AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Town Hall: ಟೌನ್‌ ಹಾಲ್‌ ಬಾಡಿಗೆ ದರ ಪರಿಷ್ಕರಣೆ, ರಂಗಭೂಮಿ ಚಟುವಟಿಕೆಗಳಿಗೆ ಶೇಕಡ 50% ರಿಯಾಯಿತಿ

ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರ ಪರಿಷ್ಕರಣೆ ಮಾಡಲಾಗಿದೆ.

Town Hall: ಟೌನ್‌ ಹಾಲ್‌ ಬಾಡಿಗೆ ದರ ಪರಿಷ್ಕರಣೆ, ರಂಗಭೂಮಿ ಚಟುವಟಿಕೆಗಳಿಗೆ ಶೇಕಡ 50% ರಿಯಾಯಿತಿ
ಟೌನ್‌ ಹಾಲ್‌
Follow us
TV9 Web
| Updated By: ಆಯೇಷಾ ಬಾನು

Updated on: Aug 29, 2022 | 5:40 PM

ಬೆಂಗಳೂರು: ಟೌನ್‌ ಹಾಲ್‌ ಬಾಡಿಗೆ ದರ ಪರಿಷ್ಕರಣೆ ಮಾಡಿ ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್ ಪುರ ಆದೇಶ ಹೊರಡಿಸಿದ್ದಾರೆ. ಟೌನ್‌ ಹಾಲ್‌ ಎಂದೇ ಪ್ರಸಿದ್ಧವಾಗಿರುವ ಸರ್‌ ಪುಟ್ಟಣ ಚೆಟ್ಟಿ ಪುರಭವನದ ಬಾಡಿಗೆ ದರ ಪರಿಷ್ಕರಣೆಗೆ ಸೂಜಿಸಲಾಗಿದ್ದು ಸೆಪ್ಟೆಂಬರ್‌ 1ರಿಂದ ಇದು ಜಾರಿಗೆ ಬರಲಿದೆ. ಹಾಗೂ ರಂಗಭೂಮಿ ಚಟುವಟಿಕೆಗಳಿಗೆ ಶೇಕಡ 50 ರಿಯಾಯಿತಿಯನ್ನೂ ಬಿಬಿಎಂಪಿ ಘೋಷಿಸಿದೆ.

ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರ ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಪೂರ್ತಿ ದಿನ(ಬೆಳಗ್ಗೆ 8.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿ(Air Conditioner) ಇದ್ದರೆ 75,000 ರೂ. ಹಾಗೂ ನಾನ್ ಎ.ಸಿ(Non Air Conditioner)ಗೆ 60,000 ರೂ. ನಿಗದಿಪಡಿಸಲಾಗಿತ್ತು. ಇದೀಗ ದರ ಪರಿಷ್ಕರಿಸಿದ್ದು, ಪೂರ್ತಿ ದಿನಕ್ಕೆ ಎ.ಸಿಗೆ 60,000 ರೂ. ಹಾಗೂ ನಾನ್ ಎ.ಸಿಗೆ 50,000 ದರ ನಿಗದಿಪಡಿಸಲಾಗಿದ್ದು, ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌.

ಅಲ್ಲದೆ, ಮೊದಲಾರ್ಧ ದಿನ(ಬೆಳಗ್ಗೆ 8.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ) ಹಾಗೂ ದ್ವಿತಿಯಾರ್ಧ ದಿನ(ಮಧ್ಯಾಹ್ನ 3.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿಗೆ 30,000 ಹಾಗೂ ನಾನ್ ಎ.ಸಿಗರ 25,000 ರೂ. ದರ ನಿಗದಿ ಮಾಡಲಾಗಿದೆ. ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌. ಕನ್ನಡ ರಂಗಭೂಮಿಯ ಎಲ್ಲಾ ನಾಟಕ – ಪ್ರಸಂಗಗಳಿಗೆ ಹಾಗೂ ವಿಶೇಷ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಪರಿಷ್ಕೃತ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್ ಪುರ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
ಏರ್​​ಪೋರ್ಟ್​ನಲ್ಲಿ ಯುವತಿಯ ಮೇಕಪ್​ ತೆಗೆಸಿದ ಏರ್​ಪೋರ್ಟ್​ ಸಿಬ್ಬಂದಿ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್​ನಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ, 4 ಮಂದಿ ಸಾವು, 25 ಜನರಿಗೆ ಗಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಈ ರೀತಿ ಕುತ್ತಿಗೆ ತೂಗು ಹಾಕುವ ವಿಧಾನದಿಂದ ಈ ಗಂಭೀರ ಕಾಯಿಲೆ ಮಾಯ
ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಧನುಷ್ಕೋಟಿ ಜಲಪಾತ: ವಿಡಿಯೋ ನೋಡಿ