AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್‌ನಲ್ಲಿ ನಮಗೆ 8 ಸಾವಿರ ಕೋಟಿ ಅನುದಾನ ನೀಡಿ, ಸರ್ಕಾರಕ್ಕೆ ಬಿಬಿಎಂಪಿ ಮನವಿ

ರಾಜ್ಯ ಬಜೆಟ್‌ನಲ್ಲಿ ಮೂಲಸೌಕರ್ಯ ಯೋಜನೆಗಳು ಮತ್ತು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು 8,050 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ. ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮತ್ತು ನಡೆಯುತ್ತಿರುವ ಕಾಮಗಾರಿಗಳಿಗೆ ಸುಮಾರು 3,000 ಕೋಟಿ ರೂ. ಬೇಕಾಗಿದೆ.

ಬಜೆಟ್‌ನಲ್ಲಿ ನಮಗೆ 8 ಸಾವಿರ ಕೋಟಿ ಅನುದಾನ ನೀಡಿ, ಸರ್ಕಾರಕ್ಕೆ ಬಿಬಿಎಂಪಿ ಮನವಿ
ಬಿಬಿಎಂಪಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 13, 2024 | 11:33 AM

Share

ಬೆಂಗಳೂರು, ಫೆಬ್ರವರಿ 13: ರಾಜ್ಯ ಬಜೆಟ್‌ನಲ್ಲಿ (Budget) ಮೂಲಸೌಕರ್ಯ ಯೋಜನೆಗಳು ಮತ್ತು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು 8,050 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ (Karnataka Government) ಬಿಬಿಎಂಪಿ (BBMP) ಮನವಿ ಮಾಡಿದೆ. ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮತ್ತು ನಡೆಯುತ್ತಿರುವ ಕಾಮಗಾರಿಗಳಿಗೆ ಸುಮಾರು 3,000 ಕೋಟಿ ರೂ. ಬೇಕಾಗಿದೆ. ಇನ್ನು ಗುತ್ತಿಗೆದಾರರಿಗೆ ಬಿಬಿಎಂಪಿ ನೀಡಬೇಕಿರುವ ಒಟ್ಟು ಬಾಕಿ ಮೊತ್ತ 2,700 ಕೋಟಿ ರೂಪಾಯಿ ಎಂದು ಪಾಲಿಕೆ ಮೂಲಗಳು ತಿಳಿಸಿವೆ. ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ 200 ಕೋಟಿ ರೂ., ಘನತ್ಯಾಜ್ಯ ನಿರ್ವಹಣೆಗೆ 600 ಕೋಟಿ ರೂ., ಮಳೆ ನೀರು ಚರಂಡಿಗಳ ಅಭಿವೃದ್ಧಿಗೆ 200 ಕೋಟಿ ರೂ. ಅಗತ್ಯವಿದೆ ಎಂದು ಬಿಬಿಎಂಪಿ ಸರ್ಕಾರಕ್ಕೆ ತಿಳಿಸಿದೆ.

ಉಳಿದ ಹಣವನ್ನು ಹೊಸ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುವುದು. ಮೂಲಗಳ ಪ್ರಕಾರ, ಬಿಬಿಎಂಪಿ ಕಳೆದ ವರ್ಷ ಸುಮಾರು 9,000 ಕೋಟಿ ಅನುದಾನವನ್ನು ಕೋರಿತ್ತು ಮತ್ತು ಸರ್ಕಾರ ಕೇವಲ 3,732 ಕೋಟಿ ರೂ. ನೀಡಿತ್ತು.

ಇದನ್ನೂ ಓದಿ: ಬಜೆಟ್‌ಗೂ ಮೊದಲೇ ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಈ ಬಾರಿ ನಗರದ ಮೊದಲ ಸುರಂಗ ಮಾರ್ಗ ಯೋಜನೆ ಮತ್ತು ಸ್ಕೈ ಡೆಕ್ ಯೋಜನೆ ಆರಂಭಿಸಲು ಸರ್ಕಾರ ಉತ್ಸುಕವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ, ಅಧಿಕಾರಿಗಳು ತಾವು ಕೇಳಿದ ಹಣವನ್ನು ಸರ್ಕಾರ ಮಂಜೂರು ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಸಿದ್ದರಾಮಯ್ಯ ಬಜೆಟ್​

ರಾಜ್ಯದಲ್ಲಿ ಈಗಾಗಲೆ ಬಜೆಟ್​ ಅಧಿವೇಶನ ಆರಂಭವಾಗಿದೆ. ಸೋಮವಾರ (ಫೆ.12) ರಂದು ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಭಾಷಣ ಮಾಡಿದರು. ಇಂದಿನಿಂದ (ಫೆ.13) ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಆರಂಭವಾಗಿದೆ. ಶುಕ್ರವಾರ (ಫೆ.16) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ ಮಂಡನೆ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ