AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Town Hall: ಟೌನ್‌ ಹಾಲ್‌ ಬಾಡಿಗೆ ದರ ಪರಿಷ್ಕರಣೆ, ರಂಗಭೂಮಿ ಚಟುವಟಿಕೆಗಳಿಗೆ ಶೇಕಡ 50% ರಿಯಾಯಿತಿ

ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರ ಪರಿಷ್ಕರಣೆ ಮಾಡಲಾಗಿದೆ.

Town Hall: ಟೌನ್‌ ಹಾಲ್‌ ಬಾಡಿಗೆ ದರ ಪರಿಷ್ಕರಣೆ, ರಂಗಭೂಮಿ ಚಟುವಟಿಕೆಗಳಿಗೆ ಶೇಕಡ 50% ರಿಯಾಯಿತಿ
ಟೌನ್‌ ಹಾಲ್‌
TV9 Web
| Updated By: ಆಯೇಷಾ ಬಾನು|

Updated on: Aug 29, 2022 | 5:40 PM

Share

ಬೆಂಗಳೂರು: ಟೌನ್‌ ಹಾಲ್‌ ಬಾಡಿಗೆ ದರ ಪರಿಷ್ಕರಣೆ ಮಾಡಿ ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್ ಪುರ ಆದೇಶ ಹೊರಡಿಸಿದ್ದಾರೆ. ಟೌನ್‌ ಹಾಲ್‌ ಎಂದೇ ಪ್ರಸಿದ್ಧವಾಗಿರುವ ಸರ್‌ ಪುಟ್ಟಣ ಚೆಟ್ಟಿ ಪುರಭವನದ ಬಾಡಿಗೆ ದರ ಪರಿಷ್ಕರಣೆಗೆ ಸೂಜಿಸಲಾಗಿದ್ದು ಸೆಪ್ಟೆಂಬರ್‌ 1ರಿಂದ ಇದು ಜಾರಿಗೆ ಬರಲಿದೆ. ಹಾಗೂ ರಂಗಭೂಮಿ ಚಟುವಟಿಕೆಗಳಿಗೆ ಶೇಕಡ 50 ರಿಯಾಯಿತಿಯನ್ನೂ ಬಿಬಿಎಂಪಿ ಘೋಷಿಸಿದೆ.

ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸುವ ಸಲುವಾಗಿ ಪಾಲಿಕೆಯ ಒಡೆತನದಲ್ಲಿರುವ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದ ಬಾಡಿಗೆ ದರ ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಪೂರ್ತಿ ದಿನ(ಬೆಳಗ್ಗೆ 8.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿ(Air Conditioner) ಇದ್ದರೆ 75,000 ರೂ. ಹಾಗೂ ನಾನ್ ಎ.ಸಿ(Non Air Conditioner)ಗೆ 60,000 ರೂ. ನಿಗದಿಪಡಿಸಲಾಗಿತ್ತು. ಇದೀಗ ದರ ಪರಿಷ್ಕರಿಸಿದ್ದು, ಪೂರ್ತಿ ದಿನಕ್ಕೆ ಎ.ಸಿಗೆ 60,000 ರೂ. ಹಾಗೂ ನಾನ್ ಎ.ಸಿಗೆ 50,000 ದರ ನಿಗದಿಪಡಿಸಲಾಗಿದ್ದು, ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌.

ಅಲ್ಲದೆ, ಮೊದಲಾರ್ಧ ದಿನ(ಬೆಳಗ್ಗೆ 8.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ) ಹಾಗೂ ದ್ವಿತಿಯಾರ್ಧ ದಿನ(ಮಧ್ಯಾಹ್ನ 3.00 ರಿಂದ ರಾತ್ರಿ 10.00 ಗಂಟೆಯವರೆಗೆ)ಕ್ಕೆ ಎ.ಸಿಗೆ 30,000 ಹಾಗೂ ನಾನ್ ಎ.ಸಿಗರ 25,000 ರೂ. ದರ ನಿಗದಿ ಮಾಡಲಾಗಿದೆ. ತೆರಿಗೆಗಳು ಪ್ರತ್ಯೇಕವಾಗಿರುತ್ತದೆ‌. ಕನ್ನಡ ರಂಗಭೂಮಿಯ ಎಲ್ಲಾ ನಾಟಕ – ಪ್ರಸಂಗಗಳಿಗೆ ಹಾಗೂ ವಿಶೇಷ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಪರಿಷ್ಕೃತ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್ ಪುರ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​