ರಾಮನಗರ, ರಾಜಾನುಕುಂಟೆ, ಮಾಗಡಿವರೆಗೆ ಮೆಟ್ರೋ ವಿಸ್ತರಿಸುವ ಚಿಂತನೆ ಇದೆ; ಸಿಎಂ ಬಸವರಾಜ ಬೊಮ್ಮಾಯಿ

| Updated By: sandhya thejappa

Updated on: Aug 29, 2021 | 12:44 PM

ಮುಂದಿನ 20 ದಿನದಲ್ಲಿ ನನ್ನ ಡ್ಯಾಶ್ ಬೋರ್ಡ್ ಪ್ರಾರಂಭವಾಗಲಿದೆ. ಪ್ರತಿಯೊಂದು ಮಾಹಿತಿಯೂ ಇದರಲ್ಲಿ ಲಭ್ಯವಾಗಲಿದೆ. ಬೆಂಗಳೂರು ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ.

ರಾಮನಗರ, ರಾಜಾನುಕುಂಟೆ, ಮಾಗಡಿವರೆಗೆ ಮೆಟ್ರೋ ವಿಸ್ತರಿಸುವ ಚಿಂತನೆ ಇದೆ; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ನಮ್ಮ ಮೆಟ್ರೋ (Namma Metro) ರಾಮನಗರವರೆಗೂ ಹೋಗಬೇಕು ಅಂತ ಚಿಂತನೆ ಇದೆ. ರಾಮನಗರ, ರಾಜಾನುಕುಂಟೆ, ಮಾಗಡಿವರೆಗೂ ಮೆಟ್ರೋ ಮಾರ್ಗ ವಿಸ್ತರಿಸುವ ಗುರಿಯಿದೆ ಅಂತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ಮೆಟ್ರೋ ಅಗತ್ಯವಾಗಿದೆ. ಹೀಗಾಗಿ ನಾಯಂಡಹಳ್ಳಿ-ಕೆಂಗೇರಿಯವರೆಗೆ ಮೆಟ್ರೋ ಅಗತ್ಯ ಇತ್ತು. ನಮ್ಮ ಮೆಟ್ರೋ ಬೆಂಗಳೂರಿನ ಭವಿಷ್ಯದ ಕೊಂಡಿ. ದೇಶ-ವಿದೇಶಗಳಿಂದ ಬರುವ ಗಣ್ಯರಿಗೆ ಉತ್ತಮ ಸಾರಿಗೆ ಬೇಕು. ಅದನ್ನು ನಮ್ಮ ಮೆಟ್ರೋ ಪೂರೈಸುತ್ತದೆ ಎಂದು ಹೇಳಿದರು.

ಮುಂದಿನ 20 ದಿನದಲ್ಲಿ ನನ್ನ ಡ್ಯಾಶ್ ಬೋರ್ಡ್ ಪ್ರಾರಂಭವಾಗಲಿದೆ. ಪ್ರತಿಯೊಂದು ಮಾಹಿತಿಯೂ ಇದರಲ್ಲಿ ಲಭ್ಯವಾಗಲಿದೆ. ಬೆಂಗಳೂರು ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ. ನನ್ನ ಪ್ರತಿನಿತ್ಯದ ಮೊದಲ ಸಮಯವನ್ನು ಮೀಸಲಿಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಏರ್ಪೋರ್ಟ್ಗೆ ಸಂಪರ್ಕ ಕಲ್ಪಿಸಲು ಹೈ ಸ್ಪೀಡ್ ರೈಲು, ಸಬ್ ಅರ್ಬನ್ ಹಾಗೂ ಮೆಟ್ರೋ ರೈಲು ಮಾರ್ಗದ ವ್ಯವಸ್ಥೆ ಮಾಡುತ್ತಿದ್ದೇವೆ. ಬೇರೆ ಯಾವ ನಗರದಲ್ಲಿಯೂ ಇಂತಹ ವ್ಯವಸ್ಥೆ ಇಲ್ಲ. ನಗರದಲ್ಲಿ ಹೆಚ್ಚು ಟ್ರಾಫಿಕ್ ರಸ್ತೆಗಳನ್ನು ಗುರುತಿಸಲಾಗಿದೆ. ಟ್ರಾಫಿಕ್ ಇರುವ ಕಡೆ ಆಟೋಮ್ಯಾಟಿಕ್ ಸಿಗ್ನಲ್ ವ್ಯವಸ್ಥೆ ಹಾಗೂ ಮುಖ್ಯ ನಗರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಟ್ರಾಫಿಕ್ ಫ್ರೀ ರೋಡ್ ಮಾಡಲು ಚಾಲನೆ ನೀಡಲಾಗಿದೆ ಎಂದು ಸಿಎಂ ಹೇಳಿದರು.

ಬೆಂಗಳೂರು ಮೆಟ್ರೋಗೆ ಒಪ್ಪಿಗೆ ಕೊಟ್ಟವರು ವಾಜಪೇಯಿ, ಬೆಂಗಳೂರು ಏರ್ಪೋರ್ಟ್ಗೆ ಒಪ್ಪಿಗೆ ಕೊಟ್ಟವರು ವಾಜಪೇಯಿ. ಬೆಂಗಳೂರಿಗೆ ಸಬ್ ಅರ್ಬನ್ ಯೋಜನೆ ಕೊಟ್ಟಿದ್ದು ಮೋದಿ. ‘ನವ ಕರ್ನಾಟಕ ಫಾರ್ ನವ ಭಾರತ’ ಇದು ನನ್ನ ಸ್ಲೋಗನ್ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು.

ಇದನ್ನೂ ಓದಿ

Namma Metro: ಮೆಟ್ರೋ ವಿಸ್ತರಿತ ಮಾರ್ಗಕ್ಕೆ ಹಸಿರು ನಿಶಾನೆ; ಮಹಿಳಾ ಲೋಕೋಪೈಲಟ್​​ ಮೂಲಕ ನೂತನ ಮಾರ್ಗಕ್ಕೆ ಚಾಲನೆ

Namma Metro: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ; ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ

(Basavaraj Bommai talk about metro expanding until ramanagara)