AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಕೊರೊನಾ: ಬೆಂಗಳೂರಿಗೂ ಕಾಲಿಟ್ಟಿದ್ದ ವ್ಯಕ್ತಿ ಬಗ್ಗೆ ಸ್ಪಷ್ಟನೆ ಕೊಟ್ಟ ಬಿಬಿಎಂಪಿ ಕಮಿಷನರ್

ಚೀನಾದಿಂದ ಬೆಂಗಳೂರು ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್​​ ಬಂದಿದೆ ಎಂಬ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ.

ಚೀನಾದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಕೊರೊನಾ: ಬೆಂಗಳೂರಿಗೂ ಕಾಲಿಟ್ಟಿದ್ದ ವ್ಯಕ್ತಿ ಬಗ್ಗೆ ಸ್ಪಷ್ಟನೆ ಕೊಟ್ಟ ಬಿಬಿಎಂಪಿ ಕಮಿಷನರ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 26, 2022 | 3:00 PM

Share

ಬೆಂಗಳೂರು: ದೇಶದಲ್ಲಿ ಕೊರೊನಾ (coronavirus) ರೂಪಾಂತರಿ ಬಿಎಫ್​7 ಪತ್ತೆ ಹಿನ್ನೆಲೆ ಬೆಂಗಳೂರಿಗೆ ವಿದೇಶಗಳಿಂದ ಬರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಆದರೂ ಕೂಡ ಚೀನಾ(China)ದಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್​​ ಬಂದಿದೆ ಎನ್ನಲಾಗುತ್ತಿದ್ದು, ಇದು ರಾಜ್ಯದ ಜನತೆಯಲ್ಲಿ ಆತಂಕಕ್ಕೆ ಎಡೆಮಾಡಿದೆ. ಆದರೆ ಈ ಕುರಿತಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ( Tushar Girinath) ಅವರು ಸ್ಪಷ್ಟನೆ ನೀಡಿದ್ದಾರೆ. ಇಂದು (ಡಿ. 26) ಮಾಧ್ಯಮದವರೊಂದಿಗೆ ಮಾತನಾಡಿ, ಆತ ಚೀನಾದಿಂದ ಬೆಂಗಳೂರಿನ ಒಳಗೆ ಬಂದಿಲ್ಲ. ಆತ ಏರ್​​ಪೋರ್ಟ್​​ಗೆ ಬಂದು ಅಲ್ಲಿಂದ ಆಗ್ರಾಕ್ಕೆ ಹೋಗಿದ್ದಾನೆ. ಏರ್​​ಪೋರ್ಟ್​​ನಿಂದಲೂ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದೇವೆ. ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕಚಂದ್ರ ಜತೆ ಚರ್ಚಿಸುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿಗೆ ಪ್ರತ್ಯೇಕ ರೂಲ್ಸಾ ಅಥವಾ ಯಥಾಸ್ಥಿತಿನಾ? 

ರಾಜ್ಯ ಸರ್ಕಾರ ಕೋವಿಡ್ ಸಭೆ ಇಂದು (ಡಿ. 26) ನಡೆದಿದ್ದು, ಸಭೆ ಬಳಿಕ ಬಿಬಿಎಂಪಿ ಚಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದು, ನಾವು ಸಭೆಯಲ್ಲಿ ಪಾಲಿಕೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ವಿವರಿಸಿದ್ದೇವೆ. 1 ಲಕ್ಷ ಬೂಸ್ಟರ್ ಡೋಸ್ ನೀಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ನಗರದ 30 ಬೆಡ್​ಗಳಿರುವ 418 ಖಾಸಗಿ ಆಸ್ಪತ್ರೆ ಪಟ್ಟಿ ಮಾಡಿದ್ದೇವೆ. ಈ ಬಗ್ಗೆ ಈಗಾಗಲೇ ಫನಾ‌ ಸಂಘಟನೆ ಜೊತೆ ಮಾತನಾಡಿದ್ದೇವೆ. ನಾಳೆಯಿಂದ ಆಕ್ಸಿಜನ್ ಪ್ರಿಕಾಷನ್ ಬಗ್ಗೆ ಮಾಕ್ ಡ್ರಿಲ್ ಮಾಡಿ ಆಕ್ಸಿಜನ್ ರೆಡಿ ಇಟ್ಟುಕೊಳ್ಳುತ್ತೇವೆ. TAC ಕೊಟ್ಟ ಸಲಹೆ ಗಂಭೀರವಾಗಿ ತೆಗೆದುಕೊಂಡು ಆ ಪ್ರಕಾರ ಕೆಲಸ ಆರಂಭಿಸುತ್ತೇವೆ.

ನ್ಯೂ ಇಯರ್ ಸೆಲೆಬ್ರೇಷನ್ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದೆ. ಆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಗೈಡ್ ಲೈನ್ಸ್ ಪ್ರಕಟ ಮಾಡುತ್ತೆ. ಮಾಸ್ಕ್ ಹಾಕ್ಕೋಬೇಕು ಅನ್ನೋದು ಎಲ್ಲರ ಅಭಿಪ್ರಾಯ. ಬೂಸ್ಟರ್ ಡೋಸ್ ಪಡೆಯಲು ಜನರು ಮುಂದೆ ಬರಬೇಕು. ಇನ್ನೂ ಬೆಂಗಳೂರಲ್ಲಿ 60% ಮಂದಿ ಬೂಸ್ಟರ್ ಡೋಸ್ ಪಡೆಯೋದು ಬಾಕಿ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: Corona Meet: ಕರ್ನಾಟಕದಲ್ಲಿ ಕೊರೊನಾ ನಿರ್ವಹಣೆಗೆ ಇಂದು ಮಾರ್ಗಸೂಚಿ ಬಿಡುಗಡೆ ಸಾಧ್ಯತೆ, ರಾಜ್ಯ ಸರ್ಕಾರದಿಂದ ಮಹತ್ವದ ಸಭೆ

ಟೆಸ್ಟಿಂಗ್ ವಿಚಾರಕ್ಕೆ ಪ್ರತಿಕ್ರಿಯೆ  

ಪ್ರತಿನಿತ್ಯ ನಗರದಲ್ಲಿ ಟೆಸ್ಟಿಂಗ್ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಟಿಎಸಿ ಸರ್ಕಾರಕ್ಕೆ ವರದಿ ನೀಡಿದೆ. ಟಾರ್ಗೆಟ್ ಎಷ್ಟು ಕೊಡುತ್ತಾರೆ ಅಂತ ನೋಡುತ್ತೇವೆ. ಪ್ರತಿನಿತ್ಯ‌ ನಗರದಲ್ಲಿ ಟೆಸ್ಟಿಂಗ್ 500 ಒಳಗೆ ಆಗುತ್ತಿದೆ. ಪ್ರೈವೇಟ್ ಲ್ಯಾಬ್‌ಗಳಲ್ಲಿ ರಿಪೋರ್ಟ್ ರೆಡಿ ಆಗುತ್ತಿದೆ ಎಂದು ಹೇಳಿದರು.

ಬೆಂಗಳೂರಿಗೆ ಭೇಟಿ ನೀಡಿದ ಪ್ರಯಾಣಿಕರ ಮಾಹಿತಿ

ಇನ್ನು ಡಿಸೆಂಬರ್ 24ರ ತನಕ ರಾಜಧಾನಿ ಬೆಂಗಳೂರು ಭೇಟಿ ಕೊಟ್ಟದ್ದು, ಒಟ್ಟು 2867 ಪ್ರಯಾಣಿಕರು. ವಿವಿಧ ದೇಶಗಳಿಂದ ಆಗಮಿಸಿರುವ 2867 ಪ್ರಯಾಣಿಕರು. ಇವರ ಪೈಕಿ ಒಟ್ಟು 12 ಪ್ರಯಾಣಿಕರಿಗೆ ಕೊವಿಡ್ ಪಾಸಿಟಿವ್ ಬಂದಿದೆ. 12 ಸೋಂಕಿತರ ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸ್​ಗೆ ರವಾನೆ ಮಾಡಲಾಗಿದೆ.

ಸಿಡ್ನಿ-1, ಹಾಂಕಾಂಗ್ -1, ಫ್ರ್ಯಾಂಕ್ ಫ್ರಡ್ – 1, ಲಂಡನ್ -1, ದುಬೈ -3, ಸಿಂಗಾಪುರ -2, ಥೈಲ್ಯಾಂಡ್ -1, ಮಾಲ್ಡೀವ್ಸ್ – 1, ಅಬುದಬಿ-1 ಈ ದೇಶಗಳಿಗೆ ಹೋಗಿ ಬಂದವರಲ್ಲಿ ಕೊರೊನಾ ಪತ್ತೆ ಆಗಿದೆ.

ಇದನ್ನೂ ಓದಿ: Karnataka Covid Guidelines: ಕೊವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ವಿಶೇಷ ಸಭೆ; ಹೊಸ ವರ್ಷಾಚರಣೆಗೆ 8 ನಿಯಮಗಳು ಶಿಫಾರಸು

ಹೈರಿಸ್ಕ್​​ ದೇಶದಿಂದ ಬಂದಿದ್ದ 12 ಜನರಿಗೆ ಕೊರೊನಾ ಪಾಸಿಟಿವ್​

ಚೀನಾದಿಂದ ಆಗಮಿಸಿರುವ ವ್ಯಕ್ತಿ ಸೇರಿದಂತೆ 12 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಳೆದ ಮೂರು ದಿನಗಳಲ್ಲಿ 12 ಜನರಿಗೆ ಕೊರೋನಾ ಪಾಸಿಟಿವ್​ ಕಂಡುಬಂದಿದೆ. ಕೋವಿಡ್ ಸೋಂಕು ಲಕ್ಷಣ ಹಿನ್ನಲೆ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ  12 ಪ್ರಯಾಣಿಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸದ್ಯ 6 ಸೋಂಕಿತರ ಪೈಕಿ ಐವರು ಹೋಮ್ ಕ್ವಾರಂಟೈನ್​ನಲ್ಲಿದ್ದು, ಉಳಿದ ಆರು ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲಾ ಸೋಂಕಿತರ ಜಿನೊಮಿಕ್​ ಸೀಕ್ವೆನ್ಸ್​​ ವರದಿಗೆ ಆರೋಗ್ಯ ಇಲಾಖೆ ಕಾಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್