಾಗಿದ್ದಾರೆ. ಆದರೆ ವೈಜ್ಞಾನಿಕವಾಗಿ ಕಸ ಡಂಪ್ ಮಾಡುವಂತೆ ಕ್ರಮ ಕೈಗೊಳ್ಳಬೇಕಾದ ಬಿಬಿಎಂಪಿ ಅಧಿಕಾರಿಗಳ ಎಡವಟ್ಟಿನಿಂದಾಗಿ ಹುಲ್ಲಹಳ್ಳಿ ಗ್ರಾಮದ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಕಸವನ್ನ ರಾತ್ರೋರಾತ್ರಿ ತಂದು ಸುರಿಯಲಾಗುತ್ತಿದೆ.

ಕ್ವಾರಿ ಸಮೀಪವೇ ಪ್ರತಿಷ್ಠಿತ ಖಾಸಗಿ ಶಾಲೆಗಳು ಹಾಗೂ ವಸತಿ ಬಡಾವಣೆಗಳಿದ್ದರು ಸಹ ಬಿಬಿಎಂಪಿ ಅಧಿಕಾರಿಗಳು ತಲೆ ಕೇಡಿಸಿಕೊಳ್ಳದೆ ಕಸ ಸುರಿದು ಹೋಗುತ್ತಿದ್ದು, ದುರ್ನಾತ ಜೊತೆ ಹೊಗೆಯಿಂದ ಇಡೀ ವಾತಾವರಣ ಕಲುಷಿತಗೊಂಡಿದೆ. ಕಲುಪಿತ ತ್ಯಾಜ್ಯ ನೀರು ಅಂತರ್ಜಲಕ್ಕೂ ಸೇರಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಗ್ರಾಮದಲ್ಲಿ ಸಂಪೂರ್ಣ ವಾತಾವರಣ ಕಲುಷಿತಗೊಂಡು ಗ್ರಾಮಸ್ಥರು ಹಾಗೂ ಮಕ್ಕಳು ಆನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುರಕ್ಷತಾ ಕಳವಳಕ್ಕೆ ಕಾರಣವಾಗುತ್ತಿವೆ ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳು; ಹೆಚ್ಚಿನವುಗಳಲ್ಲಿಲ್ಲ ಮೂಲಸೌಕರ್ಯ

ಜನಸಾಮಾನ್ಯರಿಗೆ ಇಷ್ಟೆಲ್ಲಾ ಸಮಸ್ಯೆ ಎದುರಾದರೂ ಸಹ ಬಿಬಿಎಂಪಿ ಅಧಿಕಾರಿಗಳು ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಕಂಡು ಕಾಣುದಂತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಬೇಜಾವ್ದಾರಿಯ ವಿರುದ್ದ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದು, ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:45 pm, Thu, 25 January 24

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?