AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯ ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮಗಳನ್ನು ಜರುಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಹಾಗೂ ಈ ಸಲದ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸುವ ಬಗ್ಗೆ ತಿಳಿಸಿದ್ದಾರೆ.

ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jan 07, 2022 | 9:03 PM

Share

ಬೆಂಗಳೂರು: ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಬಜೆಟ್​​ನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬಜೆಟ್​ನಲ್ಲಿ ಆದ್ಯತೆ ಕೊಡುವುದಾಗಿ ಭರವಸೆ ನೀಡಿದ್ದಾರೆ. ರಾಯಚೂರು ಜಿಲ್ಲೆ, ಯಾದಗಿರಿ ಜಿಲ್ಲೆ, ಕಲಬುರಗಿ ಜಿಲ್ಲೆ, ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅನುದಾನ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಜೀವನದ ಗುಣಮಟ್ಟ ಸುಧಾರಣೆಗೆ ಅನುದಾನ ಕೊಡಲಾಗುವುದು. ಬಜೆಟ್​ನಲ್ಲಿ ಅಗತ್ಯ ಅನುದಾನ ಮೀಸಲಿಡುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದಿಷ್ಟ ಕ್ರಮಗಳ ಭರವಸೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬಜೆಟ್​ನಲ್ಲಿ ಆದ್ಯತೆ ಕೊಡುವ ಭರವಸೆ ನೀಡಿದ್ದಾರೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯ ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮಗಳನ್ನು ಜರುಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಹಾಗೂ ಈ ಸಲದ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸುವ ಬಗ್ಗೆ ತಿಳಿಸಿದ್ದಾರೆ.

ನೀತಿ ಆಯೋಗದ (ಎಸ್.ಜಿ.ಡಿ) ಸಲಹೆಗಾರರಾದ ಸನ್ಯುಕ್ತ ಸಮದ್ದಾರ್ ಅವರೊಂದಿಗೆ ಇಂದು ನಡೆದ ಸಭೆಯಲ್ಲಿ ಸಿಎಂ ಈ ಬಗ್ಗೆ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಆರೋಗ್ಯ, ಶಿಕ್ಷಣ ಹಾಗೂ ಜೀವನದ ಗುಣಮಟ್ಟದ ಸುಧಾರಣೆಗೆ ಅಗತ್ಯ ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಮೀಸಲಿರಿಸುವ ಭರವಸೆ ಕೊಟ್ಟಿದ್ದಾರೆ. ಬಡತನವನ್ನು ಕೇವಲ ಆದಾಯದ ಮೇಲೆ ಅವಲಂಬಿಸದೆ, ಆರೋಗ್ಯ, ಶಿಕ್ಷಣ ಹಾಗೂ ಜೀವನ ಗುಣಮಟ್ಟದಂತಹ ಬಹು ಆಯಾಮಗಳನ್ನು ಆಧರಿಸಿ, ಬಡತನದ ಗುಣಮಟ್ಟ ಹಾಗೂ ಪರಿಮಾಣವನ್ನು ನಿರ್ಧರಿಸಲಾಗುತ್ತದೆ ಎಂದು ನೀತಿ ಆಯೋಗದ ಸಲಹೆಗಾರರು ವಿವರಿಸಿದ್ದಾರೆ.

2019ರಲ್ಲಿ 66 ಇದ್ದ ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕ ಪ್ರಸ್ತುತ 72ಕ್ಕೆ ಏರಿಕೆ ಕಂಡಿದೆ. ಆರೋಗ್ಯ ವಿಮೆ, ಹದಿಹರೆಯದ ಹೆಣ್ಣುಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿ ಮಹಿಳೆಯರಲ್ಲಿ ಅಪೌಷ್ಟಿಕತೆ, ಗ್ರಾಮೀಣ ಮನೆಗಳಿಗೆ ಕುಡಿಯುವ ನೀರು ಸರಬರಾಜು ಸಮಸ್ಯೆ ಇದೆ. ಸ್ವಚ್ಛ ಅಡುಗೆ ಅನಿಲ ಪೂರೈಕೆಯಲ್ಲಿ ಕರ್ನಾಟಕ ರಾಜ್ಯ ಸುಧಾರಣೆ ಕಾಣಬೇಕಿದೆ. ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಇವುಗಳ ಬಗ್ಗೆ ಕೇಂದ್ರೀಕೃತವಾಗಿ ಕೆಲಸ ಮಾಡಲು ಬಹು ಆಯಾಮ ಬಡತನ ಸೂಚಕಗಳು (ಎಂ.ಪಿ.ಐ) ಸಹಾಯಕವಾಗಿವೆ ಎಂದು ನೀತಿ ಆಯೋಗದ ಸಲಹೆಗಾರರು ತಿಳಿಸಿದ್ದಾರೆ.

ಈ ಕಾರ್ಯಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸಹಕಾರವನ್ನು ಪಡೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ, ಸಚಿವ ಮುನಿರತ್ನ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಅಮಿತಾ ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಕೊರೊನಾ ಎಲ್ಲರಿಗೂ ಒಂದೇ ಅಲ್ವಾ: ಕಾಂಗ್ರೆಸ್​ನ ಮೇಕೆದಾಟು ಪಾದಯಾತ್ರೆ ಸಿದ್ಧತೆ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ