AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ನಲ್ಲೇ ಅಡ್ಮಿಷನ್ ಆದ್ರೂ ತರಗತಿ ಆರಂಭಿಸದ ಆರೋಪ; ಬಸವನಗುಡಿಯ BMS ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಪ್ರತಿಭಟನೆ

BMS ಇಂಜಿನಿಯರಿಂಗ್ ಸಂಜೆ ಕಾಲೇಜು ವಿದ್ಯಾರ್ಥಿಗಳು ತರಗತಿ ಆರಂಭಿಸಿಲ್ಲವೆಂದು ಧರಣಿ ನಡೆಸಿದ್ದಾರೆ. ನಮಗೆ ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸೋಲ್ಲ ಅಂತಾ ದಿಕ್ಕಾರ ಕೂಗಿದ್ದಾರೆ.

ಡಿಸೆಂಬರ್​ನಲ್ಲೇ ಅಡ್ಮಿಷನ್ ಆದ್ರೂ ತರಗತಿ ಆರಂಭಿಸದ ಆರೋಪ; ಬಸವನಗುಡಿಯ BMS ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಪ್ರತಿಭಟನೆ
ಬಸವನಗುಡಿಯ BMS ಕಾಲೇಜ್
TV9 Web
| Updated By: ಆಯೇಷಾ ಬಾನು|

Updated on:Feb 16, 2022 | 8:47 AM

Share

ಬೆಂಗಳೂರು: ಡಿಸೆಂಬರ್ನಲ್ಲೇ ಅಡ್ಮಿಷನ್ ಆದ್ರೂ ತರಗತಿ ಆರಂಭಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಬಿ.ಎಂ.ಎಸ್ ಕಾಲೇಜು((BMS Womens College) ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. BMS ಇಂಜಿನಿಯರಿಂಗ್ ಸಂಜೆ ಕಾಲೇಜು ವಿದ್ಯಾರ್ಥಿಗಳು ತರಗತಿ ಆರಂಭಿಸಿಲ್ಲವೆಂದು ಧರಣಿ ನಡೆಸಿದ್ದಾರೆ. ನಮಗೆ ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸೋಲ್ಲ ಅಂತಾ ದಿಕ್ಕಾರ ಕೂಗಿದ್ದಾರೆ. ತರಗತಿ ಶುರುವಾಗುವವರೆಗೂ ಹೋರಾಟ ಮಾಡುತ್ತೇವೆ ಅಂತಾ ಪಟ್ಟು ಹಿಡಿದಿದ್ದಾರೆ.

ಪ್ರತಿಭಟನೆಗೆ ಕಾರಣಗಳೇನು? ಡಿಸೆಂಬರ್ನಲ್ಲಿ ನಮಗೆ ದಾಖಲಾತಿ ಮಾಡಿಕೊಂಡಿದ್ದಾರೆ. ಮೂರನೇ ಸೆಮಿಸ್ಟರ್ಗೆ ನಾವು ಬಿಎಂಎಸ್ ಇಂಜಿನಿಯರಿಂಗ್ ಸಂಜೆ ಕಾಲೇಜಿಗೆ ಸಾವಿರಾರು ರೂಪಾಯಿ ನೀಡಿ ಆಡ್ಮೀಷನ್ ಆಗಿದ್ದೇವೆ. ಜನವರಿ 2 ರಿಂದ ಕಾಲೇಜು ತರಗತಿ ಶುರು ಅಂತಾ ಹೇಳಿದ್ರು. ಅದರೇ ಇಲ್ಲಿವರೆಗೆ ನಮಗೆ ತರಗತಿಗಳನ್ನ ಶುರು ಮಾಡಿಲ್ಲ. 46 ದಿನಗಳಿಂದ ಯಾವುದೇ ಸರಿಯಾದ ಮಾಹಿತಿ ನೀಡ್ತಿಲ್ಲ. ಪ್ರತಿನಿತ್ಯ ಸಂಜೆ ಕಾಲೇಜಿಗೆ ಬರೋದು ತರಗತಿ ಇಲ್ಲದೇ ವಾಪಸ್ ಹೋಗ್ತಿದ್ದೇವೆ. ಪ್ರಿನ್ಸಿಪಾಲ್ ಗಮನಕ್ಕೆ ತಂದಿದ್ದೇವೆ, ಸರ್ಕಾರದ ಗಮನಕ್ಕೂ ತಂದಿದ್ದೇವೆ. ಆದರೇ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ತಿಂಗಳು ಪರೀಕ್ಷೆ ಶುರುವಾಗಲಿದೆ. ತರಗತಿಗಳೇ ಇಲ್ಲದೇ ನಾವೂ ಹೇಗೆ ಪರೀಕ್ಷೆ ಎದುರಿಸೋದು. ಬೆಳಗ್ಗೆ ಸಮಯದಲ್ಲಿ ಕೆಲಸ ಮಾಡಿಕೊಂಡು ಸಂಜೆ ವಿದ್ಯಾಭ್ಯಾಸ ಮಾಡಲು ಬಂದಿದ್ದೇವೆ. ಆದರೇ ಇಲ್ಲಿ ಇನ್ನೂ ತರಗತಿಗಳೇ ಶುರು ಮಾಡದೇ ನಮ್ಮ ಭವಿಷ್ಯದ ಜೊತೆ ಆಟವಾಡಿತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಬಸವನಗುಡಿ ಬಳಿಯ ಪಿಜ್ಜಾ ಶಾಪ್​ನಲ್ಲಿ ಪ್ರೇಮಿಸಲು ನಿರಾಕರಿಸಿದ ಯುವತಿ ಮೇಲೆ ಹಲ್ಲೆ; ಆರೋಪಿ ಮ್ಯಾನೇಜರ್ ಬಂಧನ

Published On - 8:42 am, Wed, 16 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ