AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರ ಗಮನಕ್ಕೆ: ಇಂದಿನಿಂದ ಬೆಂಗಳೂರಿನ ಈ ಫ್ಲೈ ಓವರ್ ಬಂದ್

NHAI ಕಾಮಗಾರಿ ಹಿನ್ನೆಲೆ ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ.

ವಾಹನ ಸವಾರರ ಗಮನಕ್ಕೆ: ಇಂದಿನಿಂದ ಬೆಂಗಳೂರಿನ ಈ ಫ್ಲೈ ಓವರ್ ಬಂದ್
ವಾಹನ ಸವಾರರ ಗಮನಕ್ಕೆ.. ಇಂದಿನಿಂದ ಬೆಂಗಳೂರಿನ ಈ ಫ್ಲೈ ಓವರ್ ಬಂದ್
ರಾಚಪ್ಪಾಜಿ ನಾಯ್ಕ್
| Edited By: |

Updated on:Mar 05, 2025 | 6:44 PM

Share

ಬೆಂಗಳೂರು, ಮಾರ್ಚ್​ 05: ಕಾಮಗಾರಿ ಹಿನ್ನೆಲೆ ಇಂದಿನಿಂದ ರಾತ್ರಿ ವೇಳೆ ಅಂದರೆ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (Flyover) ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಈ ಕುರಿತಾಗಿ ಪತ್ರಿಕಾ ಪ್ರಕಟನೆ ಹೊರಡಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರದ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್​​ ಬೋರ್ಡ್ ಫ್ಲೈಓವರ್ ಕ್ಲೋಸ್ ಆಗಲಿದ್ದು, ಬೆಳಗ್ಗೆ 6ರಿಂದ ರಾತ್ರಿ 11ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೂ ಫ್ಲೈಓವರ್ ಕ್ಲೋಸ್ ಆಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ
Image
ಪೀಣ್ಯ ಮೇಲ್ಸೇತುವೆ ಜುಲೈ ಕೊನೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಮುಕ್ತ
Image
ಬೆಂಗಳೂರಿನ ದಕ್ಷಿಣ ಭಾರತದ ಫಸ್ಟ್ ಡಬಲ್ ಡೆಕ್ಕರ್ ಫ್ಲೈಓವರ್ ವಿಶೇಷತೆಗಳು
Image
ಬೆಂಗಳೂರಿನ ಈ ಫ್ಲೈಓವರ್​ ಮೇಲೆ ಇಂದಿನಿಂದ ಸಂಚಾರ ಬಂದ್​!
Image
ಬೆಂಗಳೂರು ಟ್ರಾಫಿಕ್​​ ನಿವಾರಣೆಗೆ ಕೃತಕ ಬುದ್ಧಿಮತ್ತೆ! ಏನಿದರ ವಿಶೇಷ?

ಪ್ರಕಟಣೆಯಲ್ಲಿ ಏನಿದೆ?

ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈಓವರ್​ನಲ್ಲಿ NHAI ವತಿಯಿಂದ ಪ್ರಮುಖ ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದ್ದು ಹಾಗಾಗಿ ಮಾರ್ಚ್​ 5ರಿಂದ ನಾಳೆ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಮತ್ತು ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಕಡೆಗೆ ಎಲಿವೇಟೆಡ್ ಫ್ಲೈಓವರ್​ನಲ್ಲಿ ಎರಡೂ ಕಡೆಗಳಲ್ಲಿ ರಾತ್ರಿ 11-00 ಗಂಟೆಯಿಂದ ಮರುದಿನ ಬೆಳಿಗ್ಗೆ 06-00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು.

ಬೆಳಿಗ್ಗೆ ವೇಳೆಯಲ್ಲಿ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 11-00 ಗಂಟೆಯವರೆಗೆ ಇದು ಎಲ್ಲಾ ರೀತಿಯ ವಾಹನಗಳಿಗೆ ಸಂಚಾರಕ್ಕೆ ತೆರೆದಿರುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಸಂಚಾರ ಡಿಸಿಪಿ ಶಿವಪ್ರಕಾಶ್ ಡಿ ಹೇಳಿದ್ದಿಷ್ಟು

ದಕ್ಷಿಣ ವಿಭಾಗ ಸಂಚಾರ ಡಿಸಿಪಿ ಶಿವಪ್ರಕಾಶ್ ಡಿ ಪ್ರತಿಕ್ರಿಯಿಸಿದ್ದು, ಇಂದು ರಾತ್ರಿಯಿಂದ ಫ್ಲೈ ಓವರ್ ಬಂದ್ ಆಗಲಿದೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ರವರೆಗೆ ಬಂದ್ ಆಗಿರಲಿದೆ. NHAI ಕಡೆಯಿಂದ ಕಾಮಗಾರಿ ಹಿನ್ನೆಲೆ ಬಂದ್ ಆಗಲಿದೆ. ಎಲ್ಲಾ ರೀತಿ ವಾಹನಕ್ಕೆ ನಿರ್ಬಂಧವಿದೆ, ಎಲ್ಲರು ಸಹಕರಿಸಿಬೇಕು. ಒಂದು ತಿಂಗಳ ತನಕ NHAI ಕೆಲಸ ನಡೆಯಬಹುದು. ಅದಕ್ಕಿಂತ ಮುಂಚೆ ಮುಗಿದರೆ ಫ್ಲೈ ಓವರ್ ಓಪನ್ ಮಾಡ್ತಿವಿ. ರಾತ್ರಿ ವೇಳೆ ಆಗಿರುವುದರಿಂದ ಹೆಚ್ಚು ಸಂಚಾರ ಸಮಸ್ಯೆ ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ದರ ಏರಿಕೆ ನಂತರ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಳ: ವರದಿ

ಇನ್ನು ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಾಕಷ್ಟು ಸರಣಿ ಅಪಘಾತಗಳು ಸಂಭವಿಸಿವೆ. ಅಲ್ಲದೇ ಸಾಕಷ್ಟು ಭಾರಿ ಟ್ರಾಫಿಕ್ ಜಾಮ್​​ ಕೂಡ ಉಂಟಾಗುತ್ತಿದ್ದವು. ಹೀಗಾಗಿ ಫ್ಲೈಓವರ್ ಮೇಲೆ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧಿಸುವ ಬಗ್ಗೆ ಕೂಡ ಚಿಂತನೆ ನಡೆದಿದೆ. ಈ ಬಗ್ಗೆ ಬೆಂಗಳೂರು ಎಲಿವೇಟೆಡ್​ ಟೋಲ್​ ಪ್ರೈವೇಟ್​ ಲಿಮಿಟೆಡ್​ ಎಂಬ ಕಂಪನಿ ಸಂಚಾರ ಪೊಲೀಸರಿಗೆ ಪತ್ರ ಕೂಡ ಬರೆಯಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:48 pm, Wed, 5 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್