AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ

ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ ಕೈಗೊಳ್ಳಲು ಪಾಲಿಕೆ ಮುಂದಾಗಿದೆ. ಇನ್ನು ಮುಂದೆ ಈ ಶಾಲೆ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಖಾಸಗಿಯವರೂ ಅನುದಾನ ನೀಡಬಹುದಾಗಿದೆ. ಈ ಬಗ್ಗೆ ಈಗಾಗಲೇ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಆಸಕ್ತರು ಹೇಗೆ ಅನುದಾನ ನೀಡುವುದು? ಪ್ರಕ್ರಿಯೆ ಏನು ಇತ್ಯಾದಿ ವಿವರಗಳು ಇಲ್ಲಿವೆ.

ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ
ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ
Follow us
ಶಾಂತಮೂರ್ತಿ
| Updated By: Ganapathi Sharma

Updated on: Jun 15, 2024 | 11:53 AM

ಬೆಂಗಳೂರು, ಜೂನ್ 15: ಬಿಬಿಎಂಪಿ ಶಾಲೆ, ಕಾಲೇಜುಗಳ (BBMP School Colleges) ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ ಕೈಗೊಳ್ಳಲಾಗುತ್ತಿದ್ದು, ಇನ್ನು ಮುಂದೆ ಖಾಸಗಿ ಅನುದಾನಕ್ಕೆ (Private Fund) ಅವಕಾಶ ಮಾಡಿಕೊಡಲಾಗುತ್ತದೆ. ಬಿಬಿಎಂಪಿಯ ಶಿಶುವಿಹಾರ ಸೇರಿದಂತೆ ಶಾಲಾ- ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಇನ್ನು ಮುಂದೆ ಅನುದಾನ ನೀಡಬಹುದಾಗಿದೆ. ಇದಕ್ಕೆ ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.

ಪಾಲಿಕೆ ವ್ಯಾಪ್ತಿಯಲ್ಲಿರುವ 93 ಶಿಶುವಿಹಾರ, 16 ಪ್ರಾಥಮಿಕ, 33 ಪ್ರೌಢಶಾಲೆ, 18 ಪದವಿ ಪೂರ್ವ ಕಾಲೇಜು, 42 ಸ್ನಾತಕೋತ್ತರ ಕೇಂದ್ರಗಳು 25,500ಕ್ಕೂ ಹೆಚ್ಚು ಬಡ ಹಾಗೂ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡುತ್ತಿವೆ. ಈ ಶಾಲಾ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸಂಘ-ಸಂಸ್ಥೆಗಳ ಅಡಿಯಲ್ಲಿ ಅನುದಾನ ನೀಡಲು ಅವಕಾಶ ನೀಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ, ಏಕಾಏಕಿಯಾಗಿ ಶೇ 40 ರಷ್ಟು ಕುಸಿತ!

ಮೂರು ಮಾದರಿಯಲ್ಲಿ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ನೀಡಿರುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖಸಲಾಗಿದೆ. ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಶಿಕ್ಷಣ ವಿಭಾಗ ಸಂಪರ್ಕಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಶಿಕ್ಷಣ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ. ಮೊಬೈಲ್ ಸಂಖ್ಯೆ 2- 94801 80152, ಅಥವಾ ಇಮೇಲ್ ಐಡಿ eoeducation@yahoo.in ಅಥವಾ specialcommissioner education@gmail.com ಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ