AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತಾಗಾರಗಳಲ್ಲಿ ವಸೂಲಿ ತಡೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಧ್ಯಪ್ರವೇಶ; ಆದೇಶ ಪಾಲನೆಗೆ ಖಡಕ್ ಸೂಚನೆ

ಚಟ್ಟಕ್ಕೆ ₹ 300, ಅಸ್ಥಿ ಕೊಡುವ ಮಡಿಕೆಗೆ ₹ 250 ನಿಗದಿಪಡಿಸಲಾಗಿದೆ. ಈ ಪೈಕಿ ₹ 350 ಹಣವನ್ನು ಬಿಬಿಎಂಪಿ ನೀಡುತ್ತದೆ. ಮೃತರ ಸಂಬಂಧಿಕರಿಂದ ₹ 250 ಪಡೆಯಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.

ಚಿತಾಗಾರಗಳಲ್ಲಿ ವಸೂಲಿ ತಡೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಧ್ಯಪ್ರವೇಶ; ಆದೇಶ ಪಾಲನೆಗೆ ಖಡಕ್ ಸೂಚನೆ
ಅಂತ್ಯಸಂಸ್ಕಾರಕ್ಕೆ ಕ್ಯೂ
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 15, 2021 | 6:06 PM

Share

ಬೆಂಗಳೂರು: ನಗರದ ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಹಿಂದಿನ ಆದೇಶ ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ. ಚಟ್ಟಕ್ಕೆ ₹ 300, ಅಸ್ಥಿ ಕೊಡುವ ಮಡಿಕೆಗೆ ₹ 250 ನಿಗದಿಪಡಿಸಲಾಗಿದೆ. ಈ ಪೈಕಿ ₹ 350 ಹಣವನ್ನು ಬಿಬಿಎಂಪಿ ನೀಡುತ್ತದೆ. ಮೃತರ ಸಂಬಂಧಿಕರಿಂದ ₹ 250 ಪಡೆಯಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ. ಈ ಕುರಿತು ಬಿಬಿಎಂಪಿ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಅದನ್ನು ಪಾಲಿಸಬೇಕೆಂದು ಗೌರವ್ ಗುಪ್ತಾ ಸ್ಪಷ್ಟವಾಗಿ ಹೇಳಿದ್ದಾರೆ.

ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಹೆಚ್ಚು ಹಣ ಪಡೆಯುತ್ತಿರುವ ಕುರಿತು ನಗರದ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯಸಂಸ್ಕಾರಕ್ಕೆ 25ರಿಂದ 30 ಸಾವಿರ ರೂಪಾಯಿಯಷ್ಟು ಹಣ ಪಡೆದುಕೊಳ್ಳಲಾಗುತ್ತಿದೆ. ಆಸ್ಪತ್ರೆಯಿಂದ ಆಂಬುಲೆನ್ಸ್​ಗಳಲ್ಲಿ ಶವ ತಂದು ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲು ದುಬಾರಿ ಮೊತ್ತ ವಸೂಲಿ ಮಾಡುತ್ತಿದ್ದಾರೆ ಎಂದು ಖಾಸಗಿ ಆಂಬುಲೆನ್ಸ್​ಗಳ ವಿರುದ್ಧ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ.

ಚಿತಾಗಾರದಲ್ಲಿ ಕೊವಿಡ್ ಮೃತದೇಹಗಳ ಕ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ ನಿನ್ನೆ ಸುಮಾರು 15 ಕೊವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಅವರೆಲ್ಲರ ಶವಗಳನ್ನು ಯಲಹಂಕ ಚಿತಾಗಾರಕ್ಕೆ ಕಳುಹಿಸಿದ್ದರು. ಒಂದೇ ಚಿತಾಗಾರಕ್ಕೆ ಕಳುಹಿಸಿದ್ದರಿಂದ ಹೀಗಾಗಿದೆ. ಎಲ್ಲ ಚಿತಾಗಾರಗಳಲ್ಲೂ ಜಂಟಿ ಆಯುಕ್ತರಿಂದ ಪರಿವೀಕ್ಷಣೆ ಮಾಡಿಸಲಾಗುತ್ತಿದೆ. ಈ ಕುರಿತು ಬಿಬಿಎಂಪಿ ಆಯುಕ್ತರ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಸೂಕ್ತ ನಿರ್ಣಯಗಳನ್ನ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಚಿವರ ತಿಳಿಸಿದ್ದಾರೆ.

ಹೋಟೆಲ್​ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಬೆಂಗಳೂರಿನ ಖಾಸಗಿ ಹೋಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ಕಾರ್ಪೋರೇಟ್ ಆಸ್ಪತ್ರೆಗಳೇ ಕೋವಿಡ್ ಕೇರ್ ಸೆಂಟರ್​ನ ಜವಾಬ್ದಾರಿ ವಹಿಸಿಕೊಳ್ಳುತ್ತವೆ. ಗಂಭೀರ ಸ್ವರೂಪದ ರೋಗಿಗಳನ್ನು ಆಸ್ಪತ್ರೆಯಲ್ಲಿ ದಾಖಲು‌ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ 2ನೇ ಅಲೆ ಭಾರತದಲ್ಲಿ ಇಂದು 24 ಗಂಟೆಯಲ್ಲಿ (ಬೆಳಿಗ್ಗೆ 9 ಗಂಟೆ ವೇಳೆಗೆ) 2,00,739 ಜನರಿಗೆ ಕೊರೊನಾ ದೃಢಪಟ್ಟಿತ್ತು. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 1,038 ಜನರು ಬಲಿಯಾಗಿದ್ದಾರೆ. ಕೊರೊನಾದಿಂದ ದೇಶದಲ್ಲಿ ಈವರೆಗೆ 1,73,123 ಜನರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 1,24,29,564 ಜನರು ಗುಣಮುಖರಾಗಿದ್ದಾರೆ. 14,71,877 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ. 11,44,93,238 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

(BBMP Chief Commissioner intervene to prevent taking extra money crematorium)

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಚಿತಾಗಾರದ ಎದುರು ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕ್ಯೂ

ಇದನ್ನೂ ಓದಿ: ಕೊರೊನಾ ಮಾರಿಗೆ ಹೆದರಿ ಮುಂಬೈ ತೊರೆದ ಮುಕೇಶ್​ ಅಂಬಾನಿ ಕುಟುಂಬ ಉಳಿದಿಕೊಂಡಿರುವುದು ಎಲ್ಲಿ?

Published On - 6:02 pm, Thu, 15 April 21

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?