AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ದಿಕ್ಕುಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ -ಸಿಎಂ ಬೊಮ್ಮಾಯಿ

ಬೆಂಗಳೂರು ದಕ್ಷಿಣ ಕ್ಷೇತ್ರದ 100ನೇ ಜನೌಷಧಿ ಕೇಂದ್ರವನ್ನು ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಮನ್​ಸುಖ್ ಉದ್ಘಾಟಿಸಿದರು.

ನಾಲ್ಕು ದಿಕ್ಕುಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ -ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Updated By: ಆಯೇಷಾ ಬಾನು|

Updated on:Mar 07, 2023 | 2:38 PM

Share

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಮನ್​ಸುಖ್ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ 100ನೇ ಜನೌಷಧಿ ಕೇಂದ್ರ ಉದ್ಘಾಟಿಸಿದ್ದಾರೆ. ಉಚಿತ ಡಯಾಲಿಸಿಸ್ ಕೇಂದ್ರ, 4 ಮೊಬೈಲ್ ಹೆಲ್ತ್ ಕ್ಲಿನಿಕ್​ಗಳಿಗೆ ಚಾಲನೆ ನೀಡಿದ್ದಾರೆ. ಜಯನಗರದ ಕೆಎಸ್​​ಆರ್​ಟಿಸಿ ಆಸ್ಪತ್ರೆ ಅವರಣದಲ್ಲಿ ಕಾರ್ಯಕ್ರಮ ನಡೆದಿದ್ದು ಸಚಿವರಾದ ಡಾ.ಸುಧಾಕರ್, ಆರ್​.ಅಶೋಕ್, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ನಾಲ್ಕು ದಿಕ್ಕುಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ

ಜನೌಷಧಿ ಕೇಂದ್ರ ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ತೇಜಸ್ವಿ ಸೂರ್ಯರವರ ಕ್ಷೇತ್ರದಲ್ಲಿ ಮೂರನೇ ಜನೌಷಧಿ ಕೇಂದ್ರ ಉದ್ಘಾಟಿಸಲಾಗಿದೆ. ಭಾರತದಲ್ಲಿ ಅತಿಹೆಚ್ಚು ಜನೌಷಧಿ ಕೇಂದ್ರಗಳಿವೆ. ಇದರ ಮೂಲಕ ಬಡವರ ಮೇಲೆ ಇರುವ ಕಾಳಜಿ ಗೊತ್ತಾಗುತ್ತೆ. ವಾಸವಿ ಸಂಸ್ಥೆಯಿಂದ ಡಯಾಲಿಸಿಸ್ ಕೇಂದ್ರ, ಮೊಬೈಲ್ ಕ್ಲಿನಿಕ್ ನಿರ್ವಾಹಣೆಯಾಗುತ್ತೆ.

ಬಡವರಿಗಾಗಿ ಮೋದಿಯವರು ಅತ್ಯಂತ ಕಡಿಮೆ ದರದಲ್ಲಿ ಔಷಧಿಗಳನ್ನ ಕೊಡ್ತಿದ್ದಾರೆ. ಬಡತನದಿಂದ ಬಂದ ಮೋದಿಯವರಿಗೆ ಬಡತನದ ಬಗ್ಗೆ ಗೊತ್ತು. ಹೀಗಾಗಿ ಇದನ್ನ ಮಾಡಿದ್ದಾರೆ. 100 ರೂಪಾಯಿ ಕೊಟ್ಟು ಬಡವರು ಔಷಧಿ ತೆಗೆದುಕೊಳ್ಳುವುದು ಕಷ್ಟ. ಹೀಗಾಗಿ ಪ್ರಧಾನಿ ಮೋದಿ ಯೋಜನೆ ಜಾರಿ ಮಾಡಿದ್ದಾರೆ.

ಎಲ್ಲಾ ಮನೆಗಳಿಗೆ ಇನ್ನು 5 ವರ್ಷದಲ್ಲಿ ನೀರು ಕೊಡ್ತೀನಿ ಅಂತಾ ಪ್ರಧಾನಿ ಹೇಳಿದರು. ಆದ್ರೆ ಇದುವರೆಗೂ ಬೇರೆ ಯಾವ ಪ್ರಧಾನಿಯಾದರು ಈ ರೀತಿ ಹೇಳಿದ್ದಾರಾ? ಛಲ, ಬದ್ಧತೆ, ಹೃದಯ ವೈಶಾಲ್ಯತೆ ಇದ್ರೆ ಮಾತ್ರ ಇದು ಸಾಧ್ಯ ಅಂತಾ ಜಲಜೀವನ್ ಮಿಷನ್ ಮೂಲಕ ಮೋದಿ ಮಾಡಿ ತೋರಿಸಿದ್ದಾರೆ. 10 ಕೋಟಿಗಿಂತ ಹೆಚ್ಚು ಮನೆಗಳಿಗೆ ನೀರು ಕೊಡ್ತಿದ್ದಾರೆ. ಅಸಾಧ್ಯವನ್ನು ಸಾಧ್ಯವಾಗಿಸುವವರು ಪ್ರಧಾನಿ ಮೋದಿ. ಹೆಚ್ಚೆಚ್ಚು ಆಸ್ಪತ್ರೆಗಳ ನಿರ್ಮಾಣ ಮಾಡುತ್ತಿದ್ದೇವೆ. ನಾಲ್ಕು ದಿಕ್ಕುಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ. ಬೆಂಗಳೂರಿನಲ್ಲೂ ಆಸ್ಪತ್ರೆಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:38 pm, Tue, 7 March 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್