AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಅಸಮಾಧಾನ

ರಾಜಕಾರಣದ ಮುಸುಕು ಕಾಂಗ್ರೆಸ್ ಪಕ್ಷದ ಮೇಲೆ ಬಿದ್ದಿದೆ. ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತಿರುಚಿ ಬಳಕೆ ಮಾಡಿಕೊಳ್ತಿದ್ದಾರೆ. ಕಾಂಗ್ರೆಸ್ ರಾಜಕಾರಣಕ್ಕಾಗಿ ಹೇಳಿಕೆ ತಿರುಚಿಕೊಂಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ: ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಅಸಮಾಧಾನ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 22, 2022 | 8:00 PM

Share

ಬೆಂಗಳೂರು: ಸದನ ಶುಕ್ರವಾರದ ವರೆಗೂ ನಡೆಯಬೇಕಿತ್ತು. ಆದರೆ ಬೇಸರದ ಸಂಗತಿ ಇವತ್ತೆ ಮೊಟಕುಗೊಳಿಸಬೇಕಾಯಿತು. ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದ್ರೆ ಚರ್ಚೆನೇ ಮಾಡೊಲ್ಲ. ಇವತ್ತು ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ವಿಚಾರ ಎತ್ತಬಹುದಾಗಿತ್ತು. ಆದರೆ ಅದನ್ನು ಮಾಡಲಿಲ್ಲ. ಹೈಕೋರ್ಟ್ ನಲ್ಲಿ ಹಿಜಾಬ್ ವಿಚಾರ ವಿಚಾರಣೆ ನಡೆಯುತ್ತಿದೆ. ಮಧ್ಯಂತರ ಆದೇಶ ಮಾಡಿದೆ. ಅದನ್ನ ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಆದರೆ, ಕಾಂಗ್ರೆಸ್‌ನವರಿಗೆ ರಾಜಕಾರಣವೇ ಪ್ರಮುಖವಾಗಿತ್ತು ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಸದನದಲ್ಲಿ ಯಾವುದೇ ವಿಚಾರ ಚರ್ಚೆ ಮಾಡಲು ಬಿಡಲಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಹಳ ವರ್ಷದಿಂದ ರಾಜಕೀಯದಲ್ಲಿ ಇದ್ದಾರೆ. ಆದರೆ ಅವರ ಅನುಭವ ಈಗ ಎಲ್ಲಿ ಹೋಯಿತು. ಅನುಭವವನ್ನು ರಾಜ್ಯದ ಜನರ ಹಿತಕ್ಕೆ ಕೆಲಸ ಮಾಡಬೇಕಿತ್ತು. ರಾಜಕಾರಣದ ಮುಸುಕು ಕಾಂಗ್ರೆಸ್ ಪಕ್ಷದ ಮೇಲೆ ಬಿದ್ದಿದೆ. ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತಿರುಚಿ ಬಳಕೆ ಮಾಡಿಕೊಳ್ತಿದ್ದಾರೆ. ಕಾಂಗ್ರೆಸ್ ರಾಜಕಾರಣಕ್ಕಾಗಿ ಹೇಳಿಕೆ ತಿರುಚಿಕೊಂಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈಶ್ವರಪ್ಪ ಭಾಷಣವನ್ನು ಸೆಲೆಕ್ಟೀವ್ ಆಗಿ ತೆಗೆದುಕೊಂಡಿದ್ದಾರೆ. ಮಾರ್ಚ್ 4ರಂದು ಬಜೆಟ್ ಮಂಡನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗದಿಂದ ದೂರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದವರಿಗೆ ಬೇರೆ ಇನ್ನೇನು ಕೆಲಸ ಇದೆ. ಪ್ರತಿಭಟನೆ, ಪಾದಯಾತ್ರೆ ಅಂತ ಮಾಡ್ತಾ ಇರಲಿ ಬಿಡಿ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಆರೋಗ್ಯ ವ್ಯವಸ್ಥೆ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ: ಮೌನವಾಗಿ ನಿಂತು ಪ್ರತಿಭಟಿಸಿದ ಕಾಂಗ್ರೆಸ್ ಸದಸ್ಯರು

ಇದನ್ನೂ ಓದಿ: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಕಾಂಗ್ರೆಸ್​ ಗದ್ದಲವೇ ಕೊಲೆಗೆ ಕಾರಣ ಎಂದು ಆರೋಪಿಸಿದ ಸಿಎಂ ಬೊಮ್ಮಾಯಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ