ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ ಎಂದಿರುವ ಸಿಎಂ ಬೊಮ್ಮಾಯಿ; ಅರೆ ಮನಸ್ಸಿನಿಂದ ಹೊರಟ ಎಂಟಿಬಿ ನಾಗರಾಜ್

ಸಿಎಂ ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಚಿವ ಎಂಟಿಬಿ ನಾಗರಾಜ್, ಸದ್ಯ ಈಗ ಇರುವ ಖಾತೆಯಲ್ಲಿ ಮುಂದುವರಿಯುತ್ತೇನೆ. ಖಾತೆ ಹಂಚಿಕೆಯ ಬಗ್ಗೆ ನನಗೆ ಅಸಮಾಧಾನವಿಲ್ಲ. ಹಿಂದಿನ ಸರ್ಕಾರದಲ್ಲಿ ವಸತಿ ಖಾತೆಯನ್ನು ನೀಡಿದ್ದರು.

ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ ಎಂದಿರುವ ಸಿಎಂ ಬೊಮ್ಮಾಯಿ; ಅರೆ ಮನಸ್ಸಿನಿಂದ ಹೊರಟ ಎಂಟಿಬಿ ನಾಗರಾಜ್
ಎಂಟಿಬಿ ನಾಗರಾಜ್
Follow us
| Updated By: sandhya thejappa

Updated on: Aug 08, 2021 | 2:06 PM

ಬೆಂಗಳೂರು: ಖಾತೆ ಬಗ್ಗೆ ಅಸಮಾಧಾನ ಹೊರಹಾಕಿರುವ ಸಚಿವ ಎಂಟಿಬಿ ನಾಗರಾಜ್ ಇಂದು ಸಿಎಂ ಬಸವರಾಜ ಬೊಮ್ಮಾಯಿರನ್ನು (Basavaraj Bommai) ಭೇಟಿಯಾಗಿದ್ದರು. ಈ ವೇಳೆ ಯಾವುದೇ ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ. ನಿಮ್ಮ ಬೇಸರದ ಬಗ್ಗೆ ವರಿಷ್ಠರಿಗೆ ತಿಳಿಸುತ್ತೇನೆ ಅಂತ ಬೊಮ್ಮಾಯಿ ಮನವರಿಕೆ ಮಾಡಿದ್ದಾರೆ. ವಲಸಿಗರಲ್ಲಿ ಕೆಲವರಿಗೆ ಪ್ರಬಲ ಖಾತೆ ನೀಡಲಾಗಿದೆ. ಕೆಲವರಿಗೆ ಮಾತ್ರ ಪ್ರಬಲ ಖಾತೆ ಕೊಟ್ಟು ಉಳಿದವರನ್ನ ಕಡೆಗಣಿಸಲಾಗಿದೆ ಅಂತ ಎಂಟಿಬಿ ನಾಗರಾಜ್ (MTB Nagaraj) ಸಿಟ್ಟು ಹೊರ ಹಾಕಿದರು. ಆಗ ಕೆಲ ಕಾಲ ಇದೆ ಖಾತೆಯನ್ನು ಮುಂದುವರೆಸಿಕೊಂಡು ಹೋಗುವಂತೆ ಸಿಎಂ ತಿಳಿಸಿದ್ದಾರೆ.

ಸಿಎಂ ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಚಿವ ಎಂಟಿಬಿ ನಾಗರಾಜ್, ಸದ್ಯ ಈಗ ಇರುವ ಖಾತೆಯಲ್ಲಿ ಮುಂದುವರಿಯುತ್ತೇನೆ. ಖಾತೆ ಹಂಚಿಕೆಯ ಬಗ್ಗೆ ನನಗೆ ಅಸಮಾಧಾನವಿಲ್ಲ. ಹಿಂದಿನ ಸರ್ಕಾರದಲ್ಲಿ ವಸತಿ ಖಾತೆಯನ್ನು ನೀಡಿದ್ದರು. ಅದಕ್ಕಿಂತ ಒಳ್ಳೆಯ ಖಾತೆ ಕೊಡಿ ಎಂದು ಕೇಳಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆಯಿದೆ. ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ಹಲವು ಸಲಹೆಯನ್ನು ಕೊಟ್ಟಿದ್ದಾರೆ. ಸಿಎಂ ಕೊಟ್ಟ ಸಲಹೆ, ಭರವಸೆಯಿಂದ ಸಂತೋಷವಾಗಿದೆ. ಹೀಗಾಗಿ ನಾನು ಈಗಿರುವ ಸ್ಥಾನದಲ್ಲಿ ಮುಂದುವರಿಸುತ್ತೇನೆ. ನಾನು ರಾಜೀನಾಮೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. 3 ದಿನದಲ್ಲಿ ನನ್ನ ತೀರ್ಮಾನ ತಿಳಿಸುವುದಾಗಿ ಹೇಳಿದ್ದೆ ಅಷ್ಟೇ ಅಂತ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಕೈ ಕಾರ್ಯಕರ್ತರ ಪ್ರತಿಭಟನೆ, 2 ಕಿಲೋಮೀಟರ್ ಟ್ರಾಫಿಕ್ ಜಾಮ್; ಧರಣಿ ನಿರತರನ್ನು ವಶಕ್ಕೆ ಪಡೆದ ಪೊಲೀಸರು

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

(Basavaraja Bommai told MTB Nagaraj that the Cabinet post change is not immediate)

ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ