AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ, ಶ್ರೇಷ್ಠ ಶಾಸಕ ಎಂಬ ಎರಡು ಪ್ರಶಸ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

ನಮ್ಮ ಭವಿಷ್ಯದ ‌ನಿರ್ಮಾಣದಲ್ಲಿ ಶಾಂತವೇರಿ ಗೋಪಾಲಗೌಡ ಸದಾಕಾಲ ಮಾರ್ಗದರ್ಶನ ಮಾಡ್ತಿದ್ದಾರೆ. ಸ್ವಂತ ಜಮೀನು‌ ಇಲ್ಲದಿದ್ದರೂ ಇತರ ಗೇಣಿದಾರರಿಗೆ ಜಮೀನು ಕೊಡಬೇಕು ಅಂತ ಹೋರಾಟ ಮಾಡಿದ್ರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ, ಶ್ರೇಷ್ಠ ಶಾಸಕ ಎಂಬ ಎರಡು ಪ್ರಶಸ್ತಿ ಘೋಷಿಸಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ganapathi bhat

Updated on:Mar 14, 2022 | 2:01 PM

ಬೆಂಗಳೂರು: ಆದರ್ಶ ಬದುಕನ್ನು‌ ಶಾಂತವೇರಿಗೋಪಾಲ ಗೌಡರು ಬದುಕಿದ್ದರು. ಇವರ ಆಸ್ತಿ ಜನರ ವೈಚಾರಿಕತೆ ಅಂತ ಭಾವಿಸಿದ್ದರು. ಜನರಲ್ಲಿ ವೈಚಾರಿಕತೆ ಇರೋವರೆಗೂ ಅವರು ಜೀವಂತ ಇರ್ತಾರೆ. ನಮ್ಮ ಭವಿಷ್ಯದ ‌ನಿರ್ಮಾಣದಲ್ಲಿ ಇವ್ರು ಸದಾಕಾಲ ಮಾರ್ಗದರ್ಶನ ಮಾಡ್ತಿದ್ದಾರೆ. ಸ್ವಂತ ಜಮೀನು‌ ಇಲ್ಲದಿದ್ದರೂ ಇತರ ಗೇಣಿದಾರರಿಗೆ ಜಮೀನು ಕೊಡಬೇಕು ಅಂತ ಹೋರಾಟ ಮಾಡಿದ್ರು. ಇಂತಹ ಅಪರೂಪದ ಘಟನೆ ಆಗಿನ ಕಾಲದಲ್ಲಿ ನಡೆಯಲು ಸಾಧ್ಯ. ‌ಇಂದು ಆಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇಂದು (ಮಾರ್ಚ್ 14) ಬೆಂಗಳೂರಿನಲ್ಲಿ ನಡೆಯುತ್ತಿದೆ. ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಅವರು ಕರ್ನಾಟಕ ರೈತರ ಬದುಕಿನಲ್ಲಿ ಹೆಜ್ಜೆ ಗುರುತನ್ನು ಬಿಟ್ಟುಹೋಗಿದ್ದಾರೆ. ಸದನದ ಒಳಗೆ ಅವರ ವಾಕ್ಚಾತುರ್ಯ ಒಳ್ಳೆಯದಿತ್ತು. ಇಡೀ ಬದುಕನ್ನ ಜನರಿಗಾಗು ಗಂಧದಂತೆ ತೇದಿದ್ದಾರೆ. ಕುವೆಂಪು, ಕಡಿದಾಳ ಮಂಜಪ್ಪ ಹೀಗೇ ಸಾಕಷ್ಟು ಜನ ಆ ಪ್ರದೇಶದಿಂದ ಬಂದಿದ್ದಾರೆ. ನಾನು ಆರಗಣ್ಣನಿಗೆ ಹೇಳಿದ್ದೆನೆ ಶೀಘ್ರವಾಗಿ ಆ ಸ್ಥಳಗಳಿಗೆ ಭೇಟಿ ನೀಡ್ತೇನೆ. ಅಲ್ಲಿಂದ ಪ್ರೇರಣೆ ಪಡೆದುಕೊಳ್ಳುತ್ತೆನೆ ಎಂದು ಶಾಂತವೇರಿ ಗೋಪಾಲಗೌಡರ ಊರಿನ ಬಗ್ಗೆಯೂ ಹೆಮ್ಮೆಯ ಮಾತುಗಳನ್ನಾಡಿದ್ದಾರೆ.

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ 2 ಪ್ರಶಸ್ತಿ ಘೋಷಿಸಿದ ಸಿಎಂ ಬೊಮ್ಮಾಯಿ

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ 2 ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಶ್ರೇಷ್ಠ ಕೃಷಿಕ, ಶ್ರೇಷ್ಠ ಶಾಸಕ ಎಂಬ ಎರಡು ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ, ವರಿಷ್ಠರು ಹೇಳಿದಾಗ ಸಚಿವ ಸಂಪುಟ ಪುನಾರಚನೆ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ, ಚಿತ್ರ ತಂಡಕ್ಕೆ ಕೊಟ್ಟರು ದೊಡ್ಡ ಗಿಫ್ಟ್!

Published On - 11:26 am, Mon, 14 March 22

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ