AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟಿಂಗ್, ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ ನಿಗಾ ಇಡಲು ಬಿಬಿಎಂಪಿ ವಾರ್ ರೂಮ್‌ಗಳಿಗೆ 27 KAS ಅಧಿಕಾರಿಗಳ ನೇಮಕ

ಬಿಬಿಎಂಪಿಯ 8 ವಲಯಗಳ ವಾರ್ ರೂಮ್‌ಗಳಿಗೆ 27 ಅಧಿಕಾರಿಗಳನ್ನ ನೇಮಿಸಲಾಗಿದೆ. ನಗರದ 27 ವಿಧಾನಸಭಾ ಕ್ಷೇತ್ರಗಳಿಗೂ ಅಧಿಕಾರಿಗಳ ನೇಮಕಗೊಳಿಸಲಾಗಿದೆ.

ಟೆಸ್ಟಿಂಗ್, ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ ನಿಗಾ ಇಡಲು ಬಿಬಿಎಂಪಿ ವಾರ್ ರೂಮ್‌ಗಳಿಗೆ 27 KAS ಅಧಿಕಾರಿಗಳ ನೇಮಕ
ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್ಗಳ ಸಂಖ್ಯೆ
TV9 Web
| Edited By: ಆಯೇಷಾ ಬಾನು|

Updated on: Jan 07, 2022 | 8:41 AM

Share

ಬೆಂಗಳೂರು: ಕೊರೊನಾ 3ನೇ ಅಲೆ ಆರ್ಭಟ ಮಿತಿ ಮೀರುತ್ತಿದೆ. ಬೆಂಗಳೂರು ಸೇರಿ ರಾಜ್ಯಕ್ಕೆ ಕಂಟಕ ಹೆಚ್ಚಾಗ್ತಿದೆ. ಕಳೆದೊಂದು ವಾರದಿಂದ ನಿತ್ಯ 3 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ಗಳು ಪತ್ತೆಯಾಗ್ತಿವೆ. ಕಳೆದೊಂದು ವಾರದ ಹಿಂದೆ 300 ಅಸುಪಾಸಿನಲ್ಲಿ ಬರ್ತಿದ್ದ ಕೇಸ್ ಈಗ 4 ಸಾವಿರದ ಗಡಿ ದಾಟಿದೆ. ನಿನ್ನೆ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿದೆ. ಸದ್ಯ ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ ನಿಗಾ ಇಡಲು ಬಿಬಿಎಂಪಿ ವಾರ್ ರೂಮ್‌ಗಳಿಗೆ KAS ಅಧಿಕಾರಿಗಳ ನೇಮಕಗೊಳಿಸಲಾಗಿದೆ.

ಬಿಬಿಎಂಪಿ ವಾರ್ ರೂಮ್‌ಗಳಿಗೆ KAS ಅಧಿಕಾರಿಗಳ ನೇಮಕ ಬಿಬಿಎಂಪಿಯ 8 ವಲಯಗಳ ವಾರ್ ರೂಮ್‌ಗಳಿಗೆ 27 ಅಧಿಕಾರಿಗಳನ್ನ ನೇಮಿಸಲಾಗಿದೆ. ನಗರದ 27 ವಿಧಾನಸಭಾ ಕ್ಷೇತ್ರಗಳಿಗೂ ಅಧಿಕಾರಿಗಳ ನೇಮಕಗೊಳಿಸಲಾಗಿದೆ. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಟೆಸ್ಟಿಂಗ್, ಕಂಟೇನ್ಮೆಂಟ್ ಜೋನ್, ಹೋಮ್ ಐಸೋಲೇಷನ್ ಬಗ್ಗೆ KAS ಅಧಿಕಾರಿಗಳು ನಿಗಾ ಇಡಲಿದ್ದಾರೆ.

ಕಂಟೇನ್‌ಮೆಂಟ್ ಜೋನ್ಗಳ ಪಟ್ಟಿ ಬೊಮ್ಮನಹಳ್ಳಿ ವಲಯ-49, ಮಹದೇವಪುರ ವಲಯ-48, ಪಶ್ಚಿಮ ವಲಯ-16, ದಕ್ಷಿಣ ವಲಯ-15, ಪೂರ್ವ ವಲಯ-12, ಯಲಹಂಕ-10, ದಾಸರಹಳ್ಳಿ-3, ಆರ್.ಆರ್.ನಗರದಲ್ಲಿ 1 ಕಂಟೇನ್‌ಮೆಂಟ್ ಜೋನ್ನನ್ನು ಗುರುತಿಸಲಾಗಿದೆ. ನಗರದ 8 ವಲಯಗಳಲ್ಲಿ ಕೊವಿಡ್ ಪಾಸಿಟಿವಿಟಿ ದರ ಏರಿಕೆಯಾಗಿದೆ. ಮಹದೇವಪುರ ಪಾಸಿಟಿವಿಟಿ ರೇಟ್ 3 % ರಷ್ಟು ಸಮೀಪ ತಲುಪಿದೆ.

ಕೊರೊನಾ ಶಾಕ್ ಡಿಸೆಂಬರ್ 29ರಂದು 566 ಪಾಸಿಟಿವ್ ಕೇಸ್ ಇದ್ವು.. ಜನವರಿ 1 ಅಂದ್ರೆ ಮೂರು ದಿನದ ಅಂತರದಲ್ಲಿ 1ಸಾವಿರದ 33 ಕೇಸ್ ಪತ್ತೆಯಾದ್ವು. ಇದಾದ ನಂತ್ರ ಜನವರಿ 4 ಅಂದ್ರೆ ಮತ್ತೆ ಮೂರು ದಿನದ ಅಂತರದಲ್ಲಿ 2ಸಾವಿರದ 479 ಪಾಸಿಟಿವ್ ಕೇಸ್ ಪತ್ತೆಯಾದ್ವು. ಅಲ್ದೆ, ಜನವರಿ 5 ಅಂದ್ರೆ ಕೇವಲ ಒಂದೇ ದಿನದ ಅಂತರದಲ್ಲಿ 4ಸಾವಿರದ 246 ಕೇಸ್ಗಳು ಪತ್ತೆಯಾಗಿದೆ.

ಇದನ್ನೂ ಓದಿ: ಕೊರೊನಾ ಸೋಂಕು ಉಲ್ಬಣ: ಮಂಡ್ಯ ಜಿಲ್ಲೆಯಲ್ಲಿ ಜ 19ರವರೆಗೆ ನಿಷೇಧಾಜ್ಞೆ, ಬೆಳಗಾವಿಯಲ್ಲಿ ಪ್ರಸಿದ್ಧ ದೇಗುಲಗಳಿಗೆ ಪ್ರವೇಶ ನಿರ್ಬಂಧ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ