AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್

ಮಡಕಶಿರದಲ್ಲಿ ಕೆಎಸ್ಆರ್​ಟಿಸಿ ಬಸ್ ಒಂದು ಸರಣಿ ಅಪಘಾತಕ್ಕೀಡಾಗಿದೆ. ಚಾಲಕನಿಗೆ ಫಿಟ್ಸ್ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಒಬ್ಬ ರೈತ ತೀವ್ರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಗಳು ಬೆಚ್ಚಿಬೀಳಿಸುವಂತಿವೆ. ಕೆಎಸ್​ಆರ್​ಟಿಸಿ ಇನ್ನೂ ಯಾವುದೇ ಪರಿಹಾರ ನೀಡಿಲ್ಲ ಎನ್ನಲಾಗುತ್ತಿದೆ.

ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್
ಕೆಎಸ್​ಆರ್​ಟಿಸಿ ಬಸ್ ಚಾಲಕನಿಗೆ ಫಿಟ್ಸ್, ಸರಣಿ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್
Kiran Surya
| Edited By: |

Updated on:Dec 29, 2024 | 4:44 PM

Share

ಬೆಂಗಳೂರು, ಡಿಸೆಂಬರ್​ 29: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ (accident) ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿ‌ನಗರದ ಬಳಿ ನಡೆದಿದೆ. ಬಸ್​​ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಸ್ಪಲ್ಪ ಯಾಮಾರಿದ್ದರೆ ಹತ್ತಾರು ಅಮಾಯಕರ ಪ್ರಾಣ ಹೋಗುತ್ತಿತ್ತು. ಘಟನೆಯಲ್ಲಿ ಓರ್ವ ರೈತನಿಗೆ ತೀವ್ರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನೆಲಮಂಗಲ ಡಿಪೋ, ಚಿತ್ರದುರ್ಗ ವಿಭಾಗಕ್ಕೆ ಸೇರಿದ KA-57F4409 ನಂಬರ್​ ಕೆಎಸ್​ಆರ್​ಟಿಸಿ ಬಸ್ ಪಾವಗಡ ಟು ಬೆಂಗಳೂರಿಗೆ ಸಂಚರಿಸುತ್ತಿತ್ತು. ಚಾಲಕ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದನಂತೆ. ಅಪಘಾತದ ವೇಳೆ ಚಾಲಕನಿಗೆ ಫಿಟ್ಸ್ ಬಂದಿತ್ತಂತೆ. ಈ ವೇಳೆ ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು, ಒಂದು ಗೂಡ್ಸ್ ಆಟೋ ಮತ್ತು ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ದೇವನಹಳ್ಳಿ: ಗೆಳೆಯನ ಹತ್ಯೆ ಮಾಡಿ ದೃಶ್ಯಂ ಸಿನಿಮಾ ರೀತಿ ಕಥೆ ಕಟ್ಟಿದ ವ್ಯಕ್ತಿ, ತನಿಖೆಯಲ್ಲಿ ಬಯಲಾಯ್ತು ಭಯಾನಕ ಸಂಗತಿ

ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರೈತ ನಾರಾಯಣ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ತಲೆಗೆ ತೀವ್ರವಾಗಿ ಗಾಯಗೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಕೆಎಸ್​ಆರ್​ಟಿಸಿಯಿಂದ ಒಬ್ಬರೇ ಒಬ್ಬರು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ. ಒಂದು ರೂ ಕೂಡ ಪರಿಹಾರ ನೀಡಿಲ್ಲವಂತೆ. ಸದ್ಯ  ಮಡಕಶಿರ ಪೋಲಿಸರು ಎಫ್ಐಆರ್ ದಾಖಲಿಸಿ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಮೈನಿಂಗ್ ಲಾರಿ ಡಿಕ್ಕಿ: ಬೈಕ್​ನಲ್ಲಿದ್ದ ಇಬ್ಬರು ಸಾವು

ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಸವಾರರಿಬ್ಬರು ಸಾವನ್ನಪ್ಪಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರ ಬಳಿ ನಡೆದಿದೆ. ಆದಿಕೇಶ್ವರ(20), ಸಂತೋಷ್​​(22) ಮೃತರು. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಒಂದೇ ಬೈಕ್‌ನಲ್ಲಿ ನಾಲ್ವರು ಯುವಕರು ತೆರಳುತ್ತಿದ್ದರು. ಸಂಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Sun, 29 December 24

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ