AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NPA ಲಿಸ್ಟ್​ನಲ್ಲಿರುವ ಬ್ಯಾಂಕ್ ಖಾತೆ ಟಾರ್ಗೆಟ್ ಮಾಡಿ ವಂಚನೆ: ಕೇರಳ ಮೂಲದ ಇಬ್ಬರ ಬಂಧನ

ನಂಬಿ ಬಂದವರಿಂದ ಲಕ್ಷಾಂತರ ಹಣ ಪಡೆದು ವಂಚನೆ ಮಾಡುತ್ತಿದ್ದರು. ಸತೀಶನ್ ಎಂಬುವವರಿಗೆ ಆರೋಪಿಗಳು 82 ಲಕ್ಷ ವಂಚಿಸಿದ್ದರು. ನಂತರ ಲೋನ್​ನ ಕಂತನ್ನು ಸರಿಯಾಗಿ ಕಟ್ಟದ ಕಾರಣ ಎನ್​ಪಿಎ ಪಟ್ಟಿಗೆ ಸೇರಿಸಲಾಗಿತ್ತು.

NPA ಲಿಸ್ಟ್​ನಲ್ಲಿರುವ ಬ್ಯಾಂಕ್ ಖಾತೆ ಟಾರ್ಗೆಟ್ ಮಾಡಿ ವಂಚನೆ: ಕೇರಳ ಮೂಲದ ಇಬ್ಬರ ಬಂಧನ
ಬಂಧಿತ ಆರೋಪಿಗಳು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 06, 2022 | 10:02 AM

ಬೆಂಗಳೂರು: ಎನ್​​ಪಿಎ (NPA) ಲಿಸ್ಟ್​ನಲ್ಲಿರುವ ಬ್ಯಾಂಕ್ ಖಾತೆಗಳ (Bank Accounts) ಟಾರ್ಗೆಟ್ ಮಾಡಿ ವಂಚಿಸುತಿದ್ದ ಕೇರಳ ಮೂಲದ ಆರೋಪಿಗಳನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರಾಘವ್ ಲಾಲ್, ಪಿಳ್ಳೆ ಬಂಧಿತ ಆರೋಪಿಗಳು. ತಮ್ಮದೇ ಆದ ಬ್ಯಾಂಕ್​​ನ ಕೆಲ ವ್ಯಕ್ತಿಗಳ ಜೊತೆ ಸಂಪರ್ಕ ಹೊಂದಿದ್ದು, ಈ ವೇಳೆ ಎನ್​ಪಿ ಪಟ್ಟಿಯಲ್ಲಿರುವ ಅಕೌಂಟ್​ಗಳನ್ನ ಆರೋಪಿಗಳು ಪತ್ತೆ ಮಾಡುತ್ತಿದ್ದು, 5 ಕೋಟಿಗೂ ಅಧಿಕ ಲೋನ್ ಪಡೆದ ಖಾತೆಗಳೇ ಇವರ ಟಾರ್ಗೆಟ್. ನಂತರ ಖಾತೆಯ ಹೊಲ್ಡರ್​ಗೆ ಕಾಲ್ ಮಾಡಿ ಆಮಿಷ ಒಡ್ಡುತ್ತಿದ್ದರು. ಕಡಿಮೆ ಹಣಕ್ಕೆ ಎಲ್ಲವನ್ನೂ ಕ್ಲಿಯರ್ ಮಾಡಿಸೊದಾಗಿ ಹೇಳಿ, ನಂಬಿ ಬಂದವರಿಂದ ಲಕ್ಷಾಂತರ ಹಣ ಪಡೆದು ವಂಚನೆ ಮಾಡುತ್ತಿದ್ದರು. ಸತೀಶನ್ ಎಂಬುವವರಿಗೆ ಆರೋಪಿಗಳು 82 ಲಕ್ಷ ವಂಚಿಸಿದ್ದರು. ನಂತರ ಲೋನ್​ನ ಕಂತನ್ನು ಸರಿಯಾಗಿ ಕಟ್ಟದ ಕಾರಣ ಎನ್​ಪಿಎ ಪಟ್ಟಿಗೆ ಸೇರಿಸಲಾಗಿತ್ತು.

ಇದನ್ನೂ ಓದಿ: ನಾಸಿಕ್​ನಲ್ಲಿ ಅಫ್ಘಾನಿಸ್ತಾನದ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನಿಗೆ ಗುಂಡಿಕ್ಕಿ ಹತ್ಯೆ

ಈ ವೇಳೆ ಪರಿಚಯವಾದ ಇಬ್ಬರಿಂದ ವಂಚನೆ ಮಾಡಿದ್ದಾರೆ. ಬ್ಯಾಂಕ್​ನ ಉದ್ಯೋಗಿಗಳ ಜೊತೆ ಸಂಬಂಧವಿದ್ದು, ಹಣ ಕೊಟ್ಟರೆ ಕೆಲಸ ಆಗತ್ತೆ ಎಂದು ನಂಬಿಸಿ ವಂಚಿಸಿದ್ದಾರೆ. ವಂಚನೆಗೊಳಗಾದ ಸತೀಶನ್​ ಬಳಿಕ ಜಯನಗರ ಪೊಲೀಸ್ ಠಾಣೆಗೆ ವಂಚನೆ ಬಗ್ಗೆ ದೂರು ನೀಡಿದ್ದು, ಜಯನಗರ ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಮತ್ತಷ್ಟು ಮಂದಿಗೆ ಇದೇ ಮಾದರಿ ವಂಚನೆಯ ಅನುಮಾನ ವ್ಯಕ್ತವಾಗಿದೆ. ಸದ್ಯ ಜಯನಗರ ಪೊಲೀಸರಿಂದ ತನಿಖೆ ನಡೆಯುತ್ತಿದೆ.

 3 ಜನ ಗಾಂಜಾ ಮಾರಾಟಗಾರರ ಬಂಧನ:

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರಿಂದ 3 ಜನ ಗಾಂಜಾ ಮಾರಾಟಗಾರರ ಬಂಧಿಸಿರುವಂತಹ ಘಟನೆ ನಡೆದಿದೆ. ಸೈಯದ್ ನೂರ್, ಅಬ್ಬಲ್ ಖಾನ್, ಇರ್ಪಾನ್ ಖಾನ್ ಬಂಧಿತ ಆರೋಪಿ. 10ಲಕ್ಷಕ್ಕೂ ಹೆಚ್ಚು ಬೆಲೆಬಾಳುವ 51ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಕಾರು ಜಪ್ತಿ ಮಾಡಲಾಗಿದೆ. ನೈಸ್​ಗೆ ಸಂಸ್ಥೆಗೆ ಸೇರಿದ ನವಿಲೆ ಲೇಔಟ್ ನಲ್ಲಿ ಆರೋಪಿಗಳು ಬಲೆಗೆ ಬಿದಿದ್ದಾರೆ. ಇನ್ನೋರ್ವ ಪ್ರಮುಖ  ಆರೋಪಿ ಆಂದ್ರ ಪ್ರದೇಶದ ದೇವುಗಾಗಿ ಪೊಲೀಸರ ಶೋಧ ನಡೆಯುತ್ತಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ; India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ