AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್

ಮಡಕಶಿರದಲ್ಲಿ ಕೆಎಸ್ಆರ್​ಟಿಸಿ ಬಸ್ ಒಂದು ಸರಣಿ ಅಪಘಾತಕ್ಕೀಡಾಗಿದೆ. ಚಾಲಕನಿಗೆ ಫಿಟ್ಸ್ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಒಬ್ಬ ರೈತ ತೀವ್ರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಗಳು ಬೆಚ್ಚಿಬೀಳಿಸುವಂತಿವೆ. ಕೆಎಸ್​ಆರ್​ಟಿಸಿ ಇನ್ನೂ ಯಾವುದೇ ಪರಿಹಾರ ನೀಡಿಲ್ಲ ಎನ್ನಲಾಗುತ್ತಿದೆ.

ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್
ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್
ಕಿರಣ್​ ಸೂರ್ಯ
| Edited By: |

Updated on:Dec 29, 2024 | 4:44 PM

Share

ಬೆಂಗಳೂರು, ಡಿಸೆಂಬರ್​ 29: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ (accident) ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿ‌ನಗರದ ಬಳಿ ನಡೆದಿದೆ. ಬಸ್​​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಸ್ಪಲ್ಪ ಯಾಮಾರಿದ್ದರೆ ಹತ್ತಾರು ಅಮಾಯಕರ ಪ್ರಾಣ ಹೋಗುತ್ತಿತ್ತು. ಘಟನೆಯಲ್ಲಿ ಓರ್ವ ರೈತನಿಗೆ ತೀವ್ರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನೆಲಮಂಗಲ ಡಿಪೋ, ಚಿತ್ರದುರ್ಗ ವಿಭಾಗಕ್ಕೆ ಸೇರಿದ KA-57F4409 ನಂಬರ್​ ಕೆಎಸ್​ಆರ್​ಟಿಸಿ ಬಸ್ ಪಾವಗಡ ಟು ಬೆಂಗಳೂರಿಗೆ ಸಂಚರಿಸುತ್ತಿತ್ತು. ಚಾಲಕ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದನಂತೆ. ಅಪಘಾತದ ವೇಳೆ ಚಾಲಕನಿಗೆ ಫಿಟ್ಸ್ ಬಂದಿತ್ತಂತೆ. ಈ ವೇಳೆ ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು, ಒಂದು ಗೂಡ್ಸ್ ಆಟೋ ಮತ್ತು ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ದೇವನಹಳ್ಳಿ: ಗೆಳೆಯನ ಹತ್ಯೆ ಮಾಡಿ ದೃಶ್ಯಂ ಸಿನಿಮಾ ರೀತಿ ಕಥೆ ಕಟ್ಟಿದ ವ್ಯಕ್ತಿ, ತನಿಖೆಯಲ್ಲಿ ಬಯಲಾಯ್ತು ಭಯಾನಕ ಸಂಗತಿ

ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರೈತ ನಾರಾಯಣ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಕೆಎಸ್​ಆರ್​ಟಿಸಿಯಿಂದ ಒಬ್ಬರೇ ಒಬ್ಬರು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ. ಒಂದು ರೂ ಕೂಡ ಪರಿಹಾರ ನೀಡಿಲ್ಲವಂತೆ. ಸದ್ಯ  ಮಡಕಶಿರ ಪೋಲಿಸರು ಎಫ್ಐಆರ್ ದಾಖಲಿಸಿ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಮೈನಿಂಗ್ ಲಾರಿ ಡಿಕ್ಕಿ: ಬೈಕ್​ನಲ್ಲಿದ್ದ ಇಬ್ಬರು ಸಾವು

ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಸವಾರರಿಬ್ಬರು ಸಾವನ್ನಪ್ಪಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರ ಬಳಿ ನಡೆದಿದೆ. ಆದಿಕೇಶ್ವರ(20), ಸಂತೋಷ್​​(22) ಮೃತರು. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಒಂದೇ ಬೈಕ್‌ನಲ್ಲಿ ನಾಲ್ವರು ಯುವಕರು ತೆರಳುತ್ತಿದ್ದರು. ಸಂಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Sun, 29 December 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್