AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಅಸಮಾಧಾನ

ರಾಜಕಾರಣದ ಮುಸುಕು ಕಾಂಗ್ರೆಸ್ ಪಕ್ಷದ ಮೇಲೆ ಬಿದ್ದಿದೆ. ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತಿರುಚಿ ಬಳಕೆ ಮಾಡಿಕೊಳ್ತಿದ್ದಾರೆ. ಕಾಂಗ್ರೆಸ್ ರಾಜಕಾರಣಕ್ಕಾಗಿ ಹೇಳಿಕೆ ತಿರುಚಿಕೊಂಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಅಸಮಾಧಾನ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 22, 2022 | 8:00 PM

Share

ಬೆಂಗಳೂರು: ಸದನ ಶುಕ್ರವಾರದ ವರೆಗೂ ನಡೆಯಬೇಕಿತ್ತು. ಆದರೆ ಬೇಸರದ ಸಂಗತಿ ಇವತ್ತೆ ಮೊಟಕುಗೊಳಿಸಬೇಕಾಯಿತು. ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ. ಇವತ್ತು ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ವಿಚಾರ ಎತ್ತಬಹುದಾಗಿತ್ತು. ಆದರೆ ಅದನ್ನು ಮಾಡಲಿಲ್ಲ. ಹೈಕೋರ್ಟ್ ನಲ್ಲಿ ಹಿಜಾಬ್ ವಿಚಾರ ವಿಚಾರಣೆ ನಡೆಯುತ್ತಿದೆ. ಮಧ್ಯಂತರ ಆದೇಶ ಮಾಡಿದೆ. ಅದನ್ನ ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಆದರೆ, ಕಾಂಗ್ರೆಸ್‌ನವರಿಗೆ ರಾಜಕಾರಣವೇ ಪ್ರಮುಖವಾಗಿತ್ತು ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಸದನದಲ್ಲಿ ಯಾವುದೇ ವಿಚಾರ ಚರ್ಚೆ ಮಾಡಲು ಬಿಡಲಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಹಳ ವರ್ಷದಿಂದ ರಾಜಕೀಯದಲ್ಲಿ ಇದ್ದಾರೆ. ಆದರೆ ಅವರ ಅನುಭವ ಈಗ ಎಲ್ಲಿ ಹೋಯಿತು. ಅನುಭವವನ್ನು ರಾಜ್ಯದ ಜನರ ಹಿತಕ್ಕೆ ಕೆಲಸ ಮಾಡಬೇಕಿತ್ತು. ರಾಜಕಾರಣದ ಮುಸುಕು ಕಾಂಗ್ರೆಸ್ ಪಕ್ಷದ ಮೇಲೆ ಬಿದ್ದಿದೆ. ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತಿರುಚಿ ಬಳಕೆ ಮಾಡಿಕೊಳ್ತಿದ್ದಾರೆ. ಕಾಂಗ್ರೆಸ್ ರಾಜಕಾರಣಕ್ಕಾಗಿ ಹೇಳಿಕೆ ತಿರುಚಿಕೊಂಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈಶ್ವರಪ್ಪ ಭಾಷಣವನ್ನು ಸೆಲೆಕ್ಟೀವ್ ಆಗಿ ತೆಗೆದುಕೊಂಡಿದ್ದಾರೆ. ಮಾರ್ಚ್ 4ರಂದು ಬಜೆಟ್ ಮಂಡನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗದಿಂದ ದೂರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದವರಿಗೆ ಬೇರೆ ಇನ್ನೇನು ಕೆಲಸ ಇದೆ. ಪ್ರತಿಭಟನೆ, ಪಾದಯಾತ್ರೆ ಅಂತ ಮಾಡ್ತಾ ಇರಲಿ ಬಿಡಿ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ವ್ಯವಸ್ಥೆ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ: ಮೌನವಾಗಿ ನಿಂತು ಪ್ರತಿಭಟಿಸಿದ ಕಾಂಗ್ರೆಸ್ ಸದಸ್ಯರು

ಇದನ್ನೂ ಓದಿ: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಕಾಂಗ್ರೆಸ್​ ಗದ್ದಲವೇ ಕೊಲೆಗೆ ಕಾರಣ ಎಂದು ಆರೋಪಿಸಿದ ಸಿಎಂ ಬೊಮ್ಮಾಯಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ