AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಕವಿ ಕುವೆಂಪು ಅನೇಕರ ಪ್ರೋತ್ಸಾಹದಿಂದ ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು ಎಂಬ ಉಲ್ಲೇಖದ ಬಗ್ಗೆ ಸ್ಪಷ್ಟನೆ ನೀಡಿದ ಬರಗೂರು ರಾಮಚಂದ್ರಪ್ಪ

ನಾಲ್ಕನೇ ತರಗತಿಯ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲಿರುವ ಕುವೆಂಪು ಕುರಿತ ಪರಿಚಯ ನನ್ನ ನೇತೃತ್ವದ ಸಮಿತಿ ಬರೆದಿದ್ದು ಎಂದು ಹೇಳಿದ್ದಾರೆ. ಆದರೆ ಈ ಪರಿಚಯವು ಪಠ್ಯಪುಸ್ತಕದ ಮೂಲ ರಚನೆಯಲ್ಲಿ ಬರೆಯಲ್ಪಟ್ಟಿದೆ. ನಮ್ಮ ಕಾಲದ ಪಠ್ಯ ಪರಿಷ್ಕರಣೆ ವೇಳೆ ಬರೆದದ್ದಲ್ಲ.

ರಾಷ್ಟ್ರಕವಿ ಕುವೆಂಪು ಅನೇಕರ ಪ್ರೋತ್ಸಾಹದಿಂದ ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು ಎಂಬ ಉಲ್ಲೇಖದ ಬಗ್ಗೆ ಸ್ಪಷ್ಟನೆ ನೀಡಿದ ಬರಗೂರು ರಾಮಚಂದ್ರಪ್ಪ
ಬರಗೂರು ರಾಮಚಂದ್ರಪ್ಪ
TV9 Web
| Updated By: ಆಯೇಷಾ ಬಾನು|

Updated on:May 25, 2022 | 6:06 PM

Share

ಬೆಂಗಳೂರು: ರಾಷ್ಟ್ರಕವಿ ಕುವೆಂಪು(Kuvempu) ಅವರನ್ನು ಪರಿಚಯಿಸುವ ವಿಚಾರದಲ್ಲಿ ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು ಎಂದು ಉಲ್ಲೇಖ ಮಾಡಲಾಗಿದೆ. ನಾಲ್ಕನೇ ತರಗತಿಯ ಪರಿಸರ ಅಧ್ಯಯನ ಪಠ್ಯದಲ್ಲಿ ಸೇರಿರುವ ಈ ಉಲ್ಲೇಖ ಕುವೆಂಪು ಬಗ್ಗೆ ಹೀಗೆ ಬರೆದಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಸದ್ಯ ಈ ಬಗ್ಗೆ ಬರಗೂರು ರಾಮಚಂದ್ರಪ್ಪ(Baraguru Ramachandrappa) ಸ್ಪಷ್ಟನೆ ನೀಡಿದ್ದಾರೆ. ಈ ಸಾಲು ತಮ್ಮ ಕಾಲದಲ್ಲಿ ಬರೆದಿದ್ದಲ್ಲ ಎಂದು ಈ ಹಿಂದಿನ‌ ಸರ್ಕಾರದ ಅವಧಿಯಲ್ಲಿ ಪಠ್ಯ ಪರಿಷ್ಕರಣೆ ಸಮಿತಿಯ ಮುಖ್ಯಸ್ಥರಾಗಿದ್ದ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ ನೀಡಿದ್ದಾರೆ.

ನಾಲ್ಕನೇ ತರಗತಿಯ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲಿರುವ ಕುವೆಂಪು ಕುರಿತ ಪರಿಚಯ ನನ್ನ ನೇತೃತ್ವದ ಸಮಿತಿ ಬರೆದಿದ್ದು ಎಂದು ಹೇಳಿದ್ದಾರೆ. ಆದರೆ ಈ ಪರಿಚಯವು ಪಠ್ಯಪುಸ್ತಕದ ಮೂಲ ರಚನೆಯಲ್ಲಿ ಬರೆಯಲ್ಪಟ್ಟಿದೆ. ನಮ್ಮ ಕಾಲದ ಪಠ್ಯ ಪರಿಷ್ಕರಣೆ ವೇಳೆ ಬರೆದದ್ದಲ್ಲ. ಕುವೆಂಪು ಅವರ ಮನುಜ‌ ಮತ, ವಿಶ್ವಪಥ ಬೆಳಕಿನಲ್ಲಿ ಸಾಗುತ್ತಿರುವವನು ನಾನು. ನಾನು ಮತ್ತು ನನ್ನಂಥವರು ಕುವೆಂಪು ಅವರ ಅಪೂರ್ವ ಸಾಧನೆಯನ್ನು ಸ್ವಲ್ಪವೂ ಕಡೆಗಣಿಸಲು ಸಾಧ್ಯವೇ ಇಲ್ಲ. ಪಠ್ಯ ಪುಸ್ತಕ ವಿಷಯದಲ್ಲಿ ಈಗ ನಡೆಯುತ್ತಿರುವ ವಿವಾದಕ್ಕೆ ತೆರೆ ಎಳೆಯಲು ಸಿಎಂ ಮಧ್ಯಪ್ರವೇಶಿಸಬೇಕು. ಜನರಲ್ಲಿ ಶಿಕ್ಷಣ ಕ್ಷೇತ್ರದ ಬಗ್ಗೆ ಅಪನಂಬಿಕೆ ಮೂಡದಂತೆ ನೋಡಿಕೊಳ್ಳಬೇಕು ಎಂದು ತಮ್ಮ ನೇತೃತ್ವದ ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿ ಕುವೆಂಪು ಬಗ್ಗೆ ಬರೆದ ಪರಿಚಯವನ್ನು ಬರಗೂರು ರಾಮಚಂದ್ರಪ್ಪ ನೀಡಿದ್ದಾರೆ. ಇದನ್ನೂ ಓದಿ: IPL 2022: ನಾಕೌಟ್ ಪಂದ್ಯಗಳಲ್ಲಿ ಕೈ ಕೊಡುವ ಕೊಹ್ಲಿ: ಬದಲಾಗಲಿದೆಯಾ ಇತಿಹಾಸ?

ಅನೇಕರ ಪೋತ್ಸಾಹದಿಂದ ಕುವೆಂಪು ಬೆಳೆದರು ಎಂಬುದಿಲ್ಲ. ಸವಿಸ್ತಾರವಾಗಿ ಕುವೆಂಪು ಬಗ್ಗೆ ಬರಗೂರು ರಾಮಚಂದ್ರಪ್ಪ ಸಮಿತಿ ಪರಿಚಯ ಮಾಡಿಕೊಟ್ಟಿದೆ. ಕುವೆಂಪು ಅವರ ರಾಮಾಯಣ ದರ್ಶನ, ನೆನಪಿನ ದೋಣಿಯಲ್ಲಿ ಸೇರಿದಂತೆ 70 ಕೃತಿ ರಚನೆ ಎಂದು ಉಲ್ಲೇಖ ಮಾಡಲಾಗಿದೆ. ಕುವೆಂಪು ಅವರಿಗೆ ಬಂದ ಎಲ್ಲ ಪ್ರಮುಖ ಪ್ರಶಸ್ತಿ, ಪುರಸ್ಕಾರಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕುವೆಂಪು ಬಗ್ಗೆ ಬರೆದಿದ್ದು ಬರಗೂರು ಗ್ಯಾಂಗ್ ಎಂದ ಚಕ್ರತೀರ್ಥ ಪಠ್ಯದಲ್ಲಿ ಸದ್ಯ ಇರೋ ಕುವೆಂಪು ಪರಿಚಯ ಬರೆದಿದ್ದೇ ಬರಗೂರು ಗ್ಯಾಂಗ್ ಅಂತಾ ಫೇಸ್‌ಬುಕ್ ಪೋಸ್ಟ್ ಮಾಡಿರೋ ರೋಹಿತ್ ಚಕ್ರವರ್ತಿ, ಬರಗೂರು ರಾಮಚಂದ್ರಪ್ಪ ಅವ್ರೇ ಪಠ್ಯ ಪುಸ್ತಕವನ್ನ ಕುಲಗೆಡಿಸಿದ್ದಾರೆ ಅಂತಾ ಆರೋಪಿಸಿದ್ರು. ಇದನ್ನೂ ಓದಿ: 8 Years Of Modi Government: ಚಿಕ್ಕ ವಯಸ್ಸಲ್ಲೆ RSS​ ಪ್ರಚಾರಕನಾಗಿ ಸಮಾಜಮುಖಿಯಾದ ನರೇಂದ್ರ ಮೋದಿ, ಮುಂದೆ ದೇಶ ಸೇವೆಯಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ!

ಕುವೆಂಪು ಪಾಠವನ್ನ ತೆಗೆದಿಲ್ಲ ಎಂದು ಬರಗೂರು ತಿರುಗೇಟು ರೋಹಿತ್ ಚಕ್ರತೀರ್ಥ ಮತ್ತು ಸಚಿವರ ಸಚಿವರ ಆರೋಪಗಳಿಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ತಿರುಗೇಟು ಕೊಟ್ಟಿದ್ದಾರೆ. ನಾವೆಂದೂ ಕುವೆಂಪು ಅವರ ಪಾಠಗಳನ್ನ ಪುಸ್ತಕದಿಂದ ತೆಗೆದಿಲ್ಲ ಅಂತಾ ಸ್ಪಷ್ಟನೆ ಕೊಟ್ಟಿದ್ದಾರೆ.

Published On - 6:06 pm, Wed, 25 May 22

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ