AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ನಲ್ಲೇ ಅಡ್ಮಿಷನ್ ಆದ್ರೂ ತರಗತಿ ಆರಂಭಿಸದ ಆರೋಪ; ಬಸವನಗುಡಿಯ BMS ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಪ್ರತಿಭಟನೆ

BMS ಇಂಜಿನಿಯರಿಂಗ್ ಸಂಜೆ ಕಾಲೇಜು ವಿದ್ಯಾರ್ಥಿಗಳು ತರಗತಿ ಆರಂಭಿಸಿಲ್ಲವೆಂದು ಧರಣಿ ನಡೆಸಿದ್ದಾರೆ. ನಮಗೆ ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸೋಲ್ಲ ಅಂತಾ ದಿಕ್ಕಾರ ಕೂಗಿದ್ದಾರೆ.

ಡಿಸೆಂಬರ್​ನಲ್ಲೇ ಅಡ್ಮಿಷನ್ ಆದ್ರೂ ತರಗತಿ ಆರಂಭಿಸದ ಆರೋಪ; ಬಸವನಗುಡಿಯ BMS ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಪ್ರತಿಭಟನೆ
ಬಸವನಗುಡಿಯ BMS ಕಾಲೇಜ್
TV9 Web
| Edited By: ಆಯೇಷಾ ಬಾನು|

Updated on:Feb 16, 2022 | 8:47 AM

Share

ಬೆಂಗಳೂರು: ಡಿಸೆಂಬರ್ನಲ್ಲೇ ಅಡ್ಮಿಷನ್ ಆದ್ರೂ ತರಗತಿ ಆರಂಭಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಬಿ.ಎಂ.ಎಸ್ ಕಾಲೇಜು((BMS Womens College) ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. BMS ಇಂಜಿನಿಯರಿಂಗ್ ಸಂಜೆ ಕಾಲೇಜು ವಿದ್ಯಾರ್ಥಿಗಳು ತರಗತಿ ಆರಂಭಿಸಿಲ್ಲವೆಂದು ಧರಣಿ ನಡೆಸಿದ್ದಾರೆ. ನಮಗೆ ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸೋಲ್ಲ ಅಂತಾ ದಿಕ್ಕಾರ ಕೂಗಿದ್ದಾರೆ. ತರಗತಿ ಶುರುವಾಗುವವರೆಗೂ ಹೋರಾಟ ಮಾಡುತ್ತೇವೆ ಅಂತಾ ಪಟ್ಟು ಹಿಡಿದಿದ್ದಾರೆ.

ಪ್ರತಿಭಟನೆಗೆ ಕಾರಣಗಳೇನು? ಡಿಸೆಂಬರ್ನಲ್ಲಿ ನಮಗೆ ದಾಖಲಾತಿ ಮಾಡಿಕೊಂಡಿದ್ದಾರೆ. ಮೂರನೇ ಸೆಮಿಸ್ಟರ್ಗೆ ನಾವು ಬಿಎಂಎಸ್ ಇಂಜಿನಿಯರಿಂಗ್ ಸಂಜೆ ಕಾಲೇಜಿಗೆ ಸಾವಿರಾರು ರೂಪಾಯಿ ನೀಡಿ ಆಡ್ಮೀಷನ್ ಆಗಿದ್ದೇವೆ. ಜನವರಿ 2 ರಿಂದ ಕಾಲೇಜು ತರಗತಿ ಶುರು ಅಂತಾ ಹೇಳಿದ್ರು. ಅದರೇ ಇಲ್ಲಿವರೆಗೆ ನಮಗೆ ತರಗತಿಗಳನ್ನ ಶುರು ಮಾಡಿಲ್ಲ. 46 ದಿನಗಳಿಂದ ಯಾವುದೇ ಸರಿಯಾದ ಮಾಹಿತಿ ನೀಡ್ತಿಲ್ಲ. ಪ್ರತಿನಿತ್ಯ ಸಂಜೆ ಕಾಲೇಜಿಗೆ ಬರೋದು ತರಗತಿ ಇಲ್ಲದೇ ವಾಪಸ್ ಹೋಗ್ತಿದ್ದೇವೆ. ಪ್ರಿನ್ಸಿಪಾಲ್ ಗಮನಕ್ಕೆ ತಂದಿದ್ದೇವೆ, ಸರ್ಕಾರದ ಗಮನಕ್ಕೂ ತಂದಿದ್ದೇವೆ. ಆದರೇ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ತಿಂಗಳು ಪರೀಕ್ಷೆ ಶುರುವಾಗಲಿದೆ. ತರಗತಿಗಳೇ ಇಲ್ಲದೇ ನಾವೂ ಹೇಗೆ ಪರೀಕ್ಷೆ ಎದುರಿಸೋದು. ಬೆಳಗ್ಗೆ ಸಮಯದಲ್ಲಿ ಕೆಲಸ ಮಾಡಿಕೊಂಡು ಸಂಜೆ ವಿದ್ಯಾಭ್ಯಾಸ ಮಾಡಲು ಬಂದಿದ್ದೇವೆ. ಆದರೇ ಇಲ್ಲಿ ಇನ್ನೂ ತರಗತಿಗಳೇ ಶುರು ಮಾಡದೇ ನಮ್ಮ ಭವಿಷ್ಯದ ಜೊತೆ ಆಟವಾಡಿತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಬಸವನಗುಡಿ ಬಳಿಯ ಪಿಜ್ಜಾ ಶಾಪ್​ನಲ್ಲಿ ಪ್ರೇಮಿಸಲು ನಿರಾಕರಿಸಿದ ಯುವತಿ ಮೇಲೆ ಹಲ್ಲೆ; ಆರೋಪಿ ಮ್ಯಾನೇಜರ್ ಬಂಧನ

Published On - 8:42 am, Wed, 16 February 22

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!