AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆ ಸ್ಥಳದಲ್ಲಿ ಸ್ಫೋಟಕ ಇಡಲು ಪ್ಲಾನ್: ಬಾಯ್ಬಿಟ್ಟ ಅಬ್ದುಲ್ ರೆಹಮಾನ್

ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಸ್ಫೋಟಕಗಳ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಬ್ದುಲ್ ರೆಹಮಾನ್​ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾರೆ. ಪ್ಯಾಲೇಸ್ ಗ್ರೌಂಡ್ ಬಳಿ ಅನಾಮಿಕ ವ್ಯಕ್ತಿಯಿಂದ ಸ್ಫೋಟಕಗಳನ್ನು ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಹೇಳಿಕೆ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಆ ಸ್ಥಳದಲ್ಲಿ ಸ್ಫೋಟಕ ಇಡಲು ಪ್ಲಾನ್: ಬಾಯ್ಬಿಟ್ಟ ಅಬ್ದುಲ್ ರೆಹಮಾನ್
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on: Mar 30, 2025 | 10:45 AM

Share

ಬೆಂಗಳೂರು, ಮಾರ್ಚ್​ 30: ಇತ್ತೀಚಗೆ ನಗರದ ಸಂಪಿಗೆಹಳ್ಳಿ (Sampigehalli) ಠಾಣೆ ವ್ಯಾಪ್ತಿಯ ಹೋಟೆಲ್​ವೊಂದ ಸಪ್ಲೈಯರ್​ ಬ್ಯಾಗ್​​ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ (Hand Grenade) ಪತ್ತೆಯಾಗಿತ್ತು.  ಅಬ್ದುಲ್ ರೆಹಮಾನ್ ಎಂಬಾತನನ್ನು ಬಂಧಿಸಲಾಗಿತ್ತು. ಕಳೆದ ಒಂದು ವಾರದಿಂದಲೂ ಕೇಂದ್ರ ತನಿಖಾ ತಂಡಗಳಿಂದ ಅಬ್ದುಲ್ ರೆಹಮಾನ್ ವಿಚಾರಣೆ ನಡೆದಿದ್ದು, ಅದೊಂದು ಜಾಗದಲ್ಲಿ ಸ್ಪೋಟಕ ಇಡಲು ಪ್ಲಾನ್​ ನಡೆದಿತ್ತು ಎಂಬ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾನೆ. ಹಾಗಾದರೆ ತನಿಖಾಧಿಕಾರಿಗಳ ಮುಂದೆ ಆರೋಪಿ ಹೇಳಿದ್ದೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಕಳೆದ ಒಂದು ವಾರದಿಂದಲೂ ಎನ್​ಐಎ, ಐಬಿ ಮತ್ತು ಐಎಸ್​​ಡಿ ಅಧಿಕಾರಿಗಳಿಂದ ಆರೋಪಿ ಅಬ್ದುಲ್ ತೀವ್ರ ವಿಚಾರಣೆ ನಡೆಯುತ್ತಿದೆ. ಅರಮನೆ ಮೈದಾನದ ಬಳಿಯೇ ಅಲ್ಲೇ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಇರುತ್ತಿದ್ದ ಆರೋಪಿ ಅಬ್ದುಲ್​​ಗೆ ಪ್ಯಾಲೇಸ್ ಗ್ರೌಂಡ್​ನಲ್ಲಿ ಅನಾಮಿಕ ವ್ಯಕ್ತಿ ಸ್ಫೋಟಕ ಕೊಟ್ಟಿದ್ದು, ಸಿಗರೇಟ್​ ಶಾಪ್​ ಬಳಿ ಸ್ಫೋಟಕ ಇಡಲು ಹೇಳಿದ್ದಾಗಿ ಬಾಯ್ಬಿಟ್ಟಿದ್ದಾನೆ. ಒಂದೊಂದು ಬಾರಿ ಒಂದೊಂದು ಹೆಸರು ಹೇಳುತ್ತಿರುವ ಆರೋಪಿ, ಒಟ್ಟು ಮೂರು ಹೆಸರುಗಳನ್ನು ಹೇಳಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನ ಹೋಟೆಲ್​ ಸಪ್ಲೈಯರ್​​ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆ: ಸ್ಫೋಟಕ್ಕೆ ನಡೆದಿತ್ತಾ ಸಂಚು..?

ಇದನ್ನೂ ಓದಿ
Image
ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭ, ಬೇರೆ ರಾಜ್ಯಗಳ ಭಕ್ತರಿಂದಲೂ ಬೇಡಿಕೆ
Image
ಏಪ್ರಿಲ್ 2ರಿಂದ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್​
Image
ಕಿತ್ತೂರು ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಸಿಎಂ ಪತ್ರ
Image
ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ರಾಜಣ್ಣ ಎಂಬಾತನೇ ಅರಮನೆ ಮೈದಾನದಿಂದ ಆಟೋದಲ್ಲಿ ಥಣಿಸಂದ್ರದ ಹೋಟೆಲ್​ಗೆ ಹೋಗಿದ್ದಾಗಿ ಅಬ್ದುಲ್ ಮಾಹಿತಿ ನೀಡಿದ್ದು, ಆಟೋ ಚಾಲಕನನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ. ಆರೋಪಿ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದು ಇಬ್ಬರು ಹೇಳಿದ್ದಾರೆ. ಸದ್ಯ ಅಬ್ದುಲ್ ರೆಹಮಾನ್ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಚುರುಕು ನಡೆಸಿದ್ದಾರೆ.

ಥಣಿಸಂದ್ರ ಸರ್ಕಲ್​ನಲ್ಲಿರುವ ಶ್ರೀದೇವಿ ವೈಭವ್ ಎನ್ನುವ ಹೋಟೆಲ್​ನಲ್ಲಿ ಅಬ್ದುಲ್ ರೆಹಮಾನ್ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದ. ಈ ವೇಳೆ ಮಾಲೀಕರು ನಿನ್ನ ಆಧಾರ್ ಕಾರ್ಡ್ ಕೊಡು ಎಂದು ಕೇಳಿದ್ದಾರೆ.‌ ಎರಡು ದಿನವಾದರೂ ಅಬ್ದುಲ್ ರೆಹಮಾನ್ ತನ್ನ ಆಧಾರ್ ಕಾರ್ಡ್ ನೀಡಿರಲಿಲ್ಲ. ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಆತನ ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಚೆಂಡಿನಾಕಾರದ ವಸ್ತುಗಳಿದ್ದು, ಅದಕ್ಕೆ ಎರಡು ಬತ್ತಿಗಳು ಹೊಂದಿಕೆಯಾದಂತೆ ಇರುವುದು ಗೊತ್ತಾಗಿದೆ. ಕೂಡಲೇ ಹೊಟೇಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಆರೋಪಿ ಹಾಗೂ ಸ್ಪೋಟಕ ವಸ್ತುವನ್ನ ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: ಸದ್ಯದಲ್ಲೇ ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಕರ್ನಾಟಕ ಪೊಲೀಸರ ತಲೆ ಅಲಂಕರಿಸಲಿದೆ ಸ್ಮಾರ್ಟ್​ ಹ್ಯಾಟ್​

ಬಳಿಕ ಬಾಂಬ್ ನಿಷ್ಕ್ರಿಯದಳ ಸುರಕ್ಷಿತ ಸ್ಥಳದಲ್ಲಿ ಸ್ಪೋಟಕ ವಸ್ತುವನ್ನು ಡಿಸ್ಪೋಸ್ ಮಾಡಿ ಅದರ‌ಲ್ಲಿದ್ದ ಕೆಮಿಕಲ್​ ಅನ್ನು ಎಫ್​ಎಸ್​ಎಲ್​ಗೆ ರವಾನಿಸಲಾಗಿದೆ. ಇತ್ತ ಆರೋಪಿಯನ್ನ ಕೋರ್ಟ್​ಗೆ ಹಾಜರುಪಡಿಸಿ ಐದು ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ