AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್​ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ ನಂತರ ಮಾತನಾಡುತ್ತಿದ್ದರು.

ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Sep 22, 2021 | 3:45 PM

Share

ಬೆಂಗಳೂರು: ನಮ್ಮ ಮೆಟ್ರೋ (Namma Metro) ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಸಿಎಂ ಇಂದು (ಸೆ.22) ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್​ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ ನಂತರ ಮಾತನಾಡುತ್ತಿದ್ದರು. ಎರಡನೇ ಹಂತ 2024ಕ್ಕೇ ಮುಗಿಸಲು ಯೋಜನೆ ರೂಪಿಸಿ, ಹೆಚ್ಚುವರಿ ಮಾನವ ಸಂಪನ್ಮೂಲ ಬಳಸಿಕೊಂಡು ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಇನ್ನು 21 ಕಿ.ಮೀ. ಆಗಬೇಕಾಗಿದೆ. ಇದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ನಂತರ ಮೂರನೇ ಹಂತ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಮೆಟ್ರೋ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಬೇಕಾಗಿದೆ. ಮೆಟ್ರೋ 2ನೇ ಹಂತ ಪೂರ್ಣಗೊಂಡಾಗ 56 ಕಿ.ಮೀ. ಮಾರ್ಗ ಪೂರ್ಣಗೊಳ್ಳುವುದು. ಇದರೊಂದಿಗೆ 3ನೇ ಹಂತ ಕೈಗೆತ್ತಿಕೊಳ್ಳುತ್ತಿದ್ದೇವೆ. ಮೂರು ಹಂತಗಳು ಪೂರ್ಣಗೊಂಡಾಗ ಮೆಟ್ರೋ ರೈಲು ಬೆಂಗಳೂರಿನ ಜೀವನಾಡಿಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೆಟ್ರೋ ಕಾಮಗಾರಿಯನ್ನು ಹಲವು ಸವಾಲುಗಳ ನಡುವೆಯೂ ವೈಜ್ಞಾನಿಕವಾಗಿ, ಸುರಕ್ಷತೆಗೆ ಆದ್ಯತೆ ನೀಡಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೊದಲ ಹಂತದಲ್ಲಿ ಹಲವು ಸವಾಲುಗಳು ಎದುರಾಗಿದ್ದವು. ಮೆಜೆಸ್ಟಿಕ್ ಬಳಿ ಟನೆಲ್ ಬೋರಿಂಗ್ ಮಷಿನ್ ಸಿಲುಕಿಕೊಂಡಿತ್ತು ಎಂದು ಅವರು ಸ್ಮರಿಸಿಕೊಂಡರು. ಇಂದು ಅತ್ಯುತ್ತಮ ಟಿಬಿಎಂ ಊರ್ಜಾ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ. 855 ಮೀಟರ್ ಸುರಂಗ ಕೊರೆಯಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮೆಟ್ರೋ ಯೋಜನೆಗೆ ಜನರು ಸಹಕಾರ ನೀಡಿದ್ದಾರೆ. ಬೆಂಗಳೂರು ನಗರದ ಎಲ್ಲ ದಿಕ್ಕಿನಲ್ಲಿ ಮೆಟ್ರೋ ವಿಸ್ತರಿಸಲು ಸಹಕಾರ ನೀಡಿದ ಜನತೆಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿಗಳು, ವಿಮಾನ ನಿಲ್ದಾಣದ ವರೆಗೆ ಮೆಟ್ರೋ ವಿಸ್ತರಣೆಗೆ ಶೀಘ್ರವೇ ಚಾಲನೆ ನೀಡಲಾಗುವುದು. ಕೇಂದ್ರದಿಂದ ಉತ್ತಮ ಸಹಕಾರ ಹಾಗೂ ಹಣಕಾಸಿನ ನೆರವು ದೊರೆಯುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತಿ, ಎಸ್.ಟಿ.ಸೋಮಶೇಖರ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ, ಸಂಸದ ಪಿ.ಸಿ.ಮೋಹನ್, ಶಾಸಕರಾದ ರಿಜ್ವಾನ್ ಅರ್ಷದ್, ಲೆಹರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ

ಶಿವಾಜಿನಗರದಲ್ಲಿ ಮೆಟ್ರೋ ಸುರಂಗ ಕೊರೆದು 13 ತಿಂಗಳ ನಂತರ ಹೊರಬಂದ ಊರ್ಜಾ ಯಂತ್ರ

IPL 2021: ಸನ್​ರೈಸರ್ಸ್​ ತಂಡದ ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್; ಮತ್ತೆ ರದ್ದಾಗುತ್ತಾ ಐಪಿಎಲ್?

(Basavaraj Bommai says that we will be start to third stage Metro soon at Bengaluru)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?