AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Show 2023: ಯಲಹಂಕ ವಾಯುನೆಲೆ ಸುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲೆ ಕ್ರೇನ್​ ಎತ್ತರ ತಗ್ಗಿಸಲು ಆದೇಶ

ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಏರೋ ಶೋ ಹಿನೆಲೆಯಲ್ಲಿ ವಾಯುಸೇನಾ ನೆಲೆಯಿಂದ 5 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಿಬಿಎಂಪಿ ಆದೇಶಿಸಿದೆ.

Air Show 2023: ಯಲಹಂಕ  ವಾಯುನೆಲೆ ಸುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲೆ ಕ್ರೇನ್​ ಎತ್ತರ ತಗ್ಗಿಸಲು ಆದೇಶ
TV9 Web
| Edited By: |

Updated on:Jan 31, 2023 | 7:08 PM

Share

ಬೆಂಗಳೂರು: ಇದೇ ಫೆಬ್ರವರಿ 13ರಿಂದ ಫೆಬ್ರವರಿ 17ರ ವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ​ಶೋ-2023 (Air Show Bangalore 2023) ನಡೆಯಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಇನ್ನು ಯಲಹಂಕ ವಾಯುನೆಲೆ ಸುತ್ತಮುತ್ತ ಕಟ್ಟಡಗಳ ಮೇಲೆ ಕ್ರೇನ್​ ಎತ್ತರ ತಗ್ಗಿಸಲು ಆದೇಶಿಸಲಾಗಿದೆ. ನಿರ್ಮಾಣ ಹಂತದ ಕಟ್ಟಡಗಳ ಮೇಲೆ ಕ್ರೇನ್​ ಎತ್ತರ ತಗ್ಗಿಸಲು ಬಿಬಿಎಂಪಿ ಯೋಜನೆಯ ಜಂಟಿ ನಿರ್ದೇಶಕರು(ಉತ್ತರ) ಇಂದು(ಜನವರಿ 31) ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Meat Ban: ಯಲಹಂಕ ವಲಯದಲ್ಲಿ ಜನವರಿ 30 ರಿಂದ ಮಾಂಸ ಮಾರಾಟ ನಿಷೇಧ

ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಏರೋ ಶೋ ಹಿನೆಲೆಯಲ್ಲಿ ವಾಯುಸೇನಾ ನೆಲೆಯಿಂದ 5 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಆದೇಶ ಪ್ರತಿಯಲ್ಲಿ ಸೂಚಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಎರ್‌ಕ್ರಾಫ್ಟ್ ರೂಲ್ಸ್ 1937ರ ರೂಲ್ 91 ಕಾನೂನು ಅನ್ವಯ ಕ್ರಮಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಯೋಜನೆಯ ಜಂಟಿ ನಿರ್ದೇಶಕರು(ಉತ್ತರ) ಆದೇಶದಲ್ಲಿ ತಿಳಿಸಿದ್ದಾರೆ.

ಮಾಂಸ ಮಾರಾಟ ನಿಷೇಧ

ಯಲಹಂಕ ವಲಯದಲ್ಲಿ (Yelahanka Zone) ಜನವರಿ 30 ರಿಂದ ಫೆಬ್ರುವರಿ 20 ರವರೆಗೆ ಮಾಂಸ (Meat) ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ. ಮಾಂಸ ಮಾರಾಟದ ಉದ್ದಿಮೆಗಳನ್ನೊಳಗೊಂಡು ಎಲ್ಲ ತರಹದ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ (Ban). ಹೋಟೆಲ್ ಹಾಗೂ ಡಾಬಾಗಳಲ್ಲಿಯೂ ಸಹ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧ ಮಾಡಲಾಗಿದೆ. ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಎರ್‌ಕ್ರಾಫ್ಟ್​​ ರೂಲ್ಸ್ 1937ರ ರೂಲ್ 91 ರೀತ್ಯ ಬಿಬಿಎಂಪಿಯಿಂದ ಈ ಆದೇಶ ಹೊರಡಿಸಲಾಗಿದೆ.

Published On - 7:05 pm, Tue, 31 January 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ