AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗುತ್ತಿಗೆದಾರರಿಂದ ದೂರು: ರಾಜ್ಯಪಾಲರನ್ನು ಭೇಟಿಯಾದ ಬಿಬಿಎಂಪಿ ಮುಖ್ಯ ಆಯುಕ್ತ

ಕಾಮಗಾರಿ ಬಿಲ್ ಪಾವತಿ ವಿಳಂಬ ವಿಚಾರವಾಗಿ ಬಿಬಿಎಂಪಿ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ವಿಚಾರವಾಗಿ ಆಹ್ವಾನ ಬಂದ ಹಿನ್ನೆಲೆ ರಾಜ್ಯಪಾಲರನ್ನು ಭೇಟಿಯಾದ ಆಯುಕ್ತ ತುಷಾರ್ ಗಿರಿನಾಥ್, ಬಾಕಿ ಬಿಲ್​ಗಳ ಮಾಹಿತಿ ನೀಡಿದರು.

ಬಿಬಿಎಂಪಿ ಗುತ್ತಿಗೆದಾರರಿಂದ ದೂರು: ರಾಜ್ಯಪಾಲರನ್ನು ಭೇಟಿಯಾದ ಬಿಬಿಎಂಪಿ ಮುಖ್ಯ ಆಯುಕ್ತ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
Shivaraj
| Edited By: |

Updated on: Aug 10, 2023 | 9:55 PM

Share

ಬೆಂಗಳೂರು, ಆಗಸ್ಟ್ 10: ಕಾಮಗಾರಿ ಬಿಲ್ ಪಾವತಿ ವಿಳಂಬ ವಿಚಾರವಾಗಿ ಬಿಬಿಎಂಪಿ (BBMP) ಗುತ್ತಿಗೆದಾರರು ನೀಡಿದ ದೂರಿನ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾದ ಆಯುಕ್ತ ತುಷಾರ್ ಗಿರಿನಾಥ್ (Tushar Girinath), ಬಾಕಿ ಇರುವ ಬಿಲ್​ಗಳ ಮಾಹಿತಿ ನೀಡಿದರು.

ಸರ್ಕಾರದ ವ್ಯಾಪ್ತಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಸಂಪೂರ್ಣ ಕಾಮಗಾರಿಗಳ ಬಗ್ಗೆ ಬಿಬಿಎಂಪಿ ಆಯುಕ್ತರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಸರ್ಕಾರಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 5000 ಸಾವಿರ ಕೋಟಿ ಬಿಲ್​ ಬಾಕಿ ಇದ್ದು, ಸದ್ಯ 670 ಕೋಟಿ ಬಿಬಿಎಂಪಿ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದೆ.

ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ

ಬಿಲ್ ಪಾವತಿ ದೂರಿನ ಸಂಬಂಧ ಬಿಬಿಎಂಪಿ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಸ್ಪಷ್ಟನೆ ಪಡೆಯಲು ರಾಜ್ಯಪಾಲರು ಮುಂದಾಗಿದ್ದರು. ಅದರಂತೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಭೇಟಿಗೆ ಸೂಚನೆ ನೀಡಿದ್ದರು. ಅಲ್ಲದೆ, ಕಮಿಷನ್ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಜೊತೆ ಚರ್ಚೆಗೆ ಮುಂದಾಗಿದ್ದಾರೆ.

ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ಸಂಬಂಧ ಗುತ್ತಿಗೆದಾರರಿಗೆ ಬಿಲ್ ಪಾವತಿ ಬಾಕಿ ಇರಿಸಲಾಗಿದೆ. ಇದನ್ನು ಬಿಡುಗಡೆ ಮಾಡುವಂತೆ ಗುತ್ತಿಗೆದಾರರು ಆಗ್ರಹಿಸಿದ್ದಲ್ಲದೆ, ರಾಜ್ಯಪಾಲರಿಗೆ ದೂರು ಕೂಡ ನೀಡಿದ್ದರು. ಡಿಕೆ ಶಿವಕುಮಾರ್ ಅವರು 10-15 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘವು ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ