AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಬಡಾವಣೆಗಳಲ್ಲಿ ಜೂ.17 ರಂದು ಪವರ್​ ಕಟ್​​

ಬೆಂಗಳೂರಿನ ಜಯನಗರದ ಸುತ್ತಮುತ್ತಲಿನ ಹಲವು ಬಡಾವಣೆಗಳಲ್ಲಿ ಶನಿವಾರ ವಿದ್ಯುತ್ ​ವ್ಯತ್ಯಯವಾಗಲಿದೆ. ಹಾಗಿದ್ದರೇ ಯಾವ ಯಾವ ಬಡವಾಣೆಗಳಲ್ಲಿ ಕರೆಂಟ್​ ಇರುವುದಿಲ್ಲ ಇಲ್ಲಿದೆ ಮಾಹಿತಿ.

Bengaluru Power Cut: ಬೆಂಗಳೂರಿನ ಈ ಬಡಾವಣೆಗಳಲ್ಲಿ ಜೂ.17 ರಂದು ಪವರ್​ ಕಟ್​​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Jun 16, 2023 | 3:55 PM

Share

ಬೆಂಗಳೂರು: ರಾಜಧಾನಿಯ ದಕ್ಷಿಣ ಭಾಗವಾದ ಜಯನಗರ (Jayanagar) ಉಪವಿಭಾಗ ವ್ಯಾಪ್ತಿಯ (ಸುತ್ತಮುತ್ತಲಿನ) ಹಲುವು ಬಡಾವಣೆಗಳಲ್ಲಿ ನಾಳೆ (ಜೂ.17) ರಂದು ವಿದ್ಯುತ್​ ವ್ಯತ್ಯಯವಾಗಲಿದೆ (Power Cut). ಅಂದು ಜಯನಗರದ ಹಲವು ಬಡಾವಣೆಗಳಲ್ಲಿ ತುರ್ತು ​​ನಿರ್ವಹಣಾ ಕಾರ್ಯ ನಡೆಯುವುದರಿಂದ ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಐದು ಗಂಟೆಗಳ ಕಾಲ ವಿದ್ಯುತ್​​ ನಿಲುಗಡೆ ಮಾಡಲಾಗುತ್ತದೆ ಎಂದು ಬೆಸ್ಕಾಂ (BESCOM) ತಿಳಿಸಿದೆ.

ಪವರ್​ ಕಟ್​ ಆಗುವ ಏರಿಯಾಗಳು

ಜಯನಗರ 1,2,3ನೇ ಬ್ಲಾಕ್​​, ಜಯನಗರ 4ನೇ ಬ್ಲಾಕ್​​, ಜಯನಗರ 9ನೇ ಬ್ಲಾಕ್​, ಐಎಎಸ್​​ ಕಾಲೋನಿ, ಕೆಎಎಸ್​ ಕಾಲೋನಿ, ತಿಲಕ್​​ನಗರ, ಎನ್​​.ಎಸ್​.ಪಾಳ್ಯ ಕೈಗಾರಿಕಾ ಪ್ರದೇಶ. ಜೆಆರ್​ಬಿ ಮುಖ್ಯರಸ್ತೆ, ಅನಂತರ ಲೇಔಟ್​​, ಶಾಂತಿ ಪಾರ್ಕ್​​, ಬಳೇಕಹಳ್ಳಿ, ಎಸ್​ಆರ್​ಕೆ ಗಾರ್ಡನ್​​, ಬಿಎಚ್​​ಇಎಲ್​​ ಲೇಔಟ್​​, ನಿಮ್ಹಾನ್ಸ್​​, ಜಯದೇವ ಆಸ್ಪತ್ರೆ ಪ್ರದೇಶ, ಕಿದ್ವಾಯಿ ಆಸ್ಪತ್ರೆ ಪ್ರದೇಶದಲ್ಲಿ ವಿದ್ಯುತ್​​ ವ್ಯತ್ಯಯವಾಗಲಿದೆ.

ಇದನ್ನೂ ಓದಿ: KCET Results 2023: ಇಂಜಿನಿಯರಿಂಗ್ ಕೋರ್ಸ್‌ನಲ್ಲಿ ಟಾಪ್ 10ರಲ್ಲಿ, 8 ರ‍್ಯಾಂಕ್‌ ಪಡೆದುಕೊಂಡ ಬೆಂಗಳೂರು

ಹಾಗೇ ಬಿಟಿಎಂ 2ನೇ ಹಂತ, ಮೈಕೋ ಲೇಔಟ್​​, ಎಂಸಿಹೆಚ್​​ ಲೇಔಟ್​​, ದಿವ್ಯ ಟವರ್ಸ್​​​, ಬನ್ನೇರಘಟ್ಟ, ಮುಖ್ಯ ರಸ್ತೆ, ಮಂತ್ರಿ ಅಪಾರ್ಟ್​​ಮೆಂಟ್​, ಗುರಪ್ಪನಪಾಳ್ಯ, ಬಿಸ್ಮಿಲ್ಲಾ ನಗರ, ಶಾಂತಿನಿಕೇತನ ಶಾಲೆ, ಕೆಇಬಿ ಕಾಲೋನಿ, ವಿಲ್ಸನ್​ ಗಾರ್ಡನ್​​, ಇಟ್ಟುಮಡು, ಚಿಕ್ಕಲಸಂದ್ರ, ಎರಹಳ್ಳಿ, ಯಲಚೇನಹಳ್ಳಿ, ವೈಶ್ಯ ಬ್ಯಾಂಕ್​​ ಕಾಲೋನಿಯಲ್ಲೂ ವಿದ್ಯುತ್​ ನಿಲುಗಡೆಯಾಗಲಿದೆ.ಈ ಐದು ಗಂಟೆ ಕಾಲ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

ನೆಲಮಂಗಲ ಗ್ರಾಮಾಂತರ ತಾಲೂಕಿನಲ್ಲಿ ವಿದ್ಯುತ್​ ವ್ಯತ್ಯಯ

ಬೆಂಗಳೂರು ಗ್ರಾಮಾಂತರ: ನೆಲಮಂಗಲ ಗ್ರಾಮಾಂತರ ತಾಲೂಕಿನ ದಾಬಸ್​​ಪೇಟೆಯ ಭಾಗದಲ್ಲಿ ಹತ್ತು ದಿನಗಳ ಕಾಲ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 220 ಕೆವಿ ದಾಬಸ್​ಪೇಟೆ ಉಪ ಕೇಂದ್ರದಲ್ಲಿ ಪರಿವರ್ತಕ ತೈಲ ಬದಲಾವಣೆ ಕಾಮಗಾರಿ ನಡೆಯುತ್ತಿದೆ.

ಈ ಹಿನ್ನೆಲೆ ಐಪಿ ಪೂರಕಗಳನ್ನು ಬದಲಾಯಿಸಲಾಗುತ್ತಿದೆ. ಜೂ.13 ರಿಂದ 23ರವರೆಗೆ ವಿದ್ಯುತ್​​ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 5ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಡಚಣೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್​ ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Fri, 16 June 23

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ