AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಸಂಚಾರಿ ಪೊಲೀಸರೊಂದಿಗೆ ಕೈ ಜೋಡಿಸಿದ ಐಐಎಸ್​ಸಿ

ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಭಾರತೀಯ ವಿಜ್ಞಾನ ಸಂಸ್ಥೆ ಸಂಚಾರಿ ಪೊಲೀಸರೊಂದಿಗೆ ಕೈಜೋಡಿಸಿದೆ. ಸಂಚಾರಿ ಪೊಲೀಸರು ಸಂಗ್ರಹಿಸಿರುವ ದತ್ತಾಂಶ ಬಳಸಿ IISC ಸಂಶೋಧನೆ ನಡೆಸಿ ಸಂಚಾರಿ ಪೊಲೀಸರಿಗೆ ಸಲಹೆ ನೀಡಲಿದೆ. ಆ ಮೂಲಕ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಮತ್ತು ಆ್ಯಕ್ಸಿಡೆಂಟ್​ಗೆ ಮುಕ್ತಿ ಸಿಗುತ್ತಾ ಕಾದುನೋಡಬೇಕಿದೆ.

ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಸಂಚಾರಿ ಪೊಲೀಸರೊಂದಿಗೆ ಕೈ ಜೋಡಿಸಿದ ಐಐಎಸ್​ಸಿ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 15, 2023 | 8:32 PM

Share

ಬೆಂಗಳೂರು, ಡಿಸೆಂಬರ್​ 15: ನಗರದಲ್ಲಿ ಟ್ರಾಫಿಕ್ (Bangaluru traffic) ಸಮಸ್ಯೆ ಬಗೆಹರಿಸಲು ಭಾರತೀಯ ವಿಜ್ಞಾನ ಸಂಸ್ಥೆ ಸಂಚಾರಿ ಪೊಲೀಸರೊಂದಿಗೆ ಕೈಜೋಡಿಸಿದೆ. ಸಂಚಾರಿ ಪೊಲೀಸರು ಸಂಗ್ರಹಿಸಿರುವ ದತ್ತಾಂಶ ಬಳಸಿ IISC ಸಂಶೋಧನೆ ನಡೆಸಿ ಸಂಚಾರಿ ಪೊಲೀಸರಿಗೆ ಸಲಹೆ ನೀಡಲಿದೆ. ಮಹತ್ವದ ಯೋಜನೆಯ ಒಪ್ಪಂದಕ್ಕೆ ಸಂಚಾರಿ ಪೊಲೀಸರು ಸಹಿಮಾಡಿದ್ದು, ಇದಕ್ಕಾಗಿ ಸಂಚಾರಿ ವಿಭಾಗದ ಪೊಲೀಸರಿಗೆ ಭಾರತೀಯ ವಿಜ್ಞಾನ ಸಂಸ್ಥೆ ತರಬೇತಿ ನೀಡಲಿದೆ. ಆ ಮೂಲಕ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಮತ್ತು ಆ್ಯಕ್ಸಿಡೆಂಟ್​ಗೆ ಮುಕ್ತಿ ಸಿಗುತ್ತಾ ಕಾದುನೋಡಬೇಕಿದೆ.

ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮ ಯೋಜನೆ ಅಡಿಯಲ್ಲಿ ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಸಾರ್ವಜನಿಕ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಈ ಸಲಹೆಗಳನ್ನು ಒಟ್ಟುಗೂಡಿಸಿ ಪ್ರತ್ಯೇಕ ವರದಿ ಸಿದ್ದಪಡಿಸಿ ಸಲ್ಲಿಸುವಂತೆ ಐಐಎಸ್​ಸಿ ಮತ್ತು ಆರ್​ಆಯ್​ಎಮ್​ಗೆ ರಾಜ್ಯ ಸರ್ಕಾರ ಸೂಚಿಸಿತ್ತು.

ಇದನ್ನೂ ಓದಿ: ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸಲು ವಾಹನ ಸವಾರರಿಂದ ದಟ್ಟಣೆ ಶುಲ್ಕ ವಸೂಲಿಗೆ ಚಿಂತನೆ

ಮುಂಬರುವ ವರ್ಷಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ವಾಹನ ಹಾಗೂ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಪರಿಹರಿಸಲು, ಸೂಕ್ತವಾದ ಮಾಸ್ಟರ್​ಪ್ಲಾನ್ ಹಾಗೂ ಅನ್ವಯವಾಗುವ ಸಾರಿಗೆ ಯೋಜನೆಯನ್ನು ಅಭಿವೃದ್ಧಿಪಡಿಸಬೇಕಿದೆ. ಹಾಗೇ ಇದನ್ನು ಕಾಲಕಾಲಕ್ಕೆ ನವೀಕರಿಸಬೇಕು. ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಯೋಜನೆಗಳು ಅತ್ಯಗತ್ಯವಿದೆ.

ಟ್ರಾಫಿಕ್ ಸಮಸ್ಯೆಗೆ ಪೆರಿಫೆರಲ್ ರಿಂಗ್ ರಸ್ತೆ ಪರಿಹಾರ

ಟ್ರಾಫಿಕ್ ಸಮಸ್ಯೆಗೆ ಪೆರಿಫೆರಲ್ ರಿಂಗ್ ರಸ್ತೆ ಪರಿಹಾರವಾಗಲಿದೆ ಎಂದು ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದರು. ಫ್ಲೈಓವರ್, ಸುರಂಗ ರಸ್ತೆ ಮಾಡಿದರೆ ಟ್ರಾಫಿಕ್ ಸಮಸ್ಯೆ ಬಗೆಹರಿಯುತ್ತೆ. ಬೆಂಗಳೂರಿನ ಪ್ರತಿ ವಾರ್ಡ್​ಗೆ ಯುವ ಐಎಎಸ್ ಅಧಿಕಾರಿಗಳ ನೇಮಕ ಮಾಡುತ್ತೇವೆ. ಬೆಂಗಳೂರಿಗರ ಆಸ್ತಿ ಮೌಲ್ಯದ ಬಗ್ಗೆ ಇ-ಸ್ವತ್ತು ಮಾಡಿಸುತ್ತೇವೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಇ-ಸ್ವತ್ತು ದಾಖಲೆ ತಲುಪಿಸುತ್ತೇವೆ.

ಇದನ್ನೂ ಓದಿ: ಟಿವಿ9 ವರದಿ ಇಂಪ್ಯಾಕ್ಟ್: ಬಿಎಂಟಿಸಿಗೆ ಬಂತು 100 ಹೊಸ ಎಲೆಕ್ಟ್ರಿಕ್ ಬಸ್​, ಇವುಗಳ ವಿಶೇಷತೆ ತಿಳಿಯಿರಿ

ಸರ್ಕಾರಕ್ಕೆ ತೆರಿಗೆ ಕಟ್ಟುವವರಿಗೆ ನಾವು ಸೌಲಭ್ಯ ಕಲ್ಪಿಸಬೇಕಾಗಿದೆ. ಆಸ್ತಿ ಮೌಲ್ಯಮಾಪನ ಮಾಡಿಸಿದರೆ ತೆರಿಗೆ ವಂಚಕರು ಗೊತ್ತಾಗುತ್ತೆ. ಎತ್ತಿನಹೊಳೆ ಯೋಜನೆ ಮೂಲಕ ತಿಪ್ಪಗೊಂಡನಹಳ್ಳಿಗೆ ನೀರು ತರುತ್ತೇವೆ. ತಿಪ್ಪಗೊಂಡನಹಳ್ಳಿ ತಲುಪಿದ ನಂತರ ಮುಂದಿನ ಯೋಜನೆಗೆ ನಿರ್ಧಾರ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು