AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಬಜೆಟ್​: ಬೆಂಗಳೂರಿನ ನೂರು ಕಡೆ SHE TOILET, ಪೌರಕಾರ್ಮಿಕ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ, ಇನ್ನೂ ಏನೇನಿದೆ?

BBMP Budget 2024: ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ, ಮಹಿಳಾ ಸುರಕ್ಷತೆ ಹಾಗೂ ಪೌರ ಕಾರ್ಮಿಕರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. 2024-25ನೇ ಸಾಲಿನ ಬಿಬಿಎಂಪಿ ಆಯವ್ಯಯದಲ್ಲಿ ಏನೇನು ಘೋಷಣೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಬಿಎಂಪಿ ಬಜೆಟ್​: ಬೆಂಗಳೂರಿನ ನೂರು ಕಡೆ SHE TOILET, ಪೌರಕಾರ್ಮಿಕ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ, ಇನ್ನೂ ಏನೇನಿದೆ?
ಬಿಬಿಎಂಪಿ ಬಜೆಟ್
Follow us
TV9 Web
| Updated By: Ganapathi Sharma

Updated on:Feb 29, 2024 | 12:18 PM

ಬೆಂಗಳೂರು, ಫೆಬ್ರವರಿ 29: ಬೆಂಗಳೂರಿನ ನೂರು ಕಡೆಗಳಲ್ಲಿ ಮಹಿಳೆಯರಿಗಾಗಿ ‘ಶಿ ಟಾಯ್ಲೆಟ್ (SHE TOILET)’ಗಳ ನಿರ್ಮಾಣ, ಪೌರಕಾರ್ಮಿಕರ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ. ಅನುದಾನ ಸೇರಿದಂತೆ ಹಲವು ಹೊಸ ಯೋಜನೆಗಳನ್ನು 2024-25ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್​​ನಲ್ಲಿ (BBMP Budget) ಘೋಷಣೆ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಅಯುಕ್ತ ಶಿವಾನಂದ ಕಲ್ಕೆರಿ ಬೆಂಗಳೂರಿನ ಟೌನ್ ಹಾಲ್​ನಲ್ಲಿ ಬಜೆಟ್ ಮಂಡನೆ ಮಾಡಿದರು. ಪೌರಕಾರ್ಮಿಕರಿಗೆ ‘ಶರಣೆ ಸತ್ಯಕ್ಕ’ ಪ್ರಶಸ್ತಿ ನೀಡಲು ಹಾಗೂ ಪ್ರಶಸ್ತಿ ಜೊತೆಗೆ 50 ಸಾವಿರ ರೂ. ಬಹುಮಾನ ನೀಡುವ ಬಗ್ಗೆಯೂ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ 11,307 ಪೌರ ಕಾರ್ಮಿಕರ ನೇರ ನೇಮಕಾತಿ ಮಾಡುವುದಾಗಿ ಬಜೆಟ್​ನಲ್ಲಿ ಭರವಸೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿ ಮೂಡಿಸಲು ‘ಹಸಿರುರಕ್ಷಕ’ ಆ್ಯಪ್, ರಸ್ತೆ ಬದಿ, ಪಾರ್ಕ್, ಕೆರೆ ಅಂಗಳದಲ್ಲಿ 2 ಲಕ್ಷ ಸಸಿ ನೆಡಲು ನಿರ್ಧಿರಿಸಿರುವುದಾಗಿ ಘೋಷಣೆ ಮಾಡಲಾಗಿದೆ. ದಾಸರಹಳ್ಳಿ, ಯಲಹಂಕ ವಲಯದಲ್ಲಿ ಹೈಟೆಕ್ ಸಸ್ಯಕ್ಷೇತ್ರ ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಹೈಟೆಕ್ ಸಸ್ಯಕ್ಷೇತ್ರ ಸ್ಥಾಪನೆಗೆ 14 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಬನ್ನೇರುಘಟ್ಟ ಉದ್ಯಾನ ವನಕ್ಕೆ 1 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಇದಲ್ಲದೆ, ಬೆಂಗಳೂರಿನಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಮೊಬೈಲ್ ಕ್ಯಾಂಟೀನ್ ಸ್ಥಾಪಿಸಲು 70 ಕೋಟಿ ರೂ. ಮೀಸಲು ಇಡುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಬಿಬಿಎಂಪಿ ಬಜೆಟ್​​ನಲ್ಲಿ ಘೋಷಣೆಯಾದ ಇನ್ನಷ್ಟು ಅಂಶ

  • ಬೆಂಗಳೂರು ನಗರದಲ್ಲಿ ವೈಟ್ ಟಾಪಿಂಗ್ ರಸ್ತೆಗೆ 800 ಕೋಟಿ ರೂ.
  • ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಸಂಪರ್ಕ ಮೇಲ್ಸೇತುವೆಗೆ 380 ಕೋಟಿ ರೂ.
  • ಸಂಯುಕ್ತ ಮೆಟ್ರೋ, ರಸ್ತೆ ಮೇಲ್ಸೇತುವೆಗೆ 100 ಕೋಟಿ ರೂ. ಅನುದಾನ.
  • ಘನತ್ಯಾಜ್ಯ ಸಂಗ್ರಹಣೆ, ವಿಂಗಡನೆ, ಭೂಭರ್ತಿ ಪ್ರದೇಶ ಅಭಿವೃದ್ಧಿಗೆ 1 ಸಾವಿರ ಕೋಟಿ ಮೀಸಲು.
  • ಮೊದಲ ಹಂತದಲ್ಲಿ ಬೇಗೂರಿನ ರಮಣಶ್ರೀ ಲೇಔಟ್​​ನಲ್ಲಿ 200 ಮನೆಗಳಿಂದ ಹಸಿ-ಒಣ ತ್ಯಾಜ್ಯ ಸಂಗ್ರಹಿಸಿ ರೀ ಸೈಕ್ಲಿಂಗ್.

ಇದನ್ನೂ ಓದಿ: ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿ ಆರೋಗ್ಯ ಸೇವೆ ಉನ್ನತಿಕರಣಕ್ಕೆ 200 ಕೋಟಿ

  • ಅರಣ್ಯ ತೋಟಗಾರಿಕೆ ಹಾಗೂ ಕೆರೆಗಳ ವಿಭಾಗವನ್ನ ಅರಣ್ಯ, ಪರಿಸರ, ವೈಪರಿತ್ಯ ನಿರ್ವಹಣೆ ಎಂದು ಮರುನಾಮಕರಣ/ ರಸ್ತೆ ಬದಿ ನೆಟ್ಟಿರುವ ಮರಗಳಿಗೆ 224 ಶಾಲೆಗಳ 52,015 ವಿದ್ಯಾರ್ಥಿಗಳ ಟ್ಯಾಗ್.
  • ರಸ್ತೆ ಬದಿ, ಪಾರ್ಕ್,ಕೆರೆ ಅಂಗಳದಲ್ಲಿ 2 ಲಕ್ಷ ಸಸಿ ನೆಡುವಿಕೆ
  • ದಾಸರಹಳ್ಳಿ, ಯಲಹಂಕ ವಲಯದಲ್ಲಿ ಹೊಸ ಹೈಟೆಕ್ ಸಸ್ಯಕ್ಷೇತ್ರ ಸ್ಥಾಪನೆ, ಇದಕ್ಕಾಗಿ 14 ಕೋಟಿ ಅನುದಾನ ಮೀಸಲು.
  • ಅಪಘಾತಕ್ಕೀಡಾದ ವನ್ಯಜೀವಿಗಳ ರಕ್ಷಣೆಗೆ ಬನ್ನೇರುಘಟ್ಟ ಉದ್ಯಾನ ವನಕ್ಕೆ 1 ಕೋಟಿ ರೂ. ಮೀಸಲು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಗೆ 8 ವಿಭಾಗ

ಬಿಬಿಎಂಪಿ ಬಜೆಟ್​ನಲ್ಲಿ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಗೆ 8 ವಿಭಾಗಗಳನ್ನು ಹೆಸರಿಸಲಾಗಿದೆ. ಅವುಗಳು ಹೀಗಿವೆ;

  • ಸುಗಮ ಸಂಚಾರ
  • ಸ್ವಚ್ಚ ಬೆಂಗಳೂರು
  • ಹಸಿರು ಬೆಂಗಳೂರು
  • ಆರೋಗ್ಯಕರ ಬೆಂಗಳೂರು
  • ಶಿಕ್ಷಣ ಬೆಂಗಳೂರು
  • ಟೆಕ್ ಬೆಂಗಳೂರು
  • ವೈಬ್ರೆಂಟ್ ಬೆಂಗಳೂರು
  • ನೀರಿನ ಭದ್ರತೆಯ ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 29 February 24

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!