AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ಗುಂಡಿಗಳ ದರ್ಬಾರ್: ಕಿತ್ತೋದ ರಸ್ತೆಗೆ ಸವಾರರು ಕಂಗಾಲು

ಕಂಠೀರವ ಸ್ಟುಡಿಯೋದ ಹದಗೆಟ್ಟ ರಸ್ತೆಗಳಿಂದಾಗಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ಮತ್ತು ಸರ್ಕಾರದ ನಿರ್ಲಕ್ಷ್ಯದಿಂದ ಗುಂಡಿಗಳು, ಕಿತ್ತುಹೋದ ರಸ್ತೆಗಳು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಧೂಳು ಮತ್ತು ಗುಂಡಿಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಸ್ತೆ ಸುಧಾರಣೆಗಾಗಿ ಜನರು ಆಗ್ರಹಿಸುತ್ತಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ಗುಂಡಿಗಳ ದರ್ಬಾರ್: ಕಿತ್ತೋದ ರಸ್ತೆಗೆ ಸವಾರರು ಕಂಗಾಲು
ಬೆಂಗಳೂರಿನ ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ಗುಂಡಿಗಳ ದರ್ಬಾರ್: ಕಿತ್ತೋದ ರಸ್ತೆಗೆ ಸವಾರರು ಕಂಗಾಲು
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on: Mar 01, 2025 | 5:43 PM

Share

ಬೆಂಗಳೂರು, ಮಾರ್ಚ್​​ 01: ಬಿಬಿಎಂಪಿ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದ ಜನರು ನಿತ್ಯ ಗುಂಡಿ (potholes) ಬಿದ್ದ ರಸ್ತೆಯಲ್ಲಿ ಹೆಣಗಾಡುವ ಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಕಿತ್ತೋದ ರಸ್ತೆ ಒಂದೆಡೆಯಾದರೆ, ಗುಂಡಿ ಬಿದ್ದ ರಸ್ತೆಯಲ್ಲಿ ಚರಂಡಿ ನೀರು ತುಂಬಿ ಪ್ರಯಾಣಿಕರ ಜೀವಕ್ಕೆ ಕಂಟಕ ತಂದಿಡುತ್ತಿದೆ. ಧೂಳು, ಗುಂಡಿ ತುಂಬಿದ ರಸ್ತೆಯಲ್ಲಿ ಓಡಾಡಿ ಸುಸ್ತಾದ ಜನರು ಇದೇನಾ ಸ್ವಾಮಿ ನಮ್ಮ ಹೆಮ್ಮೆಯ ರಸ್ತೆ ಅಂತಾ ಛೀಮಾರಿ ಹಾಕುತ್ತಿದ್ದಾರೆ.

ಬೆಂಗಳೂರಿನ ರಸ್ತೆಗಳನ್ನ ಹೈಟೆಕ್ ಮಾಡುತ್ತೇವೆ, ಹೈಫೈ ಮಾಡುತ್ತೇವೆ ಅಂತಾ ಬರೀ ಮಾತಿನ ಶೂರತ್ವ ಪ್ರದರ್ಶಿಸಿಸುವ ಪಾಲಿಕೆ ನಡೆಗೆ ಇದೀಗ ಸಿಟಿಮಂದಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಪೀಣ್ಯ ಟು ಕಂಠೀರವ ಸ್ಟುಡಿಯೋಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಂಡಿಗಳ ಕಾಟ ಶುರುವಾಗಿದ್ದು, ವಾಹನ ಸವಾರರಿಗೆ ನಿತ್ಯ ನರಕ ದರ್ಶನವಾಗುತ್ತಿದೆ. ಕಿತ್ತೋದ ರಸ್ತೆಯ ಕಾಟಕ್ಕೆ ಬೇಸತ್ತ ಸಿಟಿಮಂದಿ ನಿತ್ಯ ಅದೇ ರಸ್ತೆಯಲ್ಲೇ ಸರ್ಕಸ್ ಮಾಡಿಕೊಂಡು ಓಡಾಡುವಂತಾಗಿದೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಗಂಡಾಂತರ: ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಇದನ್ನೂ ಓದಿ
Image
ಡಬಲ್ ಡೆಕ್ಕರ್ ಪ್ಲೈಓವರ್ ರಸ್ತೆಯಲ್ಲಿ ಗುಂಡಿ: ಕಳಪೆ ಕಾಮಗಾರಿ ಆರೋಪ
Image
ಬೆಂಗಳೂರಿನಲ್ಲಿ ತಪ್ಪದ ಗುಂಡಿ ಗಂಡಾಂತರ; ಸ್ವಲ್ಪ ಯಾಮಾರಿದ್ರೂ ಅಪಘಾತ ಖಚಿತ
Image
ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಗಡುವು ಇಂದು ಅಂತ್ಯ: ಭಾನುವಾರವೂ ಕಾಮಗಾರಿ!
Image
ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಗಂಡಾಂತರ: ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಇನ್ನು ನಿತ್ಯ ನೂರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಜಲ್ಲಿಕಲ್ಲುಗಳು ಮೇಲೆದ್ದು ಬಂದಿದ್ದು, ನಿತ್ಯ ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬೀಳುವ ಘಟನೆ ಹೆಚ್ಚಾಗುತ್ತಿವೆ. ಇತ್ತ ಚರಂಡಿ, ಫುಟ್ ಪಾತ್ ಕೂಡ ಗಬ್ಬೆದ್ದು ನಾರುತ್ತಿದ್ದು, ರಾಜಧಾನಿಯ ರಸ್ತೆಗಳನ್ನ ನಿರ್ವಹಣೆ ಮಾಡಬೇಕಿದ್ದ ಪಾಲಿಕೆ ನಿದ್ದೆಗೆ ಜಾರಿರುವುದು ಸಿಟಿಜನರನ್ನ ಕೆರಳಿಸಿದೆ. ಕಿತ್ತೋದ ರಸ್ತೆಯಿಂದ ಸುಸ್ತಾದ ಸಿಟಿಮಂದಿ ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಗಡುವು ಇಂದು ಅಂತ್ಯ: ರಜಾ ದಿನವಾದ ಭಾನುವಾರವೂ ಮುಂದುವರಿದ ಕಾಮಗಾರಿ!

ಸದ್ಯ ಬೆಂಗಳೂರಿನ ರಸ್ತೆಗಳನ್ನ ಗುಂಡಿಮುಕ್ತ ಮಾಡುತ್ತೇವೆ, ರಸ್ತೆಗಳನ್ನ ಹೈಫೈ ಮಾಡುತ್ತೇವೆ ಅಂತಾ  ಕಾರ್ಯಕ್ರಮಗಳಲ್ಲಿ ಬರೀ ಭಾಷಣ ಮಾಡುತ್ತಿರುವ ಸರ್ಕಾರ ಹಾಗೂ ಪಾಲಿಕೆಯ ನಡೆ ಇದೀಗ ಸಿಟಿಜನರಿಗೆ ಸಂಕಷ್ಟ ತಂದಿಟ್ಟಿದೆ. ಸದ್ಯ ಧೂಳು ತುಂಬಿದ ರಸ್ತೆಯಲ್ಲಿ ಸರ್ಕಸ್ ಮಾಡಿಕೊಂಡು ಸಂಚಾರ ಮಾಡುತ್ತಿರುವ ಜನರು ಇನ್ನಾದ್ರೂ ರಸ್ತೆ ಸರಿಯಾಗುತ್ತ ಅಂತಾ ಕಾದುಕುಳಿತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು