AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಕೆಆರ್​ ಸರ್ಕಲ್​ ದುರ್ಘಟನೆ ನಂತರ ಬಿಬಿಎಂಪಿ ಅಲರ್ಟ್: ನಗರದ ಅಂಡರ್​ ಪಾಸ್​ಗಳ ಸರ್ವೆ ನಡೆಸಲು ಸೂಚನೆ

ಬೆಂಗಳೂರು ನಗರದ ಕೆಆರ್ ಸರ್ಕಲ್ ಅಂಡರ್​ಪಾಸ್​ನಲ್ಲಿ ಕಾರು ಮುಳುಗಿ ಯುವತಿ ಸಾವನ್ನಪ್ಪಿದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ, ನಗರದಲ್ಲಿರುವ ಎಲ್ಲಾ ಅಂಡರ್‌ಪಾಸ್‌ಗಳ ಸರ್ವೆಗೆ ಸೂಚನೆ ನೀಡಿದೆ.

Bangalore: ಕೆಆರ್​ ಸರ್ಕಲ್​ ದುರ್ಘಟನೆ ನಂತರ ಬಿಬಿಎಂಪಿ ಅಲರ್ಟ್: ನಗರದ ಅಂಡರ್​ ಪಾಸ್​ಗಳ ಸರ್ವೆ ನಡೆಸಲು ಸೂಚನೆ
ಬೆಂಗಳೂರು ನಗರದ ಅಂಡರ್​ ಪಾಸ್​ಗಳ ಸರ್ವೆ ನಡೆಸಲು ಬಿಬಿಎಂಪಿ ಸೂಚನೆ
Rakesh Nayak Manchi
|

Updated on:May 21, 2023 | 9:15 PM

Share

ಬೆಂಗಳೂರು: ನಗರದ ಕೆಆರ್ ಸರ್ಕಲ್ (KR Circle) ಅಂಡರ್​ಪಾಸ್​ನಲ್ಲಿ ಕಾರು ಮುಳುಗಿ ಯುವತಿ ಸಾವನ್ನಪ್ಪಿದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ (BBMP), ನಗರದಲ್ಲಿರುವ ಎಲ್ಲಾ ಅಂಡರ್‌ಪಾಸ್‌ಗಳ ಸರ್ವೆಗೆ (Survey of Underpasses) ಸೂಚನೆ ನೀಡಿದೆ. ನಗರದ 20 ಪ್ರಮುಖ ಅಂಡರ್​ ಪಾಸ್​ಗಳ ಸ್ಥಿತಿಗತಿ ಬಗ್ಗೆ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಾಳೆ ಮಧ್ಯಾಹ್ನದ ಒಳಗಾಗಿ ನಗರದಲ್ಲಿರುವ ಅಂಡರ್​ಪಾಸ್​ಗಳ ಸರ್ವೆ ನಡೆಸಿ ಅದರ ವರದಿಯನ್ನು ಪಾಲಿಕೆ ಮುಖ್ಯ ಇಂಜಿನಿಯರ್ ಪ್ರಹ್ಲಾದ್​​​ ಅವರಿಗೆ ಕೊಡುವಂತೆ ಪಾಲಿಕೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಅಂಡರ್​ಪಾಸ್ ಡ್ರೈನೇಜ್, ರೋಡ್ ಮೈಂಟೇನೆನ್ಸ್ ವರದಿ ನೀಡುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ: Bangalore Rain: ಬೆಂಗಳೂರು ಮಳೆ ದುರಂತ, ಮಾನವೀಯತೆ ಮರೆತ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ, ಇನ್ಫೋಸಿಸ್ ಉದ್ಯೋಗಿ ಬಲಿ

ಕೆಆರ್​ ಸರ್ಕಲ್​ನಲ್ಲಿ ನಡೆದ ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶೀಲನೆ ನಡೆಸಿದ್ದರು. ನಂತರ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಕರೆ ಮಾಡಿದ ಅವರು ತಮ್ಮ ಸರ್ಕಾರಿ ನಿವಾಸಕ್ಕೆ ಆಹ್ವಾನಿಸಿ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.

ಅನಾಹುತ ತಡೆಯಲು ಫೀಲ್ಡ್​ಗೆ ಇಳಿದ ಬಿಬಿಎಂಪಿ

ಬೆಂಗಳೂರು ಮಹಾನಗರದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಗರದಲ್ಲಿ ಅನಾಹುತ ತಡೆಯಲು ಫೀಲ್ಡ್​ಗೆ ಇಳಿದ ಬಿಬಿಎಂಪಿ, ನಗರದಾದ್ಯಂತ 41 ಫಾರೆಸ್ಟ್ ತಂಡ ನಿಯೋಜಿಸಿದೆ. ಈ ತಂಡಗಳು ಮಳೆ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಲಿವೆ.

Published On - 9:09 pm, Sun, 21 May 23

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌