AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NPA ಲಿಸ್ಟ್​ನಲ್ಲಿರುವ ಬ್ಯಾಂಕ್ ಖಾತೆ ಟಾರ್ಗೆಟ್ ಮಾಡಿ ವಂಚನೆ: ಕೇರಳ ಮೂಲದ ಇಬ್ಬರ ಬಂಧನ

ನಂಬಿ ಬಂದವರಿಂದ ಲಕ್ಷಾಂತರ ಹಣ ಪಡೆದು ವಂಚನೆ ಮಾಡುತ್ತಿದ್ದರು. ಸತೀಶನ್ ಎಂಬುವವರಿಗೆ ಆರೋಪಿಗಳು 82 ಲಕ್ಷ ವಂಚಿಸಿದ್ದರು. ನಂತರ ಲೋನ್​ನ ಕಂತನ್ನು ಸರಿಯಾಗಿ ಕಟ್ಟದ ಕಾರಣ ಎನ್​ಪಿಎ ಪಟ್ಟಿಗೆ ಸೇರಿಸಲಾಗಿತ್ತು.

NPA ಲಿಸ್ಟ್​ನಲ್ಲಿರುವ ಬ್ಯಾಂಕ್ ಖಾತೆ ಟಾರ್ಗೆಟ್ ಮಾಡಿ ವಂಚನೆ: ಕೇರಳ ಮೂಲದ ಇಬ್ಬರ ಬಂಧನ
ಬಂಧಿತ ಆರೋಪಿಗಳು.
TV9 Web
| Edited By: |

Updated on: Jul 06, 2022 | 10:02 AM

Share

ಬೆಂಗಳೂರು: ಎನ್​​ಪಿಎ (NPA) ಲಿಸ್ಟ್​ನಲ್ಲಿರುವ ಬ್ಯಾಂಕ್ ಖಾತೆಗಳ (Bank Accounts) ಟಾರ್ಗೆಟ್ ಮಾಡಿ ವಂಚಿಸುತಿದ್ದ ಕೇರಳ ಮೂಲದ ಆರೋಪಿಗಳನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರಾಘವ್ ಲಾಲ್, ಪಿಳ್ಳೆ ಬಂಧಿತ ಆರೋಪಿಗಳು. ತಮ್ಮದೇ ಆದ ಬ್ಯಾಂಕ್​​ನ ಕೆಲ ವ್ಯಕ್ತಿಗಳ ಜೊತೆ ಸಂಪರ್ಕ ಹೊಂದಿದ್ದು, ಈ ವೇಳೆ ಎನ್​ಪಿ ಪಟ್ಟಿಯಲ್ಲಿರುವ ಅಕೌಂಟ್​ಗಳನ್ನ ಆರೋಪಿಗಳು ಪತ್ತೆ ಮಾಡುತ್ತಿದ್ದು, 5 ಕೋಟಿಗೂ ಅಧಿಕ ಲೋನ್ ಪಡೆದ ಖಾತೆಗಳೇ ಇವರ ಟಾರ್ಗೆಟ್. ನಂತರ ಖಾತೆಯ ಹೊಲ್ಡರ್​ಗೆ ಕಾಲ್ ಮಾಡಿ ಆಮಿಷ ಒಡ್ಡುತ್ತಿದ್ದರು. ಕಡಿಮೆ ಹಣಕ್ಕೆ ಎಲ್ಲವನ್ನೂ ಕ್ಲಿಯರ್ ಮಾಡಿಸೊದಾಗಿ ಹೇಳಿ, ನಂಬಿ ಬಂದವರಿಂದ ಲಕ್ಷಾಂತರ ಹಣ ಪಡೆದು ವಂಚನೆ ಮಾಡುತ್ತಿದ್ದರು. ಸತೀಶನ್ ಎಂಬುವವರಿಗೆ ಆರೋಪಿಗಳು 82 ಲಕ್ಷ ವಂಚಿಸಿದ್ದರು. ನಂತರ ಲೋನ್​ನ ಕಂತನ್ನು ಸರಿಯಾಗಿ ಕಟ್ಟದ ಕಾರಣ ಎನ್​ಪಿಎ ಪಟ್ಟಿಗೆ ಸೇರಿಸಲಾಗಿತ್ತು.

ಇದನ್ನೂ ಓದಿ: ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ

ಈ ವೇಳೆ ಪರಿಚಯವಾದ ಇಬ್ಬರಿಂದ ವಂಚನೆ ಮಾಡಿದ್ದಾರೆ. ಬ್ಯಾಂಕ್​ನ ಉದ್ಯೋಗಿಗಳ ಜೊತೆ ಸಂಬಂಧವಿದ್ದು, ಹಣ ಕೊಟ್ಟರೆ ಕೆಲಸ ಆಗತ್ತೆ ಎಂದು ನಂಬಿಸಿ ವಂಚಿಸಿದ್ದಾರೆ. ವಂಚನೆಗೊಳಗಾದ ಸತೀಶನ್​ ಬಳಿಕ ಜಯನಗರ ಪೊಲೀಸ್ ಠಾಣೆಗೆ ವಂಚನೆ ಬಗ್ಗೆ ದೂರು ನೀಡಿದ್ದು, ಜಯನಗರ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಮತ್ತಷ್ಟು ಮಂದಿಗೆ ಇದೇ ಮಾದರಿ ವಂಚನೆಯ ಅನುಮಾನ ವ್ಯಕ್ತವಾಗಿದೆ. ಸದ್ಯ ಜಯನಗರ ಪೊಲೀಸರಿಂದ ತನಿಖೆ ನಡೆಯುತ್ತಿದೆ.

 3 ಜನ ಗಾಂಜಾ ಮಾರಾಟಗಾರರ ಬಂಧನ:

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರಿಂದ 3 ಜನ ಗಾಂಜಾ ಮಾರಾಟಗಾರರ ಬಂಧಿಸಿರುವಂತಹ ಘಟನೆ ನಡೆದಿದೆ. ಸೈಯದ್ ನೂರ್, ಅಬ್ಬಲ್ ಖಾನ್, ಇರ್ಪಾನ್ ಖಾನ್ ಬಂಧಿತ ಆರೋಪಿ. 10ಲಕ್ಷಕ್ಕೂ ಹೆಚ್ಚು ಬೆಲೆಬಾಳುವ 51ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಕಾರು ಜಪ್ತಿ ಮಾಡಲಾಗಿದೆ. ನೈಸ್​ಗೆ ಸಂಸ್ಥೆಗೆ ಸೇರಿದ ನವಿಲೆ ಲೇಔಟ್ ನಲ್ಲಿ ಆರೋಪಿಗಳು ಬಲೆಗೆ ಬಿದಿದ್ದಾರೆ. ಇನ್ನೋರ್ವ ಪ್ರಮುಖ  ಆರೋಪಿ ಆಂದ್ರ ಪ್ರದೇಶದ ದೇವುಗಾಗಿ ಪೊಲೀಸರ ಶೋಧ ನಡೆಯುತ್ತಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ; India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್