AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಹೊಸತಳಿಯ ಕೊರೊನಾ ವೈರಾಣು ಪತ್ತೆ ಹಿನ್ನೆಲೆ; ಕರ್ನಾಟಕದ ಗಡಿಭಾಗಗಳಲ್ಲಿ ಬಿಗಿ ಕ್ರಮ- ವಿವರ ಓದಿರಿ

Basavaraj Bommai: ರಾಜ್ಯದ ಗಡಿಯಲ್ಲಿ ದಿನದ 24 ಗಂಟೆ ಬಿಗಿ ಕ್ರಮಕ್ಕೆ ಸೂಚನೆ ಕೊಡಲಾಗಿದೆ. ಗಡಿಯಲ್ಲಿ ಸಿಬ್ಬಂದಿ ಶಿಫ್ಟ್ ವೈಸ್​ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ. ಲಸಿಕೆ ಪಡೆದಿದ್ದರೋ ಇಲ್ಲವೋ ಎಂದು ಪರಿಶೀಲಿಸಲು ಸೂಚನೆ ಕೊಡಲಾಗಿದೆ.

Coronavirus: ಹೊಸತಳಿಯ ಕೊರೊನಾ ವೈರಾಣು ಪತ್ತೆ ಹಿನ್ನೆಲೆ; ಕರ್ನಾಟಕದ ಗಡಿಭಾಗಗಳಲ್ಲಿ ಬಿಗಿ ಕ್ರಮ- ವಿವರ ಓದಿರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Nov 27, 2021 | 7:21 PM

Share

ಬೆಂಗಳೂರು: ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ (Omicron) ವೈರಸ್ ಪತ್ತೆ ಹಿನ್ನೆಲೆ ಕಳೆದ ಒಂದು ವಾರದ ಪಾಸಿಟಿವಿಟಿ ರೇಟ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಸದ್ಯ 0.42 ಪಾಸಿಟಿವಿಟಿ ರೇಟ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಧಾರವಾಡ ಜಿಲ್ಲೆ 1.82, ಮೈಸೂರು 1.08, ಉಡುಪಿ 0.42, ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ 0.54, ಬೆಂಗಳೂರು ನಗರ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ 0.42 ಇದೆ. ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ ವೈರಸ್ (Coronavirus) ಪತ್ತೆ ಹಿನ್ನೆಲೆ ಗಡಿ ಭಾಗದಲ್ಲಿ ಬಿಗಿ ಕ್ರಮಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮಹಾರಾಷ್ಟ್ರ, ಕೇರಳದಲ್ಲಿ ಕೊವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದ ಗಡಿಯಲ್ಲಿ ದಿನದ 24 ಗಂಟೆ ಬಿಗಿ ಕ್ರಮಕ್ಕೆ ಸೂಚನೆ ಕೊಡಲಾಗಿದೆ. ಗಡಿಯಲ್ಲಿ ಸಿಬ್ಬಂದಿ ಶಿಫ್ಟ್ ವೈಸ್​ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ. ಲಸಿಕೆ ಪಡೆದಿದ್ದರೋ ಇಲ್ಲವೋ ಎಂದು ಪರಿಶೀಲಿಸಲು ಸೂಚನೆ ಕೊಡಲಾಗಿದೆ.

ಕೇರಳದಿಂದ ಬರುವ ಪ್ರಯಾಣಿಕರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ ಟೆಸ್ಟ್​ ಕಡ್ಡಾಯ ಎಂದು ತಿಳಿಸಲಾಗಿದೆ. ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ ಆಗಿದೆ. ಈ ಹಿನ್ನೆಲೆ, ರೈಲು, ಬಸ್​ ನಿಲ್ದಾಣದಲ್ಲಿ ಕೇರಳ ಪ್ರಯಾಣಿಕರಿಗೆ ಟೆಸ್ಟ್​ ಕಡ್ಡಾಯ ಮಾಡಲಾಗಿದೆ. ಕಡ್ಡಾಯವಾಗಿ ಕೊವಿಡ್​ ಟೆಸ್ಟ್​ ನಡೆಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.

ವಿದೇಶಗಳಲ್ಲಿ ಹೊಸತಳಿಯ ಒಮಿಕ್ರಾನ್ ವೈರಸ್ ಪತ್ತೆ ಆಗಿರುವ ಕಾರಣ 2ನೇ ಡೋಸ್​ ಲಸಿಕೆ ನೀಡುವುದನ್ನು ಚುರುಕುಗೊಳಿಸಿ. 2ನೇ ಡೋಸ್​ ಲಸಿಕೆ ನೀಡುವುದಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಂದು ತಿಳಿಸಿದ್ದಾರೆ. ಇದ್ದಕ್ಕಿದ್ದಂತೆ ಕೆಲ ಜಿಲ್ಲೆಗಳಲ್ಲಿ ಕೇಸ್​ ಹೆಚ್ಚಾಗಲು ಕಾರಣವೇನು ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಬೊಮ್ಮಾಯಿ ಮಾಹಿತಿ ಪಡೆದುಕೊಂಡಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಿ. ವಿದೇಶಿ ಪ್ರಜೆಗಳಿಗೆ ಕಡ್ಡಾಯವಾಗಿ RTPCR ಟೆಸ್ಟ್ ಮಾಡಿಸಿ. ಏರ್​ಪೋರ್ಟ್​ನಲ್ಲೇ RTPCR ಟೆಸ್ಟ್ ಮಾಡಿಸಿ ಎಂದು ಸೂಚನೆ ನೀಡಲಾಗಿದೆ.

ಸಭೆ ಬಳಿಕ ಆರ್. ಅಶೋಕ್ ಸುದ್ದಿಗೋಷ್ಠಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಆರ್. ಅಶೋಕ್ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಮಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಈ ನಾಲ್ಕು ಜಿಲ್ಲೆಗಳಲ್ಲಿ ಕಟ್ಟೆಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಚೆಕ್​ಪೋಸ್ಟ್​ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಸೂಚನೆ ಕೊಟ್ಟಿದ್ದೇವೆ. ಕೇರಳದಿಂದ ಬಂದವರಿಗೆ ಆರ್​ಟಿಪಿಸಿಆರ್ ಟೆಸ್ಟ್​ ಕಡ್ಡಾಯ ಇರಲಿದೆ. ಹಾಸ್ಟೆಲ್​​ನಲ್ಲಿದ್ದವರಿಗೆ ಎರಡನೇ ಬಾರಿಗೆ ಟೆಸ್ಟ್​ ಮಾಡಿಸಬೇಕು ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಆರ್. ಅಶೋಕ್​ ಹೇಳಿದ್ದಾರೆ.

ಕಚೇರಿ, ಹೋಟೆಲ್​, ಮಾಲ್​ಗಳಲ್ಲಿ ಸಿಬ್ಬಂದಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ​ ಪಡೆದಿರಲೇಬೇಕು. ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕೇಸ್​ ಹೆಚ್ಚಾಗಿವೆ. ಕೇಸ್​ ಹೆಚ್ಚಾದ ಕಡೆ ನಿಗಾವಹಿಸಲು ಡಿಸಿಗಳಿಗೆ ಸೂಚನೆ ಕೊಡಲಾಗಿದೆ. ಜಿಲ್ಲಾಧಿಕಾರಿಗಳಿ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುತ್ತೆ. ಮದುವೆಗಳಲ್ಲಿ ಜನರು ಮಾಸ್ಕ್​​ ಧರಿಸುವುದು ಕಡ್ಡಾಯವಿರಲಿ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದೂಡಿ. ಮುಂದಿನ ದಿನಗಳಲ್ಲಿ ಕೊರೊನಾ ಸ್ಥಿತಿಗತಿ ನೋಡಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ಕೇಸ್​ಗಳನ್ನ ನೋಡಿಕೊಂಡು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಏರ್​ಪೋರ್ಟ್​ಗಳಲ್ಲಿ ತಪಾಸಣೆ ತೀವ್ರಗೊಳಿಸಲು ಸೂಚನೆ ಕೊಡಲಾಗಿದೆ. ಕ್ರಿಸ್​ಮಸ್​, ನ್ಯೂಇಯರ್​ ಸೆಲೆಬ್ರೇಷನ್​​ ಬಗ್ಗೆ ಮತ್ತೊಂದು ಸಭೆ ಮಾಡುತ್ತೇವೆ. ಬೂಸ್ಟರ್​ ಡೋಸ್​ ಕೊಡುವ ಬಗ್ಗೆ ಮನವಿ ಮಾಡಿದ್ದೇವೆ. ನಾವು ಕೇಂದ್ರ ಸರ್ಕಾರಕ್ಕೆ ನಾವು ಮನವಿ ಮಾಡಿದ್ದೇವೆ. ಬೆಳವಣಿಗೆ ನೋಡಿಕೊಂಡು ಮತ್ತೊಂದು ಸಭೆ ಮಾಡ್ತೇವೆ. ಮದುವೆ, ಚುನಾವಣಾ ಪ್ರಚಾರಗಳಲ್ಲಿ ಮಾಸ್ಕ್​ ಕಡ್ಡಾಯ ಎಂದು ಅಶೋಕ್ ಮಾಹಿತಿ ನೀಡಿದ್ದಾರೆ.

ಸೋಂಕು ಹೆಚ್ಚಾಗುತ್ತಿರುವ ಪ್ರದೇಶಗಳ ಬಗ್ಗೆಯೂ ಸಿಎಂ ಬೊಮ್ಮಾಯಿಗೆ ಮಾಹಿತಿ ನೀಡಲಾಗಿದೆ. ನೆರೆಯ ಕೇರಳ ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಅಧಿಕಾರಿಗಳಿಂದ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ಇಬ್ಬರ ಶವ ಪಡೆಯಲು ವರ್ಷ ಕಳೆದರೂ ಬಾರದ ಸಂಬಂಧಿಕರು; ಅಂತ್ಯಸಂಸ್ಕಾರಕ್ಕೆ ಆಸ್ಪತ್ರೆ ಸಿಬ್ಬಂದಿ ಚಿಂತನೆ

ಇದನ್ನೂ ಓದಿ: ದೇಶಕ್ಕೀಗ ಒಮಿಕ್ರಾನ್​ ಆತಂಕ; ಕೊರೊನಾದ ಈ ಹೊಸ ತಳಿ ಹೆಚ್ಚಿನ ಆತಂಕ ಸೃಷ್ಟಿಸಲು ಕಾರಣವೇನು? ಇಲ್ಲಿದೆ ಮಾಹಿತಿ

Published On - 6:17 pm, Sat, 27 November 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!