AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಬಜೆಟ್​: ಬೆಂಗಳೂರಿನ ನೂರು ಕಡೆ SHE TOILET, ಪೌರಕಾರ್ಮಿಕ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ, ಇನ್ನೂ ಏನೇನಿದೆ?

BBMP Budget 2024: ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ, ಮಹಿಳಾ ಸುರಕ್ಷತೆ ಹಾಗೂ ಪೌರ ಕಾರ್ಮಿಕರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. 2024-25ನೇ ಸಾಲಿನ ಬಿಬಿಎಂಪಿ ಆಯವ್ಯಯದಲ್ಲಿ ಏನೇನು ಘೋಷಣೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಬಿಎಂಪಿ ಬಜೆಟ್​: ಬೆಂಗಳೂರಿನ ನೂರು ಕಡೆ SHE TOILET, ಪೌರಕಾರ್ಮಿಕ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ, ಇನ್ನೂ ಏನೇನಿದೆ?
ಬಿಬಿಎಂಪಿ ಬಜೆಟ್
TV9 Web
| Edited By: |

Updated on:Feb 29, 2024 | 12:18 PM

Share

ಬೆಂಗಳೂರು, ಫೆಬ್ರವರಿ 29: ಬೆಂಗಳೂರಿನ ನೂರು ಕಡೆಗಳಲ್ಲಿ ಮಹಿಳೆಯರಿಗಾಗಿ ‘ಶಿ ಟಾಯ್ಲೆಟ್ (SHE TOILET)’ಗಳ ನಿರ್ಮಾಣ, ಪೌರಕಾರ್ಮಿಕರ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ. ಅನುದಾನ ಸೇರಿದಂತೆ ಹಲವು ಹೊಸ ಯೋಜನೆಗಳನ್ನು 2024-25ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್​​ನಲ್ಲಿ (BBMP Budget) ಘೋಷಣೆ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಅಯುಕ್ತ ಶಿವಾನಂದ ಕಲ್ಕೆರಿ ಬೆಂಗಳೂರಿನ ಟೌನ್ ಹಾಲ್​ನಲ್ಲಿ ಬಜೆಟ್ ಮಂಡನೆ ಮಾಡಿದರು. ಪೌರಕಾರ್ಮಿಕರಿಗೆ ‘ಶರಣೆ ಸತ್ಯಕ್ಕ’ ಪ್ರಶಸ್ತಿ ನೀಡಲು ಹಾಗೂ ಪ್ರಶಸ್ತಿ ಜೊತೆಗೆ 50 ಸಾವಿರ ರೂ. ಬಹುಮಾನ ನೀಡುವ ಬಗ್ಗೆಯೂ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ 11,307 ಪೌರ ಕಾರ್ಮಿಕರ ನೇರ ನೇಮಕಾತಿ ಮಾಡುವುದಾಗಿ ಬಜೆಟ್​ನಲ್ಲಿ ಭರವಸೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿ ಮೂಡಿಸಲು ‘ಹಸಿರುರಕ್ಷಕ’ ಆ್ಯಪ್, ರಸ್ತೆ ಬದಿ, ಪಾರ್ಕ್, ಕೆರೆ ಅಂಗಳದಲ್ಲಿ 2 ಲಕ್ಷ ಸಸಿ ನೆಡಲು ನಿರ್ಧಿರಿಸಿರುವುದಾಗಿ ಘೋಷಣೆ ಮಾಡಲಾಗಿದೆ. ದಾಸರಹಳ್ಳಿ, ಯಲಹಂಕ ವಲಯದಲ್ಲಿ ಹೈಟೆಕ್ ಸಸ್ಯಕ್ಷೇತ್ರ ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಹೈಟೆಕ್ ಸಸ್ಯಕ್ಷೇತ್ರ ಸ್ಥಾಪನೆಗೆ 14 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಬನ್ನೇರುಘಟ್ಟ ಉದ್ಯಾನ ವನಕ್ಕೆ 1 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಇದಲ್ಲದೆ, ಬೆಂಗಳೂರಿನಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಮೊಬೈಲ್ ಕ್ಯಾಂಟೀನ್ ಸ್ಥಾಪಿಸಲು 70 ಕೋಟಿ ರೂ. ಮೀಸಲು ಇಡುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಬಿಬಿಎಂಪಿ ಬಜೆಟ್​​ನಲ್ಲಿ ಘೋಷಣೆಯಾದ ಇನ್ನಷ್ಟು ಅಂಶ

  • ಬೆಂಗಳೂರು ನಗರದಲ್ಲಿ ವೈಟ್ ಟಾಪಿಂಗ್ ರಸ್ತೆಗೆ 800 ಕೋಟಿ ರೂ.
  • ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಸಂಪರ್ಕ ಮೇಲ್ಸೇತುವೆಗೆ 380 ಕೋಟಿ ರೂ.
  • ಸಂಯುಕ್ತ ಮೆಟ್ರೋ, ರಸ್ತೆ ಮೇಲ್ಸೇತುವೆಗೆ 100 ಕೋಟಿ ರೂ. ಅನುದಾನ.
  • ಘನತ್ಯಾಜ್ಯ ಸಂಗ್ರಹಣೆ, ವಿಂಗಡನೆ, ಭೂಭರ್ತಿ ಪ್ರದೇಶ ಅಭಿವೃದ್ಧಿಗೆ 1 ಸಾವಿರ ಕೋಟಿ ಮೀಸಲು.
  • ಮೊದಲ ಹಂತದಲ್ಲಿ ಬೇಗೂರಿನ ರಮಣಶ್ರೀ ಲೇಔಟ್​​ನಲ್ಲಿ 200 ಮನೆಗಳಿಂದ ಹಸಿ-ಒಣ ತ್ಯಾಜ್ಯ ಸಂಗ್ರಹಿಸಿ ರೀ ಸೈಕ್ಲಿಂಗ್.

ಇದನ್ನೂ ಓದಿ: ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿ ಆರೋಗ್ಯ ಸೇವೆ ಉನ್ನತಿಕರಣಕ್ಕೆ 200 ಕೋಟಿ

  • ಅರಣ್ಯ ತೋಟಗಾರಿಕೆ ಹಾಗೂ ಕೆರೆಗಳ ವಿಭಾಗವನ್ನ ಅರಣ್ಯ, ಪರಿಸರ, ವೈಪರಿತ್ಯ ನಿರ್ವಹಣೆ ಎಂದು ಮರುನಾಮಕರಣ/ ರಸ್ತೆ ಬದಿ ನೆಟ್ಟಿರುವ ಮರಗಳಿಗೆ 224 ಶಾಲೆಗಳ 52,015 ವಿದ್ಯಾರ್ಥಿಗಳ ಟ್ಯಾಗ್.
  • ರಸ್ತೆ ಬದಿ, ಪಾರ್ಕ್,ಕೆರೆ ಅಂಗಳದಲ್ಲಿ 2 ಲಕ್ಷ ಸಸಿ ನೆಡುವಿಕೆ
  • ದಾಸರಹಳ್ಳಿ, ಯಲಹಂಕ ವಲಯದಲ್ಲಿ ಹೊಸ ಹೈಟೆಕ್ ಸಸ್ಯಕ್ಷೇತ್ರ ಸ್ಥಾಪನೆ, ಇದಕ್ಕಾಗಿ 14 ಕೋಟಿ ಅನುದಾನ ಮೀಸಲು.
  • ಅಪಘಾತಕ್ಕೀಡಾದ ವನ್ಯಜೀವಿಗಳ ರಕ್ಷಣೆಗೆ ಬನ್ನೇರುಘಟ್ಟ ಉದ್ಯಾನ ವನಕ್ಕೆ 1 ಕೋಟಿ ರೂ. ಮೀಸಲು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಗೆ 8 ವಿಭಾಗ

ಬಿಬಿಎಂಪಿ ಬಜೆಟ್​ನಲ್ಲಿ ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಗೆ 8 ವಿಭಾಗಗಳನ್ನು ಹೆಸರಿಸಲಾಗಿದೆ. ಅವುಗಳು ಹೀಗಿವೆ;

  • ಸುಗಮ ಸಂಚಾರ
  • ಸ್ವಚ್ಚ ಬೆಂಗಳೂರು
  • ಹಸಿರು ಬೆಂಗಳೂರು
  • ಆರೋಗ್ಯಕರ ಬೆಂಗಳೂರು
  • ಶಿಕ್ಷಣ ಬೆಂಗಳೂರು
  • ಟೆಕ್ ಬೆಂಗಳೂರು
  • ವೈಬ್ರೆಂಟ್ ಬೆಂಗಳೂರು
  • ನೀರಿನ ಭದ್ರತೆಯ ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 29 February 24

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ