AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ

ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ ಕೈಗೊಳ್ಳಲು ಪಾಲಿಕೆ ಮುಂದಾಗಿದೆ. ಇನ್ನು ಮುಂದೆ ಈ ಶಾಲೆ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಖಾಸಗಿಯವರೂ ಅನುದಾನ ನೀಡಬಹುದಾಗಿದೆ. ಈ ಬಗ್ಗೆ ಈಗಾಗಲೇ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಆಸಕ್ತರು ಹೇಗೆ ಅನುದಾನ ನೀಡುವುದು? ಪ್ರಕ್ರಿಯೆ ಏನು ಇತ್ಯಾದಿ ವಿವರಗಳು ಇಲ್ಲಿವೆ.

ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ
ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on: Jun 15, 2024 | 11:53 AM

Share

ಬೆಂಗಳೂರು, ಜೂನ್ 15: ಬಿಬಿಎಂಪಿ ಶಾಲೆ, ಕಾಲೇಜುಗಳ (BBMP School Colleges) ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ ಕೈಗೊಳ್ಳಲಾಗುತ್ತಿದ್ದು, ಇನ್ನು ಮುಂದೆ ಖಾಸಗಿ ಅನುದಾನಕ್ಕೆ (Private Fund) ಅವಕಾಶ ಮಾಡಿಕೊಡಲಾಗುತ್ತದೆ. ಬಿಬಿಎಂಪಿಯ ಶಿಶುವಿಹಾರ ಸೇರಿದಂತೆ ಶಾಲಾ- ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಇನ್ನು ಮುಂದೆ ಅನುದಾನ ನೀಡಬಹುದಾಗಿದೆ. ಇದಕ್ಕೆ ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.

ಪಾಲಿಕೆ ವ್ಯಾಪ್ತಿಯಲ್ಲಿರುವ 93 ಶಿಶುವಿಹಾರ, 16 ಪ್ರಾಥಮಿಕ, 33 ಪ್ರೌಢಶಾಲೆ, 18 ಪದವಿ ಪೂರ್ವ ಕಾಲೇಜು, 42 ಸ್ನಾತಕೋತ್ತರ ಕೇಂದ್ರಗಳು 25,500ಕ್ಕೂ ಹೆಚ್ಚು ಬಡ ಹಾಗೂ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡುತ್ತಿವೆ. ಈ ಶಾಲಾ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸಂಘ-ಸಂಸ್ಥೆಗಳ ಅಡಿಯಲ್ಲಿ ಅನುದಾನ ನೀಡಲು ಅವಕಾಶ ನೀಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ, ಏಕಾಏಕಿಯಾಗಿ ಶೇ 40 ರಷ್ಟು ಕುಸಿತ!

ಮೂರು ಮಾದರಿಯಲ್ಲಿ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ನೀಡಿರುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖಸಲಾಗಿದೆ. ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಶಿಕ್ಷಣ ವಿಭಾಗ ಸಂಪರ್ಕಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಶಿಕ್ಷಣ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ. ಮೊಬೈಲ್ ಸಂಖ್ಯೆ 2- 94801 80152, ಅಥವಾ ಇಮೇಲ್ ಐಡಿ eoeducation@yahoo.in ಅಥವಾ specialcommissioner education@gmail.com ಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!