AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಸದಾಶಿವನಗರದ ಸ್ಯಾಂಕಿ ಟ್ಯಾಂಕ್​ನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ; ನಿಯಮಗಳು ಇಲ್ಲಿದೆ

Ganesh Chaturthi 2021: ಥರ್ಮಲ್ ಸ್ಕ್ರೀನಿಂಗ್ ಬಳಿಕ ಗಣೇಶ ವಿಸರ್ಜನೆಗೆ ಅವಕಾಶ ಕೊಡಲಾಗುವ ಬಗ್ಗೆ ಹೇಳಲಾಗಿದೆ. ಇಬ್ಬರಿಗೆ ಮಾತ್ರ ಹೊಂಡದವರೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಶಿವಸ್ವಾಮಿ ತಿಳಿಸಿದ್ದಾರೆ.

Bengaluru: ಸದಾಶಿವನಗರದ ಸ್ಯಾಂಕಿ ಟ್ಯಾಂಕ್​ನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ; ನಿಯಮಗಳು ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 10, 2021 | 2:36 PM

Share

ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸದಾಶಿವನಗರದ ಸ್ಯಾಂಕಿ ಟ್ಯಾಂಕ್​​ನಲ್ಲಿ ವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು, ಬೆಂಗಳೂರಿನಲ್ಲಿ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶಿವಸ್ವಾಮಿ ಹೇಳಿಕೆ ನೀಡಿದ್ದಾರೆ. ಇಂದಿನಿಂದ 3 ದಿನ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಲಾಗುವುದು. ಬೆಳಗ್ಗೆ 7 ಗಂಟೆಯಿಂದ ರಾತ್ರಿ 9ರವರೆಗೆ ವಿಸರ್ಜನೆಗೆ ಅನುವು ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ವಿಸರ್ಜನೆ ವೇಳೆ ಕೊವಿಡ್ ನಿಯಮ ಪಾಲಿಸುವಂತೆ ಸೂಚನೆ ಕೊಡಲಾಗಿದೆ. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ಹೇಳಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಿಂದ ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ಬಳಿಕ ಗಣೇಶ ವಿಸರ್ಜನೆಗೆ ಅವಕಾಶ ಕೊಡಲಾಗುವ ಬಗ್ಗೆ ಹೇಳಲಾಗಿದೆ. ಇಬ್ಬರಿಗೆ ಮಾತ್ರ ಹೊಂಡದವರೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಶಿವಸ್ವಾಮಿ ತಿಳಿಸಿದ್ದಾರೆ.

ವಾರ್ಡ್​ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿ ಕೂರಿಸಲು ಅನುಮತಿ ಗಣೇಶೋತ್ಸವ ಸಮಿತಿಗಳ ಪ್ರತಿಭಟನೆಗೆ ಬಿಬಿಎಂಪಿ ಮಣಿದಿತ್ತು. ಬೇಡಿಕೆ ಬಂದಲ್ಲಿ ಒಂದು ವಾರ್ಡ್‌ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದರು. ವಿಶೇಷ ಆಯುಕ್ತರ ಮಾತಿಗೆ ಒಪ್ಪಿದ ಗಣೇಶ ಉತ್ಸವ ಸಮಿತಿ, ಮೂರ್ತಿ ತಯಾರಕರ ಧರಣಿಯನ್ನು ಹಿಂಪಡೆದಿದ್ದರು.

ಇದನ್ನೂ ಓದಿ: ಮಾಸ್ಕ್​ ಧರಿಸಿ ವ್ಯಾಕ್ಸಿನ್ ಹಿಡಿದ ಗಣಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗಣೇಶ ಚತುರ್ಥಿಗೆ ಶುಭಾಶಯ

ಇದನ್ನೂ ಓದಿ: ಕೋಲಾರ: ತಾಲಿಬಾನಿಗಳಿಗೆ, ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಬುದ್ಧಿ ಕಲಿಸುತ್ತಿರುವ ಪರಿಕಲ್ಪನೆಯಲ್ಲಿ ಗಣೇಶ

Published On - 2:27 pm, Fri, 10 September 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು