AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಉದ್ಯಾನದಲ್ಲಿ ಕ್ಯಾನ್ಸರ್ ಇನ್ಫೆಕ್ಷನ್​ನಿಂದ ಹುಲಿ ಸಾವು, ಹುಲಿಗಳ ಸಂಖ್ಯೆ 15ಕ್ಕೆ ಕುಸಿತ

ಕಿರಣ್ ಗೆ ಕಳೆದ ಮೂರು ತಿಂಗಳಿನಿಂದ ಚಿಕಿತ್ಸೆ ನೀಡಲಾಗ್ತಿತ್ತು. ಇದರೊಂದಿಗೆ ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಹುಲಿಗಳ ಸಂಖ್ಯೆ 15ಕ್ಕೆ ಕುಸಿದಿದೆ. ಈ ಹಿಂದೆಯೂ ಇನ್ಫೆಕ್ಷನ್​ನಿಂದ ಮತ್ತೊಂದು ಹುಲಿ ಮೃತಪಟ್ಟಿತ್ತು.

ಬನ್ನೇರುಘಟ್ಟ ಉದ್ಯಾನದಲ್ಲಿ ಕ್ಯಾನ್ಸರ್ ಇನ್ಫೆಕ್ಷನ್​ನಿಂದ ಹುಲಿ ಸಾವು, ಹುಲಿಗಳ ಸಂಖ್ಯೆ 15ಕ್ಕೆ ಕುಸಿತ
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಕ್ಯಾನ್ಸರ್ ಇನ್ಫೆಕ್ಷನ್​ನಿಂದ ಹುಲಿ ಸಾವು, ಹುಲಿಗಳ ಸಂಖ್ಯೆ 15ಕ್ಕೆ ಕುಸಿತ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 26, 2022 | 8:23 PM

ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್​ ತಾಲೂಕಿನ ಬನ್ನೇರುಘಟ್ಟ ಉದ್ಯಾನದಲ್ಲಿ (ಬನ್ನೇರುಘಟ್ಟ ಬಯಲಾಜಿಕಲ್‌ ಪಾರ್ಕ್ –Bannerghatta zoological park) ಮೂರೂವರೆ ವರ್ಷದ ಹುಲಿ (tiger) ಸಾವನ್ನಪ್ಪಿದೆ. ಕ್ಯಾನ್ಸರ್ ಮತ್ತು ಇನ್ಫೆಕ್ಷನ್​ನಿಂದ (cancer and infection) ಬಳಲುತ್ತಿದ್ದ ಕಿರಣ್ ಹೆಸರಿನ ಹುಲಿ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಮೃತಪಟ್ಟಿದೆ. ಕಿರಣ್ ಗೆ ಕಳೆದ ಮೂರು ತಿಂಗಳಿನಿಂದ ಚಿಕಿತ್ಸೆ ನೀಡಲಾಗ್ತಿತ್ತು. ಇದರೊಂದಿಗೆ ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಹುಲಿಗಳ ಸಂಖ್ಯೆ 15ಕ್ಕೆ ಕುಸಿದಿದೆ. ಈ ಹಿಂದೆಯೂ ಇನ್ಫೆಕ್ಷನ್​ನಿಂದ ಮತ್ತೊಂದು ಹುಲಿ ಮೃತಪಟ್ಟಿತ್ತು.

ಮರಿ ಆನೆ‌ ಆಗಮನ, ಇಡೀ ಪಾರ್ಕ್ ನಲ್ಲಿ ‌ಸಂಭ್ರಮದ ವಾತಾವರಣ 

ಆನೇಕಲ್​ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 15 ವರ್ಷದ ಆನೆ ವನಶ್ರೀ 3ನೇ ಮರಿಗೆ ಜನ್ಮನೀಡಿದೆ. ಈ ಹೆಣ್ಣಾನೆ ಜನನದೊಂದಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 26ಕ್ಕೇ ಏರಿದೆ. ಮರಿ ಆನೆ ಆರೋಗ್ಯವಾಗಿದ್ದು, ಮರಿ ಆನೆ‌ ಆಗಮನದಿಂದ ಇಡೀ ಪಾರ್ಕ್ ನಲ್ಲಿ ‌ಸಂಭ್ರಮದ ವಾತಾವರಣ ಮನೆ ಮಾಡಿದೆ.

ವೈದ್ಯರ ನಿರ್ಲಕ್ಷ್ಯ: ಧ್ವನಿಪೆಟ್ಟಿಗೆ ಶಸ್ತ್ರಚಿಕಿತ್ಸೆ ವೇಳೆ ಬಾಲಕಿ ಸಾವು

ರಾಯಚೂರಿನಲ್ಲಿ ಧ್ವನಿಪೆಟ್ಟಿಗೆ ಶಸ್ತ್ರಚಿಕಿತ್ಸೆ ವೇಳೆ ಬಾಲಕಿ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದ ಸಾಯಿಕೀರ್ತನಾ ಎಂಬ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ. ರಾಯಚೂರಿನ ಡಾ .ಪಠಾಣ್ ENT ನರ್ಸಿಂಗ್​ ಹೋಮ್​ನಲ್ಲಿ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಕೊಸಗಿ ಗ್ರಾಮದ ಆಂಜಿ ಮತ್ತು ಜ್ಯೋತಿ ದಂಪತಿ ಪುತ್ರಿ ಸಾಯಿಕೀರ್ತನಾ. ಆಂಜಿ, ಜ್ಯೋತಿ ದಂಪತಿ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಸಾಯಿಕೀರ್ತನಾಗೆ ಮಾತು ಬಾರದಿದ್ದರಿಂದ ಕಳೆದ ವರ್ಷ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಮತ್ತೆ, ಧ್ವನಿ ಹೋಗಿದ್ದರಿಂದ ಸಾಯಿಕೀರ್ತನಾಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ವೇಳೆ ಸಾಯಿಕೀರ್ತನಾ ಸಾವನ್ನಪ್ಪಿದ್ದಾಳೆ. ಇದೀಗ ಡಾ. ಪಠಾಣ್ ENT ನರ್ಸಿಂಗ್​ ಹೋಮ್ ವಿರುದ್ಧ ಮೃತ ಸಾಯಿಕೀರ್ತನಾ ಸಂಬಂಧಿಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Published On - 6:06 pm, Fri, 26 August 22

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ