‘ಬೆತ್ತಲೆ ವೀಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ’: ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ!
ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಶೋಷಣೆಯ ಆರೋಪ ಕೇಳಿಬಂದಿದೆ. ಮಠಕ್ಕೆ ಕರೆಸಿ, ಪ್ರಸಾದ ನೆಪದಲ್ಲಿ ವಿಶ್ವಾಸ ದುರುಪಯೋಗಪಡಿಸಿಕೊಂಡು ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ವಿಡಿಯೋ ಬಳಸಿ ಬ್ಲಾಕ್ಮೇಲ್ ಮಾಡುತ್ತಿದ್ದು, ಬೆತ್ತಲೆ ವಿಡಿಯೋ ಕರೆಗೆ ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಬೆಂಗಳೂರು, ಏಪ್ರಿಲ್ 07: ನಗರದಲ್ಲಿ ಧಾರ್ಮಿಕ ಮುಖಂಡರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆಯೊಬ್ಬರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ (Harassment) ಹಾಗೂ ಮಾನಸಿಕ ಶೋಷಣೆಯ ಆರೋಪ ಮಾಡಿ ದೂರು ಸಲ್ಲಿಸಿದ್ದಾರೆ.
ಮಹಿಳೆಯ ದೂರಿನಲ್ಲೇನಿದೆ?
‘ನಾನು ಸ್ವಾಮಿಜಿ ಅವರ ಭಕ್ತೆಯಾಗಿದ್ದೆ. ಅವರು ನನ್ನನ್ನು ಮಠಕ್ಕೆ ಕರೆಸಿ ಪ್ರಸಾದ ಕೊಡುತ್ತೇನೆ ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ.ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ. ಆದ್ದರಿಂದ, ಈ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ FIR ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಾಂಟ್ರಾಕ್ಟರ್ ಅನುಮಾನಾಸ್ಪದ ಸಾವು!
ಮುಖ್ಯಮಂತ್ರಿ, ಗೃಹ ಸಚಿವರಿಗೂ ದೂರು ಸಲ್ಲಿಕೆ
ಈ ಕುರಿತು ಮಹಿಳೆ ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯ ಮಹಿಳಾ ಆಯೋಗ ಹಾಗೂ ಮಾನವ ಹಕ್ಕು ಆಯೋಗ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಪ್ರಸ್ತುತ ಈ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ, ಆರೋಪಗಳು ಸಾಬೀತಾಗುವವರೆಗೆ ಯಾರನ್ನೂ ತಪ್ಪಿತಸ್ಥರಾಗಿ ಪರಿಗಣಿಸಲಾಗುವುದಿಲ್ಲ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆಯ ವರದಿ ಹೊರಬರುವುದನ್ನು ಕಾದು ನೋಡಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:07 pm, Tue, 7 April 26



