AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ’: ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಶೋಷಣೆಯ ಆರೋಪ ಕೇಳಿಬಂದಿದೆ. ಮಠಕ್ಕೆ ಕರೆಸಿ, ಪ್ರಸಾದ ನೆಪದಲ್ಲಿ ವಿಶ್ವಾಸ ದುರುಪಯೋಗಪಡಿಸಿಕೊಂಡು ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ವಿಡಿಯೋ ಬಳಸಿ ಬ್ಲಾಕ್‌ಮೇಲ್ ಮಾಡುತ್ತಿದ್ದು, ಬೆತ್ತಲೆ ವಿಡಿಯೋ ಕರೆಗೆ ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

'ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ': ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!
ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Apr 07, 2026 | 1:26 PM

Share

ಬೆಂಗಳೂರು, ಏಪ್ರಿಲ್ 07: ನಗರದಲ್ಲಿ ಧಾರ್ಮಿಕ ಮುಖಂಡರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆಯೊಬ್ಬರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ (Harassment) ಹಾಗೂ ಮಾನಸಿಕ ಶೋಷಣೆಯ ಆರೋಪ ಮಾಡಿ ದೂರು ಸಲ್ಲಿಸಿದ್ದಾರೆ.

ಮಹಿಳೆಯ ದೂರಿನಲ್ಲೇನಿದೆ?

‘ನಾನು ಸ್ವಾಮಿಜಿ ಅವರ ಭಕ್ತೆಯಾಗಿದ್ದೆ. ಅವರು ನನ್ನನ್ನು ಮಠಕ್ಕೆ ಕರೆಸಿ ಪ್ರಸಾದ ಕೊಡುತ್ತೇನೆ ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ.ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ. ಆದ್ದರಿಂದ, ಈ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ FIR ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮುಖ್ಯಮಂತ್ರಿ, ಗೃಹ ಸಚಿವರಿಗೂ ದೂರು ಸಲ್ಲಿಕೆ

ಈ ಕುರಿತು ಮಹಿಳೆ ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯ ಮಹಿಳಾ ಆಯೋಗ ಹಾಗೂ ಮಾನವ ಹಕ್ಕು ಆಯೋಗ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಪ್ರಸ್ತುತ ಈ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ, ಆರೋಪಗಳು ಸಾಬೀತಾಗುವವರೆಗೆ ಯಾರನ್ನೂ ತಪ್ಪಿತಸ್ಥರಾಗಿ ಪರಿಗಣಿಸಲಾಗುವುದಿಲ್ಲ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆಯ ವರದಿ ಹೊರಬರುವುದನ್ನು ಕಾದು ನೋಡಲಾಗುತ್ತಿದೆ.

ಸ್ವಾಮೀಜಿಯಿಂದಲೂ ದೂರು!

ಏಪ್ರಿಲ್ 4ರಂದು ಸ್ವಾಮೀಜಿಯವರು ಮಹಿಳೆ ಸೇರಿ ನಾಲ್ವರ ವಿರುದ್ಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆಬ್ರವರಿ 11ರಂದು ಕಗ್ಗೋಡ ಬಳಿ ತಮ್ಮ ವಾಹನವನ್ನು ಅಡ್ಡಗಟ್ಟಿ ಹಣಕ್ಕಾಗಿ ಬೆದರಿಸಿ ಹಲ್ಲೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರು ಮೂಲದ ಮಹಿಳೆ ಸೇರಿ ಪೃಥ್ವಿಗೌಡ, ಯಶವಂತ್ ಹಾಗೂ ಸ್ಪೀಡ್ ನ್ಯೂಸ್ ಎಂಡಿ ವೀರೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಹಿಳೆ  ಫೌಂಡೇಷನ್ ಹೆಸರಿನಲ್ಲಿ ಹಣ ಬೇಡಿಕೆ ಇಟ್ಟು, ನೀಡದಿದ್ದರೆ ಅಪಪ್ರಚಾರ ಹಾಗೂ ಸುಳ್ಳು ಆರೋಪ ಮಾಡುವುದಾಗಿ ಬೆದರಿಸಿದ್ದಾಳೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Tue, 7 April 26

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ