AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​ ಸಭಾನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ

ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಪತ್ರ ಬರೆಯಲಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ಪರಿಷತ್​ ಸಭಾನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
TV9 Web
| Edited By: |

Updated on:Feb 11, 2022 | 4:36 PM

Share

ಬೆಂಗಳೂರು: ಪರಿಷತ್​ ಸಭಾನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆಯೂ ಸಭಾನಾಯಕನಾಗಿ ನೇಮಕಗೊಂಡಿದ್ದರು. ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಪತ್ರ ಬರೆಯಲಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ

ರಾಜ್ಯದಲ್ಲಿ ಜೂನ್‌ ವೇಳೆಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ. ಈ ಸಂಬಂಧ ಭಾರತೀಯ ಜನತಾ ಪಕ್ಷ- ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ. ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅರುಣ್ ಶಹಾಪುರ್ ಬಿಜೆಪಿ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.‌ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್​ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಬಸವರಾಜ ಹೊರಟ್ಟಿಗೆ ಹಿನ್ನೆಡೆ?

ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಅಭ್ಯರ್ಥಿ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಬಿಜೆಪಿ ಬೆಂಬಲದೊಂದಿಗೆ ಹೊರಟ್ಟಿಯವರು ಸ್ಪರ್ಧೆಗೆ ಒಲವು ತೋರಿದ್ದರು. ಇದೀಗ ಹೊರಟ್ಟಿಗೆ ಬಿಜೆಪಿಯ ಬೆಂಬಲ ಅಥವಾ ಟಿಕೆಟ್ ಅನುಮಾನ ಎನ್ನಲಾಗಿದೆ. ಹೊರಟ್ಟಿ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸುವ ಅಥವಾ ಬೆಂಬಲಿಸುವ ಕುರಿತು ತೆರೆಮರೆಯ ಚಟುವಟಿಕೆಗಳು ನಡೆದಿದ್ದವು.

ಆದರೆ ಹೊರಟ್ಟಿಗೆ 75 ವರ್ಷ ತುಂಬಿದೆ. ಬಿಜೆಪಿ ಸೇರಲು ಅವರಿಗೆ ವಯಸ್ಸಿನ ಅಡ್ಡಿಯಾಗಿದೆ ಎನ್ನುವ ಮಾತು ಕೇಳಿಬಂದಿದೆ. ಈ ಕುರಿತು ಕೆಲ ಬಿಜೆಪಿಗರು ವರಿಷ್ಠರ ಗಮನಕ್ಕೆ ತಂದಿದ್ದರು ಎನ್ನಲಾಗಿದ್ದು, ಹೀಗಾಗಿ ಹೊರಟ್ಟಿ ಬಿಜೆಪಿ ಸೇರಿದರೂ ಟಿಕೆಟ್​ ನಿರಾಕರಿಸುವ ಸಾಧ್ಯತೆ ಇದೆ. ಜೂನ್ ವೇಳೆಗೆ ಹೊರಟ್ಟಿ ಅವರ ಸದಸ್ಯತ್ವ ಅವಧಿ ಮುಕ್ತಾಯವಾಗಲಿದೆ.

ಕಾಂಗ್ರೆಸ್​ನಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ಘೋಷಣೆ: ಡಿಕೆ ಶಿವಕುಮಾರ್

ಇತ್ತ ಕಾಂಗ್ರೆಸ್​ನಲ್ಲಿ ಪರಿಷತ್​ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಧುಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಇನ್ನೆರಡು ಕ್ಷೇತ್ರಗಳಿಗೆ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಇಬ್ರಾಹಿಂಗೆ ಕೈತಪ್ಪಿದ ಪರಿಷತ್ ವಿಪಕ್ಷ ನಾಯಕ ಸ್ಥಾನ: ಮುಸ್ಲಿಂ ಸಮುದಾಯದ ನಾಯಕರ ಅಸಮಾಧಾನ

ಇದನ್ನೂ ಓದಿ: ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ ಹರಿಪ್ರಸಾದ್

Published On - 4:27 pm, Fri, 11 February 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ