AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ರೂಪಾಂತರಿ ಪತ್ತೆಗೆ ಹೊಸ ಅಸ್ತ್ರ; ಜಂಟಿಯಾಗಿ ಕಾರ್ಯಾಚರಣೆಗಿಳಿದ ಬಿಬಿಎಂಪಿ, BWSSB

ಕೊಳಚೆ ನೀರು ಪರೀಕ್ಷೆ ಮೂಲಕ ರೂಪಾಂತರಿ ವೈರಸ್ ಪತ್ತೆ ಹಚ್ಚಲು BBMP ಮುಂದಾಗಿದೆ. BBMP ಪಾಲಿಕೆ ವ್ಯಾಪ್ತಿಯ 34 STP ಕೊಳಚೆ ನೀರು ಪರೀಕ್ಷೆ ಮಾಡಲಾಗುತ್ತೆ. ಮೊದಲು ಕೊಳಚೆ ನೀರನ್ನು ಸಂಗ್ರಹಿಸಿ ಬಳಿಕ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತೆ.

ಕೋವಿಡ್ ರೂಪಾಂತರಿ ಪತ್ತೆಗೆ ಹೊಸ ಅಸ್ತ್ರ; ಜಂಟಿಯಾಗಿ ಕಾರ್ಯಾಚರಣೆಗಿಳಿದ ಬಿಬಿಎಂಪಿ, BWSSB
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:May 06, 2022 | 10:03 AM

Share

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ 4ನೇ ಅಲೆಯ(Coronavirus 4th Wave) ಆತಂಕ ಹೆಚ್ಚಾಗಿದೆ. ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆ ಮತ್ತೆ ನಡುಕ ಹುಟ್ಟಿಸಿದೆ. ಸದ್ಯ ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಪತ್ತೆಗೆ ಹೊಸ ಅಸ್ತ್ರ ಬಳಕೆಗೆ ಸಿದ್ಧತೆ ನಡೆದಿದೆ. ದಕ್ಷಿಣ ಆಫ್ರಿಕಾ ಮಾದರಿಯಲ್ಲಿ ಹೊಸ ತಳಿ ಪತ್ತೆಗೆ ಬಿಬಿಎಂಪಿ, BWSSB ಜಂಟಿಯಾಗಿ ರೂಪಾಂತರಿ ಪತ್ತೆಗೆ ಪ್ಲ್ಯಾನ್ ಮಾಡಿದೆ. 2ನೇ ಕೋವಿಡ್ ಅಲೆ ವೇಳೆ ಬಳಸಿದ ಬಾಣವೇ ಈಗಲೂ ಪ್ರಯೋಗ ಮಾಡಲು ಮುಂದಾಗಿದ್ದಾರೆ.

ಕೊಳಚೆ ನೀರು ಪರೀಕ್ಷೆ ಮೂಲಕ ರೂಪಾಂತರಿ ವೈರಸ್ ಪತ್ತೆ ಹಚ್ಚಲು BBMP ಮುಂದಾಗಿದೆ. BBMP ಪಾಲಿಕೆ ವ್ಯಾಪ್ತಿಯ 34 STP ಕೊಳಚೆ ನೀರು ಪರೀಕ್ಷೆ ಮಾಡಲಾಗುತ್ತೆ. ಮೊದಲು ಕೊಳಚೆ ನೀರನ್ನು ಸಂಗ್ರಹಿಸಿ ಬಳಿಕ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತೆ. ಕೊಳಚೆ ನೀರಿನಿಂದಲೂ ಕೊರೊನಾ ರೂಪಾಂತರಿ ಹರಡುವ ಭೀತಿ ಇದೆ. ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಕೊಳಚೆ ನೀರಿನಲ್ಲಿ ರೂಪಾಂತರಿ ಪತ್ತೆಯಾಗಿತ್ತು. 15 ದಿನಗಳ ಹಿಂದೆಯೇ ಕೊಳಚೆ ನೀರು ಪರೀಕ್ಷೆ ಮಾಡಿದ ಬಳಿಕವೇ ಹೆಚ್ಚು ಜನರಿಗೆ ಸೋಂಕು ಹರಡುವುದನ್ನು ಅಲ್ಲಿ ತಪ್ಪಿಸಲಾಗಿತ್ತು. ಈ ಹಿನ್ನೆಲೆ ಬಿಬಿಎಂಪಿಯಿಂದ ರೂಪಾಂತರಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ 34 STP ಗಳಿಂದ ನೀರು ಸಂಗ್ರಹಿಸಿ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ.

ಬೊಮ್ಮನಹಳ್ಳಿ, ಮಹದೇವಪುರ & ಪೂರ್ವ ವಲಯಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆದಿದೆ. ಈ ವೇಳೆ ಶೇ.70 ರಷ್ಟು ಒಮಿಕ್ರಾನ್, ಶೇ.30 ರಷ್ಟು ಹಳೆ ಕೋವಿಡ್ ಡೆಲ್ಟಾ ಮಾದರಿ ಪತ್ತೆಯಾಗಿತ್ತು. ಇದೀಗ ಹೊಸ ಪ್ರಭೇದದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಈ ಹಿಂದೆ 15 ದಿನಗಳಿಗೆ ಒಮ್ಮೆ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ 7 ದಿನಗಳಿಗೆ ಒಂದು ಬಾರಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಕೊರೊನಾ 4ನೇ ಅಲೆ ಬರುವ ಮುನ್ನವೇ ಹೆಚ್ಚಿನ ನಿಗಾ ವಹಿಸಿ ಕೊರೊನಾ ತಡೆಗಟ್ಟಲು ಎಲ್ಲಾ ರೀತಿಯಲ್ಲಿ ಸಿದ್ಧತೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:37 am, Fri, 6 May 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು