ಕನ್ನಡಿಗರಿಗೆ ಅಪಮಾನ ಕೇಸ್​​: ಮ್ಯಾನೇಜರ್ ಬಂಧನ, ಜಿಎಸ್​ ಸೂಟ್​ ಹೋಟೆಲ್​ ಸೀಜ್

ಕನ್ನಡಿಗರನ್ನು ಅವಮಾನಿಸಿದ್ದಕ್ಕಾಗಿ ಬೆಂಗಳೂರಿನ ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದ ಜಿಎಸ್​​ ಸೂಟ್ ಹೋಟೆಲ್​ ಅನ್ನು ಇದೀಗ ಸೀಜ್ ಮಾಡಲಾಗಿದೆ. ಹೋಟೆಲ್‌ನ ಡಿಸ್ಪ್ಲೇ ಬೋರ್ಡ್‌ನಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮ್ಯಾನೇಜರ್ ಅನ್ನು ಬಂಧಿಸಲಾಗಿದ್ದು, ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕನ್ನಡಿಗರಿಗೆ ಅಪಮಾನ ಕೇಸ್​​: ಮ್ಯಾನೇಜರ್ ಬಂಧನ, ಜಿಎಸ್​ ಸೂಟ್​ ಹೋಟೆಲ್​ ಸೀಜ್
ಜಿ.ಎಸ್​.ಸೂಟ್​ ಹೋಟೆಲ್​ ಸೀಜ್
Edited By:

Updated on: May 18, 2025 | 9:22 AM

ಬೆಂಗಳೂರು, ಮೇ 18: ನಿನ್ನೆ ನಗರದ ಕೋರಮಂಗಲ (Koramangala) ಜಿ.ಎಸ್​.ಸೂಟ್​ ಹೋಟೆಲ್​ನಲ್ಲಿ (Hotel Gs Suites) ಕನ್ನಡಿಗರನ್ನ‌ ನಿಂದಿಸುವ ಡಿಸ್​ಪ್ಲೇ ಬೋರ್ಡ್‌ ಹಾಕಿ ಅವಮಾನಿಸಿರುವಂತಹ ಘಟನೆ ನಡೆದಿತ್ತು. ಇದು ಕನ್ನಡಿಗರನ್ನ ಮತ್ತೆ ಕೆರಳಿಸುವಂತೆ ಮಾಡಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮ್ಯಾನೇಜರ್ ಸರ್ಫಜ್​​ ಎಂಬಾತನನ್ನು ಬಂಧಿಸಲಾಗಿದ್ದು, ಕನ್ನಡಿಗರಿಗೆ ಅಪಮಾನ ಮಾಡಿದ್ದ ಜಿ.ಎಸ್​.ಸೂಟ್​ ಹೋಟೆಲ್​​ ಸೀಜ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಹೋಟೆಲ್​​ ಮಾಲೀಕ ಜಮ್ಸದ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ನಮ್ಮ‌ ನೆಲದ ಅನ್ನ ತಿಂದು ನಮ್ಮನ್ನೇ ಅವಮಾನಿಸುತ್ತಿದ್ದಾರೆ.‌ ಪದೆ-ಪದೇ ಕನ್ನಡಿಗರನ್ನ ಕೆರಳಿಸುತ್ತಿದ್ದಾರೆ.  ಕೋರಮಂಗಲದ‌‌ ನೆಕ್ಸಸ್ ಮಾಲ್ ಸಮೀಪದಲ್ಲಿ ಜಿ.ಎಸ್​.ಸೂಟ್​ ಹೋಟೆಲ್​ ಇದೆ. ಈ ಹೋಟೆಲ್​​ನ ಹೊರಭಾಗದ ಡಿಸ್​ಪ್ಲೇ ಬೋರ್ಡ್​ನಲ್ಲಿ ನಿನ್ನೆ ರಾತ್ರಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದರು. ಅದನ್ನ ಗಮನಿಸಿದ ಸ್ಥಳೀಯರು ವಿಡಿಯೋ ಮಾಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡಿದ್ದಾರೆ. ಬಳಿಕ ವಿಡಿಯೋ ನೋಡ್ತಿದ್ದಂತೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ.

ಇದನ್ನೂ ಓದಿ: ಮತ್ತೊಮ್ಮೆ ಕನ್ನಡಿಗರಿಗೆ ಅವಮಾನ, ಕೋರಮಂಗಲದ ಹೋಟೆಲೊಂದರ ವಿರುದ್ಧ ದೂರು ದಾಖಲು

ಇದನ್ನೂ ಓದಿ
ರಾತ್ರಿ ಸುರಿದ ಭಾರಿ ಮಳೆಗೆ ನಡುಗಿದ ಬೆಂಗಳೂರು: ಸಾಯಿಲೇಔಟ್​​ ಜಲಾವೃತ
ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಜೋರು
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಜೋರು ಮಳೆ, ಟ್ರಾಫಿಕ್​ ಜಾಮ್​

ಈ ವೇಳೆ ತಕ್ಷಣ ಅಲರ್ಟ್ ಆದ ಮಡಿವಾಳ ಪೊಲೀಸರು ಹೋಟೆಲ್​ಗೆ ಬಂದು ಪರಿಶೀಲನೆ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿ ಅಬ್ದುಲ್ ‌ಸಮಾದ್ ಹಾಗೂ ಮ್ಯಾನೇಜರ್​ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಜೊತೆಗೆ ಡಿಸ್​ಪ್ಲೇ ಬೋರ್ಡ್ ವಶಕ್ಕೆ ಪಡೆದು, ಹೋಟೆಲ್ ಮೇಲೆ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.‌

ಕಳೆದ ಮೂರು ವರ್ಷದಿಂದ ಕೋರಮಂಗಲದ ಓರ್ವ ವ್ಯಕ್ತಿ ಈ ಡಿಸ್​ಪ್ಲೇ ಬೋರ್ಡ್ ನಿರ್ವಹಣೆ ಮಾಡ್ತಿದ್ದಾರಂತೆ. ಡಿಸ್​ಪ್ಲೇ ಕಂಟ್ರೋಲರ್ ಯಾರೋ ಹ್ಯಾಕ್ ಮಾಡಿದ್ದಾರೆ ಎಂದು ಮಾಲೀಕರು ಹೇಳಿದ್ದಾರೆ. ಆದರೆ ಪೊಲೀಸರ ತನಿಖೆ ನಂತರವೇ ಅಸಲಿ ಸತ್ಯ ಹೊರಬರಬೇಕಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಜೋರು, ಬೆಂಗಳೂರಿಗೆ ಯೆಲ್ಲೋ ಅಲರ್ಟ್​

ಒಟ್ಟಿನಲ್ಲಿ ಹೊಟ್ಟೆ ಪಾಡಿಗಾಗಿ ಕರ್ನಾಟಕಕ್ಕೆ ವಲಸೆ ಬಂದಿರುವ ಇಂತಹ ಜನರ ಸೊಕ್ಕು ಇಳಿಯಬೇಕಿದೆ. ಕನ್ನಡಿಗರಿ ಅವಮಾನ ಮಾಡಿದ ಕಿಡಿಗೇಡಿಗಳಿಗೆ ಕನ್ನಡದ ಪಾಠ ಮಾಡಬೇಕಿದೆ. ಜೊತೆಗೆ ಕನ್ನಡಿಗರ ಸ್ವಾಭಿಮಾನದ ಕಿಚ್ಚಿನ ಬಿಸಿ ತಾಕಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us