AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ
ಯುವಕ ಭರತ್​ (ಬಲಚಿತ್ರ) ಬೈಕ್​ (ಎಡಚಿತ್ರ)
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Oct 18, 2023 | 10:07 AM

Share

ಬೆಂಗಳೂರು ಅ.18: ಪ್ರೊಬೆಷನರಿ ಮಹಿಳಾ ಪಿಎಸ್ಐ (PSI) ಮೇಲೆ ವ್ಯಕ್ತಿಯೋರ್ವ ನಿಂದನೆ ಮಾಡಿರುವ ಘಟನೆ ಗೋವಿಂದರಾಜನಗರದ (Govindaraj Nagar) ಸುಬ್ಬಣ್ಣ ಗಾರ್ಡನ್ ಬಳಿ ನಡೆದಿದೆ. ಗೋವಿಂದರಾಜನಗರ ನಿವಾಸಿಯಾಗಿರುವ ಭರತ್ ವೇಗವಾಗಿ ಬೈಕ್​​ ಚಲಾಯಿಸಿಕೊಂಡು ಬರುತ್ತಿದ್ದನು. ಇದನ್ನು ಕಂಡ ಪ್ರೊಬೆಷನರಿ ಮಹಿಳಾ ಪಿಎಸ್ಐ ಅಶ್ವಿನಿ ಹಿಪ್ಪರಗಿ ಬೈಕ್ ತಡೆದು ಬುದ್ಧಿವಾದ ಹೇಳಿ ತಮ್ಮ ಬೈಕ್​ ತೆರಳುತ್ತಿದ್ದರು.

ಪಿಎಸ್ಐ ಅಶ್ವಿನಿ ಅವರನ್ನು ಹಿಂಬಾಲಿಸಿದ ಭರತ್​​, ತನ್ನ ಬೈಕ್​ನಿಂದ​​ ಅವರ ಬೈಕ್​​ಗೆ ಗುದ್ದಿದ್ದಾನೆ. ಬಳಿಕ ನನ್ನತ್ರ ಇಟ್ಕೊಂಡ್ರೆ ಇದೇ ಗತಿ ಅಂತ ದಮ್ಕಿ ಹಾಕಿ ಎಸ್ಕೇಪ್ ಆಗಿದ್ದಾನೆ. ಬೈಕ್ ಡಿಕ್ಕಿ ರಭಸಕ್ಕೆ ಪಿಎಸ್ಐ ಅಶ್ವಿನಿ ಹಿಪ್ಪರಗಿ ಕೆಳಗೆ ಬಿದ್ದಿದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಗೋವಿಂದರಾಜನಗರ ಪೊಲೀಸರು ಆರೋಪಿ ಭರತ್​ನನ್ನು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 353, 279, 337, 504ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್