AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರ ಆರಂಭ: ಇಲ್ಲಿದೆ ವಿವರ

Bannerghatta Biological Park Leopard Safari: ದೇಶದ ಅತಿದೊಡ್ಡ ಚಿರತೆ ಸಫಾರಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆರಂಭವಾಗಲಿದೆ. ಸಫಾರಿ ಆರಂಭಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಚಿರತೆಗಳಿಗೆ ಸಹಬಾಳ್ವೆ ತರಬೇತಿ ನೀಡುವುದೂ ಸೇರಿದಂತೆ ಇನ್ನೂ ಏನೇನು ಸಿದ್ಧತೆ ನಡೆಯುತ್ತಿವೆ? ಸಫಾರಿ ಯಾವಾಗ ಆರಂಭವಾಗಬಹುದು? ಇಲ್ಲಿದೆ ಮಾಹಿತಿ.

ಬನ್ನೇರುಘಟ್ಟದಲ್ಲಿ ದೇಶದ ಅತಿದೊಡ್ಡ ಚಿರತೆ ಸಫಾರಿ ಶೀಘ್ರ ಆರಂಭ: ಇಲ್ಲಿದೆ ವಿವರ
ಬನ್ನೇರುಘಟ್ಟ ಜೈವಿಕ ಉದ್ಯಾನವನ
ಗಣಪತಿ ಶರ್ಮಾ
|

Updated on: Feb 20, 2024 | 8:55 AM

Share

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಮೊದಲ ಮತ್ತು ದೇಶದಲ್ಲೇ ಅತಿದೊಡ್ಡ ಚಿರತೆ ಸಫಾರಿ (Leopard Safari) ಬೆಂಗಳೂರಿನ (Bengaluru) ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta Biological Park) ಶೀಘ್ರದಲ್ಲೇ ಆರಂಭವಾಗಲಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ಸಿಂಹ ಮತ್ತು ಹುಲಿ ಸಫಾರಿ ಮಾದರಿಯಲ್ಲಿ ಚಿರತೆ ಸಫಾರಿಯನ್ನು ಶೀಘ್ರ ಆರಂಭಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆ ಮತ್ತು ಮೃಗಾಲಯ ನಿರ್ವಹಣಾ ಅಧಿಕಾರಿಗಳಿಗೆ ಸೂಚಿಸಿದ್ದರು. ಹೀಗಾಗಿ ಚಿರತೆ ಸಫಾರಿ ಶೀಘ್ರ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ.

ಯಾವಾಗಿನಿಂದ ಆರಂಭ?

ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಒಂದೂವರೆ ತಿಂಗಳಲ್ಲಿ ಸಫಾರಿಯನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿಸಬಹುದು. ಆದರೆ, ಲೋಕಸಭೆ ಚುನಾವಣೆಯ ಕಾರಣ ಮಾದರಿ ನೀತಿ ಸಂಹಿತೆ ಜಾರಿಗೆ ಬಂದರೆ ಮೇ ನಂತರವಷ್ಟೇ ಸಫಾರಿಯನ್ನು ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿಸಬಹುದು ಎಂದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿರತೆಗಳಿಗೆ ಬೇಕು ಸಹಬಾಳ್ವೆ ತರಬೇತಿ

ಬೇರೆ ಬೇರೆ ಕಡೆಯಿಂದ ತಂದಿರುವ ಚಿರತೆಗಳು ಇರುವ ಕಾರಣ ಸಹಬಾಳ್ವೆ ಬಗ್ಗೆ ಅವುಗಳಿಗೆ ತರಬೇತಿ ನೀಡುವ ಅಗತ್ಯವಿದೆ. ಅವುಗಳ ನಡುವೆ ಹೊಂದಾಣಿಕೆ ಮೂಡಿಸಬೇಕಿದೆ. ದಕ್ಷಿಣ ಆಫ್ರಿಕಾದಿಂದ ಮಧ್ಯಪ್ರದೇಶದ ಕುನೋ ರಕ್ಷಿತಾರಣ್ಯಕ್ಕೆ ತರಲಾದ ಚಿರತೆಗಳ ವಿಷಯದಲ್ಲಿ ಅವುಗಳು ಸಹಬಾಳ್ವೆ ನಡೆಸದೆ ಸಮಸ್ಯೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ ಕಾರ್ಯಪ್ರವೃತ್ತರಾಗಬೇಕಾಗುತ್ತದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಚಿರತೆ ಸಫಾರಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ಪ್ರದೇಶದಲ್ಲಿ 20 ಹೆಕ್ಟೇರ್‌ಗಳನ್ನು ಗುರುತಿಸಲಾಗಿದೆ. ಚಿರತೆಗಳು ತಪ್ಪಿಸಿಕೊಳ್ಳಲು ಅವಕಾಶ ಆಗದಂತೆ ಎತ್ತರದ ಮೆಶ್ ಅನ್ನು ಹಾಕಲಾಗಿದ್ದು, ಬೇಲಿಗಳನ್ನೂ ಹಾಕಲಾಗಿದೆ.

ಮೃಗಾಲಯದ ಅಧಿಕಾರಿಗಳು ನಿರ್ವಹಿಸುವ ಚಿರತೆ ಸಫಾರಿಗಳು ಈಗಾಗಲೇ ಮಹಾರಾಷ್ಟ್ರದ ನಾಗ್ಪುರ ಮತ್ತು ಬಿಹಾರದ ರಾಜ್‌ಗಿರ್‌ನಲ್ಲಿ ತೆರೆದಿವೆ. ಆದರೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಸಫಾರಿ ಅವುಗಳಿಗಿಂತ ದೊಡ್ಡದಾಗಿರಲಿದೆ.

ಈಗ ಗುರುತಿಸಿರುವ ಪ್ರದೇಶದಲ್ಲಿ 20 ಚಿರತೆಗಳನ್ನು ಇಡಬಹುದು. ಸದ್ಯ 12 ಇವೆ. ಅವುಗಳು ಪರಸ್ಪರ ಒಗ್ಗಿಕೊಳ್ಳುವಂತೆ ಮಾಡಲಾಗುತ್ತಿದೆ. ಈ ಚಿರತೆಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಸನ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಒಂಟಿ ಸಲಗ, ಭಯಭೀತರಾದ ಗ್ರಾಮಸ್ಥರು

ಹುಲಿಗಳು ಮತ್ತು ಸಿಂಹಗಳಿಗಿಂತ ಭಿನ್ನವಾಗಿ, ಚಿರತೆಗಳು ಬಹಳ ಚುರುಕುಬುದ್ಧಿಯವು. ತಪ್ಪಿಸಿಕೊಳ್ಳಲು ಸಾಧ್ಯವಿರುವ ಯಾವುದೇ ಮಾರ್ಗವನ್ನು ಕಂಡುಕೊಳ್ಳುತ್ತವೆ. ಆದ್ದರಿಂದ ಆವರಣವನ್ನು ರಚಿಸುವಾಗ ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿರಿಸಲಾಗಿದೆ.

ಸದ್ಯ ಸಫಾರಿ ಪ್ರದೇಶದಲ್ಲಿ ಇಡಲಾಗುವ ಎಲ್ಲಾ ಚಿರತೆಗಳು ಕಡಿಮೆ ವಯಸ್ಸಿನವು ಮತ್ತು ಮೃಗಾಲಯದಲ್ಲೇ ಸಾಕಿರುವಂಥವು. ಅವು ಚಿಕ್ಕ ಮರಿಗಳಾಗಿದ್ದಾಗ ಅರಣ್ಯ ಇಲಾಖೆಯ ಸಿಬ್ಬಂದಿ ಅಥವಾ ವ್ಯಕ್ತಿಗಳು ಹೊಲಗಳಿಂದ ರಕ್ಷಿಸಿ ತಂದವುಗಳಾಗಿವೆ. ದಾಖಲೆಗಳ ಪ್ರಕಾರ, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 70 ಚಿರತೆಗಳು, 19 ಹುಲಿಗಳು ಮತ್ತು 19 ಸಿಂಹಗಳು ಇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!