AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ, ಶ್ರೇಷ್ಠ ಶಾಸಕ ಎಂಬ ಎರಡು ಪ್ರಶಸ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

ನಮ್ಮ ಭವಿಷ್ಯದ ‌ನಿರ್ಮಾಣದಲ್ಲಿ ಶಾಂತವೇರಿ ಗೋಪಾಲಗೌಡ ಸದಾಕಾಲ ಮಾರ್ಗದರ್ಶನ ಮಾಡ್ತಿದ್ದಾರೆ. ಸ್ವಂತ ಜಮೀನು‌ ಇಲ್ಲದಿದ್ದರೂ ಇತರ ಗೇಣಿದಾರರಿಗೆ ಜಮೀನು ಕೊಡಬೇಕು ಅಂತ ಹೋರಾಟ ಮಾಡಿದ್ರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ, ಶ್ರೇಷ್ಠ ಶಾಸಕ ಎಂಬ ಎರಡು ಪ್ರಶಸ್ತಿ ಘೋಷಿಸಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Mar 14, 2022 | 2:01 PM

Share

ಬೆಂಗಳೂರು: ಆದರ್ಶ ಬದುಕನ್ನು‌ ಶಾಂತವೇರಿಗೋಪಾಲ ಗೌಡರು ಬದುಕಿದ್ದರು. ಇವರ ಆಸ್ತಿ ಜನರ ವೈಚಾರಿಕತೆ ಅಂತ ಭಾವಿಸಿದ್ದರು. ಜನರಲ್ಲಿ ವೈಚಾರಿಕತೆ ಇರೋವರೆಗೂ ಅವರು ಜೀವಂತ ಇರ್ತಾರೆ. ನಮ್ಮ ಭವಿಷ್ಯದ ‌ನಿರ್ಮಾಣದಲ್ಲಿ ಇವ್ರು ಸದಾಕಾಲ ಮಾರ್ಗದರ್ಶನ ಮಾಡ್ತಿದ್ದಾರೆ. ಸ್ವಂತ ಜಮೀನು‌ ಇಲ್ಲದಿದ್ದರೂ ಇತರ ಗೇಣಿದಾರರಿಗೆ ಜಮೀನು ಕೊಡಬೇಕು ಅಂತ ಹೋರಾಟ ಮಾಡಿದ್ರು. ಇಂತಹ ಅಪರೂಪದ ಘಟನೆ ಆಗಿನ ಕಾಲದಲ್ಲಿ ನಡೆಯಲು ಸಾಧ್ಯ. ‌ಇಂದು ಆಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇಂದು (ಮಾರ್ಚ್ 14) ಬೆಂಗಳೂರಿನಲ್ಲಿ ನಡೆಯುತ್ತಿದೆ. ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಅವರು ಕರ್ನಾಟಕ ರೈತರ ಬದುಕಿನಲ್ಲಿ ಹೆಜ್ಜೆ ಗುರುತನ್ನು ಬಿಟ್ಟುಹೋಗಿದ್ದಾರೆ. ಸದನದ ಒಳಗೆ ಅವರ ವಾಕ್ಚಾತುರ್ಯ ಒಳ್ಳೆಯದಿತ್ತು. ಇಡೀ ಬದುಕನ್ನ ಜನರಿಗಾಗು ಗಂಧದಂತೆ ತೇದಿದ್ದಾರೆ. ಕುವೆಂಪು, ಕಡಿದಾಳ ಮಂಜಪ್ಪ ಹೀಗೇ ಸಾಕಷ್ಟು ಜನ ಆ ಪ್ರದೇಶದಿಂದ ಬಂದಿದ್ದಾರೆ. ನಾನು ಆರಗಣ್ಣನಿಗೆ ಹೇಳಿದ್ದೆನೆ ಶೀಘ್ರವಾಗಿ ಆ ಸ್ಥಳಗಳಿಗೆ ಭೇಟಿ ನೀಡ್ತೇನೆ. ಅಲ್ಲಿಂದ ಪ್ರೇರಣೆ ಪಡೆದುಕೊಳ್ಳುತ್ತೆನೆ ಎಂದು ಶಾಂತವೇರಿ ಗೋಪಾಲಗೌಡರ ಊರಿನ ಬಗ್ಗೆಯೂ ಹೆಮ್ಮೆಯ ಮಾತುಗಳನ್ನಾಡಿದ್ದಾರೆ.

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ 2 ಪ್ರಶಸ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ 2 ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಶ್ರೇಷ್ಠ ಕೃಷಿಕ, ಶ್ರೇಷ್ಠ ಶಾಸಕ ಎಂಬ ಎರಡು ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ, ವರಿಷ್ಠರು ಹೇಳಿದಾಗ ಸಚಿವ ಸಂಪುಟ ಪುನಾರಚನೆ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!

Published On - 11:26 am, Mon, 14 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?