ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ನಕಲಿ ಸಿಗರೇಟ್ ಸ್ಮಗ್ಲಿಂಗ್: ಲಕ್ಷಾಂತರ ಮೌಲ್ಯದ ನಕಲಿ ಸಿಗರೇಟ್ ಸೀಜ್

ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸರು ದೆಹಲಿಯಿಂದ ಬರುತ್ತಿದ್ದ 27 ಲಕ್ಷ ರೂಪಾಯಿ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಯೂಸಫ್ ಎಂಬಾತನನ್ನು ಬಂಧಿಸಲಾಗಿದೆ. ಐಟಿಸಿ ಕಂಪನಿಯ ಸಿಗರೇಟ್‌ಗಳನ್ನು ಅದೇ ರೀತಿ ತಯಾರಿಸಲಾಗಿದ್ದ ನಕಲಿ ಸಿಗರೇಟ್‌ಗಳು ಜ್ಯೂಸ್ ಪ್ಯಾಕೆಟ್‌ಗಳ ರೂಪದಲ್ಲಿ ಸಾಗಿಸಲಾಗುತ್ತಿತ್ತು.

ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ನಕಲಿ ಸಿಗರೇಟ್ ಸ್ಮಗ್ಲಿಂಗ್: ಲಕ್ಷಾಂತರ ಮೌಲ್ಯದ ನಕಲಿ ಸಿಗರೇಟ್ ಸೀಜ್
ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ನಕಲಿ ಸಿಗರೇಟ್ ಸ್ಮಗ್ಲಿಂಗ್: ಲಕ್ಷಾಂತರ ಮೌಲ್ಯದ ನಕಲಿ ಸಿಗರೇಟ್ ಸೀಜ್
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on: Feb 02, 2025 | 6:37 PM

ಬೆಂಗಳೂರು, ಫೆಬ್ರವರಿ 02: ಧೂಮಪಾನ ಆರೋಗ್ಯಕ್ಕೆ ಹಾನಿಕರ ಅಂತಾ ಗೊತ್ತಿದ್ದರೂ ಜನ ಮಾತ್ರ ಅದನ್ನು ಬಿಡಲ್ಲ. ಜನರ ಈ ಚಟವನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಕಿರಾತಕರು ಸಿಗರೇಟ್​ಗಳನ್ನು (Cigarette) ಸಹ ನಕಲಿ ಮಾಡಿ ಮಾರಾಟ ಮಾಡುತ್ತಿದ್ದಾರೆ. ಈಗ ಪೊಲೀಸರು ಇಂತಹ ಒಂದು ಜಾಲವನ್ನು ಭೇದಿಸಿ ಆರೋಪಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ನಕಲಿ ಪ್ರಾಡಕ್ಟ್ ಮಾರಾಟ ಜಾಲ ಪತ್ತೆ

ಇತ್ತೀಚೆಗೆ ಯಾವುದು ನಕಲಿ, ಯಾವುದು ಅಸಲಿ ಅನ್ನೋದೆ ಗೊತ್ತಾಗ್ತಿಲ್ಲ. ತಿನ್ನೋ ಆಹಾರದಿಂದ ಹಿಡಿದು ವಾಶ್ ರೂಂ ತೊಳೆಯೋ ವಸ್ತುಗಳು ಸಹ ಕಲಬೆರಕೆಯಾಗುತ್ತಿವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ನಕಲಿ ವಸ್ತುಗಳ ಹಾವಳಿ ಜೋರಾಗಿದೆ.‌ ಅನೇಕ ಬಾರಿ ಬೆಂಗಳೂರು ಪೊಲೀಸರು ನಕಲಿ ವಸ್ತುಗಳನ್ನು ಸೀಜ್ ಮಾಡ್ತಾನೆ ಇರ್ತಾರೆ.‌ ಈಗ ಅಂತಹದ್ದೇ ಒಂದು ನಕಲಿ ಪ್ರಾಡಕ್ಟ್ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ವಿಲ್ಸನ್ ಗಾರ್ಡನ್ ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಕುವೈತ್​​ನಲ್ಲಿ ಅರಳಿದ್ದ ಪ್ರೀತಿ ವಿಜಯಪುರದಲ್ಲಿ ಅಂತ್ಯ: ಪ್ರೇಮಿಯನ್ನೇ ನಂಬಿ ಮೋಸ ಹೋದ ಆಂಧ್ರ ಬೆಡಗಿ

ಯೆಸ್. ಸಿಲಿಕಾನ್ ಸಿಟಿ ಬೆಂಗಳೂರಿಗೆ ರಾಷ್ಟ್ರ ರಾಜಧಾನಿ ದೆಹಲಿಯಿಂದ ನಕಲಿ ಸಿಗರೇಟ್ ಸ್ಮಗ್ಲಿಂಗ್ ಮಾಡಲಾಗುತ್ತಿತ್ತು. ಐಟಿಸಿ ಕಂಪನಿಯ ಸಿಗರೇಟ್ ಮಾದರಿಯಲ್ಲಿ ಅಸಲಿ ಸಿಗರೇಟ್ ತಲೆ ಮೇಲೆ ಹೊಡೆದ ಹಾಗೆ ನಕಲಿ ಸಿಗರೇಟ್ ತಯಾರಿಸಲಾಗುತ್ತಿತ್ತು. ಜ್ಯೂಸ್ ಪ್ಯಾಕೆಟ್​ಗಳು ತುಂಬಿರುವ ಬಾಕ್ಸ್ ಅಂತಾ ಹೇಳಿಕೊಂಡು ನಕಲಿ ಸಿಗರೇಟ್ ಸಪ್ಲೈ ಮಾಡಲಾಗುತ್ತಿತ್ತು. ಇದರಿಂದ ಐಟಿಸಿ ಕಂಪನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿತ್ತು.

ಇನ್ನೂ ನಕಲಿ ಸಿಗರೇಟ್ ಮಾರಾಟ ಮಾಡುತ್ತಿರುವ ಆರೋಪಿಗಳ ಕಳ್ಳಾಟ ಐಟಿಸಿ ಕಂಪನಿಗೆ ಗೊತ್ತಾದ ಕೂಡಲೇ ವಿಲ್ಸಲ್ ಗಾರ್ಡನ್ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರು ಅಷ್ಟೇ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಯೂಸಫ್ ಎಂಬಾತನನ್ನು ಬಂಧಿಸಿ 27 ಲಕ್ಷ ರೂ. ಮೌಲ್ಯದ ನಕಲಿ ಸಿಗರೇಟ್ ಸೀಜ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್, ಸುಲಿಗೆ

ಜೊತೆಗೆ ನಕಲಿ ಸಿಗರೇಟ್ ಸಾಗಿಸಲು ಬಳಸಿದ್ದ ಒಂದು ಗೂಡ್ಸ್ ವಾಹನ, ಆರೋಪಿ ಬಳಸುತ್ತಿದ್ದ ಕಾರನ್ನು ಸೀಜ್ ಮಾಡಿ ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆ ಒಂದೇ ದಿನ ಬೆಂಗಳೂರಿಗೆ ಇಷ್ಟೊಂದು ಮೌಲ್ಯದ ನಕಲಿ ಸಿಗರೇಟ್ ಬರುತ್ತಿದೆ ಅಂದರೆ ತಿಂಗಳಲ್ಲಿ ಎಷ್ಟು ಸಪ್ಲೈ ಆಗುತ್ತಿದೆ ಎಂಬುದನ್ನು ಊಹೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇನ್ನಾದರೂ ಸಂಬಂಧಪಟ್ಟವರು ಈ ನಕಲಿ ವಸ್ತುಗಳ ಹಾವಳಿ ತಡೆಯಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಕುಟುಂಬದ ಮನೆಯನ್ನು ಸೀಜ್ ಮಾಡಿರುವ ಎಎಮ್​ಒಎಮ್ ಫೈನಾನ್ಸ್ ಸಂಸ್ಥೆ
ಕುಟುಂಬದ ಮನೆಯನ್ನು ಸೀಜ್ ಮಾಡಿರುವ ಎಎಮ್​ಒಎಮ್ ಫೈನಾನ್ಸ್ ಸಂಸ್ಥೆ
ಸಿದ್ದರಾಮಯ್ಯ ರಾಜೀನಾಮೆ: ಕೋರ್ಟ್​ ತೀರ್ಪು ಮೊದಲೇ ಸ್ನೇಹಮಯಿ ಕೃಷ್ಣ ಭವಿಷ್ಯ
ಸಿದ್ದರಾಮಯ್ಯ ರಾಜೀನಾಮೆ: ಕೋರ್ಟ್​ ತೀರ್ಪು ಮೊದಲೇ ಸ್ನೇಹಮಯಿ ಕೃಷ್ಣ ಭವಿಷ್ಯ
‘ಮಜಾ ಟಾಕೀಸ್’ಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಮಂದಿ; ಮಸ್ತ್ ಮಜಾ
‘ಮಜಾ ಟಾಕೀಸ್’ಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಮಂದಿ; ಮಸ್ತ್ ಮಜಾ
ಪಿಒಕೆಯಲ್ಲಿ ಹಮಾಸ್ ನಾಯಕನಿಗೆ ವಿಐಪಿ ಸ್ವಾಗತ
ಪಿಒಕೆಯಲ್ಲಿ ಹಮಾಸ್ ನಾಯಕನಿಗೆ ವಿಐಪಿ ಸ್ವಾಗತ