AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರ ಆರಂಭ: ಇಲ್ಲಿದೆ ವಿವರ

Bannerghatta Biological Park Leopard Safari: ದೇಶದ ಅತಿದೊಡ್ಡ ಚಿರತೆ ಸಫಾರಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆರಂಭವಾಗಲಿದೆ. ಸಫಾರಿ ಆರಂಭಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಚಿರತೆಗಳಿಗೆ ಸಹಬಾಳ್ವೆ ತರಬೇತಿ ನೀಡುವುದೂ ಸೇರಿದಂತೆ ಇನ್ನೂ ಏನೇನು ಸಿದ್ಧತೆ ನಡೆಯುತ್ತಿವೆ? ಸಫಾರಿ ಯಾವಾಗ ಆರಂಭವಾಗಬಹುದು? ಇಲ್ಲಿದೆ ಮಾಹಿತಿ.

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರ ಆರಂಭ: ಇಲ್ಲಿದೆ ವಿವರ
ಬನ್ನೇರುಘಟ್ಟ ಜೈವಿಕ ಉದ್ಯಾನವನ
Follow us
Ganapathi Sharma
|

Updated on: Feb 20, 2024 | 8:55 AM

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಮೊದಲ ಮತ್ತು ದೇಶದಲ್ಲೇ ಅತಿದೊಡ್ಡ ಚಿರತೆ ಸಫಾರಿ (Leopard Safari) ಬೆಂಗಳೂರಿನ (Bengaluru) ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta Biological Park) ಶೀಘ್ರದಲ್ಲೇ ಆರಂಭವಾಗಲಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ಸಿಂಹ ಮತ್ತು ಹುಲಿ ಸಫಾರಿ ಮಾದರಿಯಲ್ಲಿ ಚಿರತೆ ಸಫಾರಿಯನ್ನು ಶೀಘ್ರ ಆರಂಭಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆ ಮತ್ತು ಮೃಗಾಲಯ ನಿರ್ವಹಣಾ ಅಧಿಕಾರಿಗಳಿಗೆ ಸೂಚಿಸಿದ್ದರು. ಹೀಗಾಗಿ ಚಿರತೆ ಸಫಾರಿ ಶೀಘ್ರ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ.

ಯಾವಾಗಿನಿಂದ ಆರಂಭ?

ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಒಂದೂವರೆ ತಿಂಗಳಲ್ಲಿ ಸಫಾರಿಯನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿಸಬಹುದು. ಆದರೆ, ಲೋಕಸಭೆ ಚುನಾವಣೆಯ ಕಾರಣ ಮಾದರಿ ನೀತಿ ಸಂಹಿತೆ ಜಾರಿಗೆ ಬಂದರೆ ಮೇ ನಂತರವಷ್ಟೇ ಸಫಾರಿಯನ್ನು ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿಸಬಹುದು ಎಂದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿರತೆಗಳಿಗೆ ಬೇಕು ಸಹಬಾಳ್ವೆ ತರಬೇತಿ

ಬೇರೆ ಬೇರೆ ಕಡೆಯಿಂದ ತಂದಿರುವ ಚಿರತೆಗಳು ಇರುವ ಕಾರಣ ಸಹಬಾಳ್ವೆ ಬಗ್ಗೆ ಅವುಗಳಿಗೆ ತರಬೇತಿ ನೀಡುವ ಅಗತ್ಯವಿದೆ. ಅವುಗಳ ನಡುವೆ ಹೊಂದಾಣಿಕೆ ಮೂಡಿಸಬೇಕಿದೆ. ದಕ್ಷಿಣ ಆಫ್ರಿಕಾದಿಂದ ಮಧ್ಯಪ್ರದೇಶದ ಕುನೋ ರಕ್ಷಿತಾರಣ್ಯಕ್ಕೆ ತರಲಾದ ಚಿರತೆಗಳ ವಿಷಯದಲ್ಲಿ ಅವುಗಳು ಸಹಬಾಳ್ವೆ ನಡೆಸದೆ ಸಮಸ್ಯೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ ಕಾರ್ಯಪ್ರವೃತ್ತರಾಗಬೇಕಾಗುತ್ತದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಚಿರತೆ ಸಫಾರಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ಪ್ರದೇಶದಲ್ಲಿ 20 ಹೆಕ್ಟೇರ್‌ಗಳನ್ನು ಗುರುತಿಸಲಾಗಿದೆ. ಚಿರತೆಗಳು ತಪ್ಪಿಸಿಕೊಳ್ಳಲು ಅವಕಾಶ ಆಗದಂತೆ ಎತ್ತರದ ಮೆಶ್ ಅನ್ನು ಹಾಕಲಾಗಿದ್ದು, ಬೇಲಿಗಳನ್ನೂ ಹಾಕಲಾಗಿದೆ.

ಮೃಗಾಲಯದ ಅಧಿಕಾರಿಗಳು ನಿರ್ವಹಿಸುವ ಚಿರತೆ ಸಫಾರಿಗಳು ಈಗಾಗಲೇ ಮಹಾರಾಷ್ಟ್ರದ ನಾಗ್ಪುರ ಮತ್ತು ಬಿಹಾರದ ರಾಜ್‌ಗಿರ್‌ನಲ್ಲಿ ತೆರೆದಿವೆ. ಆದರೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಸಫಾರಿ ಅವುಗಳಿಗಿಂತ ದೊಡ್ಡದಾಗಿರಲಿದೆ.

ಈಗ ಗುರುತಿಸಿರುವ ಪ್ರದೇಶದಲ್ಲಿ 20 ಚಿರತೆಗಳನ್ನು ಇಡಬಹುದು. ಸದ್ಯ 12 ಇವೆ. ಅವುಗಳು ಪರಸ್ಪರ ಒಗ್ಗಿಕೊಳ್ಳುವಂತೆ ಮಾಡಲಾಗುತ್ತಿದೆ. ಈ ಚಿರತೆಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಸನ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಒಂಟಿ ಸಲಗ, ಭಯಭೀತರಾದ ಗ್ರಾಮಸ್ಥರು

ಹುಲಿಗಳು ಮತ್ತು ಸಿಂಹಗಳಿಗಿಂತ ಭಿನ್ನವಾಗಿ, ಚಿರತೆಗಳು ಬಹಳ ಚುರುಕುಬುದ್ಧಿಯವು. ತಪ್ಪಿಸಿಕೊಳ್ಳಲು ಸಾಧ್ಯವಿರುವ ಯಾವುದೇ ಮಾರ್ಗವನ್ನು ಕಂಡುಕೊಳ್ಳುತ್ತವೆ. ಆದ್ದರಿಂದ ಆವರಣವನ್ನು ರಚಿಸುವಾಗ ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿರಿಸಲಾಗಿದೆ.

ಸದ್ಯ ಸಫಾರಿ ಪ್ರದೇಶದಲ್ಲಿ ಇಡಲಾಗುವ ಎಲ್ಲಾ ಚಿರತೆಗಳು ಕಡಿಮೆ ವಯಸ್ಸಿನವು ಮತ್ತು ಮೃಗಾಲಯದಲ್ಲೇ ಸಾಕಿರುವಂಥವು. ಅವು ಚಿಕ್ಕ ಮರಿಗಳಾಗಿದ್ದಾಗ ಅರಣ್ಯ ಇಲಾಖೆಯ ಸಿಬ್ಬಂದಿ ಅಥವಾ ವ್ಯಕ್ತಿಗಳು ಹೊಲಗಳಿಂದ ರಕ್ಷಿಸಿ ತಂದವುಗಳಾಗಿವೆ. ದಾಖಲೆಗಳ ಪ್ರಕಾರ, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 70 ಚಿರತೆಗಳು, 19 ಹುಲಿಗಳು ಮತ್ತು 19 ಸಿಂಹಗಳು ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್