AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ಕಾಯಿನ್​ ಪ್ರಕರಣ 2018ರಿಂದಲೂ ಇದೆ ಅಂತಾರೆ, ಯಾಕೆ ಕ್ರಮ ಕೈಗೊಳ್ಳಲಿಲ್ಲ ಅಂತ ಸುರ್ಜೇವಾಲ ಕೇಳಲಿ; ಸಿಎಂ ಬೊಮ್ಮಾಯಿ

ಪ್ರಕರಣದ ತನಿಖೆಯನ್ನು ಮಾಡುತ್ತಿರುವುದು ನಾವು. ಇದರ ಹಿಂದೆ ಯಾರೇ ಇದ್ದರೂ ಅವರನ್ನ ಬಲಿ ಹಾಕ್ತೀವಿ. ಆರೋಪಿಗಳನ್ನು ಬಿಡುವ ಪ್ರಶ್ನೆ ಇಲ್ಲ. ಇಬ್ಬರು ಇದ್ದಾರೆ ಅಂದ್ರೆ ಯಾರೆಂದು ಅವರ ಹೆಸರು ಹೇಳಿ.

ಬಿಟ್​ಕಾಯಿನ್​ ಪ್ರಕರಣ 2018ರಿಂದಲೂ ಇದೆ ಅಂತಾರೆ, ಯಾಕೆ ಕ್ರಮ ಕೈಗೊಳ್ಳಲಿಲ್ಲ ಅಂತ ಸುರ್ಜೇವಾಲ ಕೇಳಲಿ; ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 14, 2021 | 11:36 AM

Share

ಬೆಂಗಳೂರು: ಬಿಟ್​ಕಾಯಿನ್ (Bitcoin) ವಿಚಾರದ ಬಗ್ಗೆ ಈಗಾಗಲೇ ಉತ್ತರಿಸಿದ್ದೇನೆ. ಈ ಪ್ರಕರಣ 2018ರಿಂದಲೂ ಇದೆ ಅಂತಾರೆ. ಆಗ ಅವರದ್ದೇ ಸರ್ಕಾರ ಇತ್ತು. ಯಾಕೆ ಕ್ರಮ ಕೈಗೊಳ್ಳಲಿಲ್ಲ ಅಂತ ಸುರ್ಜೇವಾಲ ಕೇಳಲಿ. ಆಗ ಆರೋಪಿ ಬಂಧಿಸಿದ್ದಾಗ ವಿಚಾರಣೆ ನಡೆಸದೆ ಬಿಟ್ಟರು. ಆಗ ಬಿಟ್ಟು ದೊಡ್ಡ ಪ್ರಮಾಣದಲ್ಲಿ ಆದಾಗ ಪ್ರಶ್ನಿಸುತ್ತಿದ್ದಾರೆ. ಒಂದು ಟ್ವೀಟ್ ಆಧಾರದ ಮೇಲೆ ವಿಚಾರಣೆ ಮಾಡ್ತೀರಾ? ಎಂದು ಪ್ರಶ್ನಿಸಿದ ಬೊಮ್ಮಾಯಿ, ಟ್ವೀಟ್ ಆಧಾರದ ಮೇಲೆ ಆರೋಪ ಸರಿಯಲ್ಲ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ.

ಪ್ರಕರಣದ ತನಿಖೆಯನ್ನು ಮಾಡುತ್ತಿರುವುದು ನಾವು. ಇದರ ಹಿಂದೆ ಯಾರೇ ಇದ್ದರೂ ಅವರನ್ನ ಬಲಿ ಹಾಕ್ತೀವಿ. ಆರೋಪಿಗಳನ್ನು ಬಿಡುವ ಪ್ರಶ್ನೆ ಇಲ್ಲ. ಇಬ್ಬರು ಇದ್ದಾರೆ ಅಂದ್ರೆ ಯಾರೆಂದು ಅವರ ಹೆಸರು ಹೇಳಿ. ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಪ್ರಕರಣ ತನಿಖೆ ನಡೀತಿದೆ. ನಾವು ಆರೋಪಿ ಬಂಧಿಸಿದ್ದೇವೆ. ಬಿಟ್ಟವರಿಂದ ಕಲಿಯಬೇಕಿಲ್ಲ ಅಂತ ಸಿಎಂ ಬೊಮ್ಮಾಯಿ ಹೇಳಿದರು.

ಬಿಟ್ಕಾಯಿನ್ ಹಗರಣದ ಬಗ್ಗೆ ಮಾಹಿತಿ ಇದ್ದರೆ ನೀಡಲಿ. ಕಾಂಗ್ರೆಸ್ ಬಳಿ ಮಾಹಿತಿ, ದಾಖಲೆಗಳು ಇದ್ದರೆ ನೀಡಲಿ. ನಮಗಾದ್ರೂ ದಾಖಲೆ ನೀಡಲಿ. ಇಲ್ಲಾ ಇ.ಡಿಗಾದ್ರೂ ಕೊಡಲಿ. ಕಾಂಗ್ರೆಸ್​ನವರು ದಾಖಲೆ ಕೊಟ್ಟರೆ ನಾವು ತನಿಖೆ ಮಾಡುತ್ತೇವೆ ಅಂತ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೊಲೀಸರಿಗೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಯಾಮಾರಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಶ್ರೀಕಿ ಯಾವುದೋ ಎಕ್ಸ್​ಚೇಂಜ್ ಖಾತೆ ತೋರಿಸಿದ್ದಾನೆ. ಎಕ್ಸ್​ಚೇಂಜ್ ಅಕೌಂಟ್ ತೋರಿಸಿ ತನ್ನದೆಂದು ಹೇಳಿದ್ದಾನೆ. ಯಾರಿಗೂ ವೈಯಕ್ತಿಕವಾಗಿ ಎಕ್ಸ್​ಚೇಂಜ್ ಅಕೌಂಟ್ ಇರಲ್ಲ ಅಂತ ತಿಳಿಸಿದರು.

ಕಟೀಲು ಮೌನ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೈಲೆಂಟಾಗಿದ್ದಾರೆ. ಈವರೆಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಕಟೀಲು, ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪ್ರಕರಣದಲ್ಲಿ ಕರಾವಳಿ ಭಾಗದ ಪ್ರಭಾವಿ ಇರುವ ಆರೋಪವಿದೆ. ಈ ಆರೋಪಗಳಿಗೂ ನಳಿನ್ ಕುಮಾರ್ ಸ್ಪಷ್ಟತೆ ನೀಡಿಲ್ಲ.

ಇದನ್ನೂ ಓದಿ

Viral Video: ಬಲೂನ್ ಆಟವಾಡುತ್ತಿದ್ದ ಕೋತಿ; ಮುಂದೇನಾಯ್ತು? ತಮಾಷೆ ವಿಡಿಯೊ ನೋಡಿ

ಮಿಟ್ಟಹಳ್ಳಿಯಲ್ಲಿ ಮತ್ತೆ ಕೇಳಿ ಬಂತು ಸ್ಫೋಟದ ಸದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಬೀದಿಯಲ್ಲಿ ಕಾಲ ಕಳೆದ ಜನ

Published On - 11:35 am, Sun, 14 November 21

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ