AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರೊಬೆಷನರಿ ಮಹಿಳಾ ಪಿಎಸ್ಐ ಮೇಲೆ ದರ್ಪ, ಬೈಕ್​ನಿಂದ ಗುದ್ದಿ ದಮ್ಕಿ​ ಹಾಕಿದ ವ್ಯಕ್ತಿ
ಯುವಕ ಭರತ್​ (ಬಲಚಿತ್ರ) ಬೈಕ್​ (ಎಡಚಿತ್ರ)
Jagadisha B
| Edited By: |

Updated on: Oct 18, 2023 | 10:07 AM

Share

ಬೆಂಗಳೂರು ಅ.18: ಪ್ರೊಬೆಷನರಿ ಮಹಿಳಾ ಪಿಎಸ್ಐ (PSI) ಮೇಲೆ ವ್ಯಕ್ತಿಯೋರ್ವ ನಿಂದನೆ ಮಾಡಿರುವ ಘಟನೆ ಗೋವಿಂದರಾಜನಗರದ (Govindaraj Nagar) ಸುಬ್ಬಣ್ಣ ಗಾರ್ಡನ್ ಬಳಿ ನಡೆದಿದೆ. ಗೋವಿಂದರಾಜನಗರ ನಿವಾಸಿಯಾಗಿರುವ ಭರತ್ ವೇಗವಾಗಿ ಬೈಕ್​​ ಚಲಾಯಿಸಿಕೊಂಡು ಬರುತ್ತಿದ್ದನು. ಇದನ್ನು ಕಂಡ ಪ್ರೊಬೆಷನರಿ ಮಹಿಳಾ ಪಿಎಸ್ಐ ಅಶ್ವಿನಿ ಹಿಪ್ಪರಗಿ ಬೈಕ್ ತಡೆದು ಬುದ್ಧಿವಾದ ಹೇಳಿ ತಮ್ಮ ಬೈಕ್​ ತೆರಳುತ್ತಿದ್ದರು.

ಪಿಎಸ್ಐ ಅಶ್ವಿನಿ ಅವರನ್ನು ಹಿಂಬಾಲಿಸಿದ ಭರತ್​​, ತನ್ನ ಬೈಕ್​ನಿಂದ​​ ಅವರ ಬೈಕ್​​ಗೆ ಗುದ್ದಿದ್ದಾನೆ. ಬಳಿಕ ನನ್ನತ್ರ ಇಟ್ಕೊಂಡ್ರೆ ಇದೇ ಗತಿ ಅಂತ ದಮ್ಕಿ ಹಾಕಿ ಎಸ್ಕೇಪ್ ಆಗಿದ್ದಾನೆ. ಬೈಕ್ ಡಿಕ್ಕಿ ರಭಸಕ್ಕೆ ಪಿಎಸ್ಐ ಅಶ್ವಿನಿ ಹಿಪ್ಪರಗಿ ಕೆಳಗೆ ಬಿದ್ದಿದ್ದು, ಸಣ್ಣ ಪುಟ್ಟ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು. ಗೋವಿಂದರಾಜನಗರ ಪೊಲೀಸರು ಆರೋಪಿ ಭರತ್​ನನ್ನು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 353, 279, 337, 504ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯವೆಸಗಿದ ಹಾಗೂ ಪಿಎಸ್​ಐ ಬೈಕ್​ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಹಿನ್ನೆಲೆ ಆರೋಪಿ ವಿರುದ್ಧ ರೌಡಿಶೀಟ್ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ